ದಿಶಾ ಸಮಿತಿ ಸಭೆ ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಟಾನ ಸಂದರ್ಭದಲ್ಲಿ ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಟಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಗ್ರಾಮ ಜ್ಯೋತಿ ಯೋಜನೆ: ದೀನ ದಯಾಳ್ ಉಪಾಧ್ಯಾಯ್ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದ್ದೀಕರಣ, ಫೀಡರ್ ಬೇರ್ಪಡಿಸುವಿಕೆ ...
Read More »ರಾಜ್ಯ
ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಲಿ
ಶಿವಮೊಗ್ಗ: ಉಪ ಚುನಾವಣಾ ಫಲಿತಾಂಶದ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳುವ ಮೂಲಕ ಜನರ ದಿಕ್ಕುತಪ್ಪಿಸಿದ್ದ ಸಿದ್ದರಾಮಯ್ಯ ಕೂಡಲೇ ರಾಜ್ಯದ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಾಯಕರೇ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ. ಕರ್ನಾಟಕದ ಶಿರಾ ಮತ್ತು ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸಿದ್ದರಾಮಯ್ಯ ...
Read More »ಶರಾವತಿ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಎಸ್.ಯಡಿಯೂರಪ್ಪ
ಶಿವಮೊಗ್ಗ : ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯಯುತವಾದ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಶಿವಮೊಗ್ಗ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೂಕ್ರ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆಯನ್ನು ನಡೆಸಲಾಗಿದೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶರಾವತಿ ಸಂತ್ರಸ್ತರ ಸಮಸ್ಯೆ ಆದಷ್ಟು ಬೇಗನೇ ಪರಿಹರಿಸುವ ನಿಟ್ಟಿನಲ್ಲಿ ಶಾಸಕರೊಂದಿಗೆ ಸಹ ಸಭೆ ನಡೆಸಲಾಗಿದ್ದು, ಆದಷ್ಟು ಬೇಗನೆ ಸಮಸ್ಯೆಗೆ ಪರಿಹಾರ ಒದಗಿಸಲು ಕ್ರಮ ...
Read More »ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ನವೆಂಬರ್ 5ರಂದು ಹೆದ್ದಾರಿ ಬಂದ್
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮೆಕ್ಕೆಜೋಳ ಪ್ರಮುಖ ಬೆಳೆಯಾಗಿದ್ದು 70 ಸಾವಿರ ಪ್ರದೇಶಗಳಲ್ಲಿ ರೈತರು ಬೆಳೆಯುತ್ತಿದ್ದಾರೆ. ಆದರೆ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಖರೀದಿಸಬೇಕು. ಪಂಜಾಬ್ ಸರ್ಕಾರದಂತೆ ರಾಜ್ಯ ಸರ್ಕಾರವು ಕೃಷಿ ಉತ್ಪನ್ನಗಳನ್ನು MSP ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮತ್ತು ಖರೀದಿ ಮಾಡುವುದು ಅಪರಾಧವೆಂದು ಘೋಷಿಸಬೇಕು. ಕೇರಳ ಸರ್ಕಾರದಂತೆ ರಾಜ್ಯ ಸರ್ಕಾರವು ಸಹ ತರಕಾರಿ ಬೆಳೆಗಳಿಗೆ ಬೆಲೆ ನಿಗದಿ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದು ವಾಪಸ್ ...
Read More »ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಹಿಂದೆಂದೂ ಆಗದಷ್ಟು ಮತದಾನವಾಗಿದೆ : ಕೆಎಸ್ ಈಶ್ವರಪ್ಪ
ಶಿವಮೊಗ್ಗ : ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಎರಡು ಕ್ಷೇತ್ರಗಳಲ್ಲಿ ಚುನಾವಣೆಯನ್ನು ಬಿಜೆಪಿ ಸಂಘಟನಾತ್ಮಕವಾಗಿ ಮಾಡಿದೆ. ನಾಲ್ಕು ವಿಧಾನಪರಿಷತ್ ಚುನಾವಣೆಯಲ್ಲಿ ಸಹ ಹಿಂದೆಂದೂ ಆಗದಷ್ಟು ಮತದಾನವಾಗಿದೆ. ನಮ್ಮ ಸಂಘಟನೆಯ ಪ್ರಯತ್ನದಿಂದ ಈ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆಲುವು ಸಾಧಿಸುತ್ತವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನವೆಂಬರ್ 5ರಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದೇವೆ. ಅಶೋಕ್ ಗಸ್ತಿ ಅವರ ಕೆಲಸವನ್ನು ಗಮನಿಸಿ ಅವರನ್ನು ರಾಜ್ಯಸಭೆಗೆ ...
Read More »ಏಳು ತಿಂಗಳ ಬಳಿಕ ತವರಿಗೆ ಆಗಮಿಸಿದ ಸಿ.ಎಂ
ಶಿವಮೊಗ್ಗ: ಬರೋಬ್ಬರಿ ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತನ್ನ ತವರು ಶಿಕಾರಿಪುರಕ್ಕೆ ಆಗಮಿಸಿದ್ದಾರೆ. ಇಂದು ಮಧ್ಯಾಹ್ನ ಹೆಲಿಕಾಫ್ಟರ್ ಮೂಲಕ ಶಿಕಾರಿಪುರಕ್ಕೆ ಸಿಎಂ ಆಗಮಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ಪ್ರವಾಹ ಉಂಟಾಗಿದೆ. ಕೂಡಲೇ ಮಳೆ ನಿಂತು ಪ್ರವಾಹ ತಗ್ಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. ನೆರೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೊಡುವ ಕಾರ್ಯ ಈಗಾಗಲೇ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಕೆಲಸ ಮಾಡುತ್ತೇವೆ ಎಂದು ...
Read More »ಉಪಚುನಾವಣೆಯಲ್ಲಿ ಬಿಜೆಪಿಯದ್ದೇ ಗೆಲುವು: ಯಡಿಯೂರಪ್ಪ
ಶಿವಮೊಗ್ಗ: ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲೂ ಬಿಜೆಪಿಗೆ ಉತ್ತಮ ವಾತಾವರಣವಿದೆ. ಮತದಾರರು ಬಿಜೆಪಿ ಪರವಾಗಿದ್ದಾರೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಠೇವಣಿಯನ್ನು ಪಡೆಯಲು ಸಾಧ್ಯವಿಲ್ಲ ಎಂದುಕೊಂಡಿದ್ದೆವು. ಆದರೆ ಇದೀಗ ಶಿರಾ ಕ್ಷೇತ್ರದಲ್ಲಿಯೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದೇವೆ. ಕಳೆದ ಮೂರು ದಿನದಿಂದ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.
Read More »“ಅರೆಕಾ ಶಾಂಪು” ನಿವೇದನ್ ನಿಂಪೆಯವರ ಮತ್ತೊಂದು ಕೊಡುಗೆ.
ಶಿವಮೊಗ್ಗ : ಅರೇಕಾ ಟೀ ಉತ್ಪಾದಿಸುವ ಮೂಲಕ ಪ್ರಖ್ಯಾತರಾಗಿದ್ದ ಮಲೆನಾಡಿನ ಯುವಕ ನಿವೇದನ್ ನೆಂಪೆ ಯವರು ಈ ಬಾರಿ ಮತ್ತೊಂದು ಅಡಿಕೆಯ ಮೌಲ್ಯದಾರಿತ ಉತ್ಪನ್ನ ಅರೆಕಾ ಶಾಂಪು ತಯಾರಿಸಿದ್ದು, ಇದು ಅಡಕೆ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಅರೆಕಾ ಶಾಂಪು ಡಿಸೆಂಬರ್ ತಿಂಗಳಿನಿಂದ ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಪ್ರತಿ ಅರೇಕಾ ಶಂಪೂ ಪ್ಯಾಕೆಟ್ ಗೆ ಎರಡು ರೂಪಾಯಿ ಬೆಲೆ ನಿಗದಿಪಡಿಸಲು ಉದ್ದೇಶಿಸಲಾಗಿದೆ. ಅಡಕೆ ಕೇವಲ ಗುಟ್ಕಾ ತಯಾರಿಕೆಗೆ ಮಾತ್ರ ಸೀಮಿತವಲ್ಲ. ಅಡಕೆಯಿಂದ ಆರೋಗ್ಯವರ್ಧಕ ಔಷಧಿಯುಕ್ತ ಉತ್ಪನ್ನಗಳನ್ನು ತಯಾರಿಸಬಹುದು ಎಂಬ ಮಹತ್ವಾಕಾಂಕ್ಷೆಯಿಂದ ಈ ಆರೆಕಾ ಶಾಂಪು ...
Read More »ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ
ಶಿವಮೊಗ್ಗ : ಗರ್ಬಿಣಿ, ಬಾಣಂತಿಯರಿಗೆ, ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಒದಗಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೇಂದ್ರಸರ್ಕಾರ ಡಿಜಿಟಲ್ ಇಂಡಿಯಾದ ಪೋಷಣ್ ಅಭಿಯಾನದ ಅಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಲಾಗಿತ್ತಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 2439 ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಮೊಬೈಲ್ ವಿತರಿಸಲಾಯಿತು. ಪೇಪರ್ಲೆಸ್ ಆಫೀಸ್ ಕಾನ್ಸೆಪ್ಟ್ ಅಡಿ ಮೊಬೈಲ್ ವಿತರಿಸಲಾಗುತ್ತಿದೆ. ಕಾಮನ್ ಅಪ್ಲಿಕೇಷನ್ ಸಿಸ್ಟಮ್ ಹಾಗೂ ಸ್ನೇಹ ಆ್ಯಪ್ ಅಳವಡಿಸಿಕೊಂಡು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಈ ಮೊಬೈಲ್ ಅನುಕೂಲವಾಗಲಿದೆ. ಸಂಸದ ಬಿ.ವೈ.ರಾಘವೇಂದ್ರ ಹಾಗೂ ಜಿಲ್ಲಾ ಉಸ್ತುವಾರಿ ...
Read More »ರಾಜ್ಯ ಕಾಂಗ್ರೆಸ್ ಗೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು
ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ...
Read More »
C News TV Kannada News Online in cnewstv