Breaking News

ರಾಜ್ಯ

ಸರ್ಕಾರದಿಂದ ಹೋಂ ಐಸೋಲೇಷನ್‍ನ ಮಾರ್ಗಸೂಚಿ ಪ್ರಕಟ : ಇನ್ಮುಂದೆ ರೋಗಿಗಳಿಗೆ ಮನೆಯಲ್ಲಿಯೇ ಕೊರೊನಾ ಚಿಕಿತ್ಸೆ

  ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಒಳಗಾದವರಿಗೆ ಇನ್ಮುಂದೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸರ್ಕಾರ ಹೋಂ ಐಸೋಲೇಷನ್ ಮಾರ್ಗಸೂಚಿಯನ್ನ ಪ್ರಕಟಿಸಿದೆ.. ಸೋಂಕು ಗುಣಲಕ್ಷಣ ಇಲ್ಲದವರು, ಕಡಿಮೆ ಗುಣಲಕ್ಷಣ ಇದ್ದವರಿಗೆ ಹೋಂ ಐಸೊಲೇಷನ್‍ಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹಾಗೂ ಯಾವುದೇ ಮಾರಕ ರೋಗ ಇಲ್ಲದವರಿಗೆ ಹೋಂ ಐಸೊಲೇಷನ್ ಮಾಡಲಾಗುತ್ತದೆ. ಹೋಂ ...

Read More »

ಇಂದು ಶಿವಮೊಗ್ಗದಲ್ಲಿ ಹತ್ತು ಕರೋನಾ ಪ್ರಕರಣ ಪತ್ತೆ, ಸ್ವಾಮೀಜಿಗೂ ಬಿಡದೆ ಕಾಡಿದ ಕರೋನಾ.

  ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮಠದ ಸ್ವಾಮೀಜಿ ಸೇರಿದಂತೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹತ್ತು ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಬಂದಿದ್ದ ಎಂಟು ಜನರಲ್ಲಿ ಕಿಲ್ಲರ್ ಕರೋನಾ ವೈರಸ್ ಕಾಣಿಸಿಕೊಂಡಿದೆ. ಇದಲ್ಲದೆ ಇನ್ನೋರ್ವ ವ್ಯಕ್ತಿಯಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿದ್ದು, ಇವರು ತೀವ್ರ ಉಸಿರಾಟದ ತೊಂದರೆ(SARI) ಅನುಭವಿಸುತ್ತಿದ್ದಾರೆ. 25 ವರ್ಷದ ಮಹಿಳೆಯಲ್ಲಿಯೂ ಕರೋನಾ ಕಾಣಿಸಿಕೊಂಡಿದ್ದು, ಇವರಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂದು ಜಿಲ್ಲಾಡಳಿತ ಪತ್ತೆಹಚ್ಚಲಾರಂಭಿಸಿದೆ. ಸ್ವಾಮೀಜಿಗೆ ಎಲ್ಲಿಂದ ಕರೋನಾ ಸೋಂಕು ತಗುಲಿತು ಎಂಬುದು ಜಿಲ್ಲಾಡಳಿತಕ್ಕೆ ಯಕ್ಷ ಪ್ರಶ್ನೆಯಾಗಿ ಪರಿಣಮಿಸಿದೆ. ಇಂದು ಕರೋನಾ ಸೋಂಕಿಗೆ ತುತ್ತಾದ ...

Read More »

ಜೂನ್ 1ರಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಆರಂಭ.

ಶಿವಮೊಗ್ಗ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಜೂನ್ 1 ರಿಂದ ಆರಂಭಗೊಳ್ಳಲಿದೆ‌. ಕರೋನಾ ಆತಂಕದಿಂದಾಗಿ ಕಳೆದ ಎರಡು ತಿಂಗಳಿನಿಂದ ಭಕ್ತರಿಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ನಿರ್ಬಂಧಿಸಲಾಗಿತ್ತು.‌ ಇದೀಗ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಭಾಗ್ಯವನ್ನು ಭಕ್ತರಿಗೆ ಕರುಣಿಸಲು ದೇವಸ್ಥಾನದ ಆಡಳಿತ ಮಂಡಳಿ ನಿರ್ಧರಿಸಿದೆ. ಹೀಗಾಗಿ ಜೂನ್ 1 ರಿಂದ ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ತೆರೆಯಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ಆದರೆ ದೇವಸ್ಥಾನದ ಆವರಣದಲ್ಲಿ ನಿಯಮಿತವಾಗಿ ಸ್ಯಾನಿಟೈನೇಷನ್ ಮಾಡುವ ...

Read More »

ಶಿವಮೊಗ್ಗದಲ್ಲಿ ಸೆಕ್ಟರ್ ವೈಸ್ ಲಾಕ್ ಡೌನ್

  ಶಿವಮೊಗ್ಗ : ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ಅದರೂ ಕೊರೊನಾ ವೈರಸ್ ಕಾಳ್ಗಿಚ್ಚಿನಂತೆ ಹಬ್ಬುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ಶಿವಮೊಗ್ಗದಲ್ಲಿ ಕೈಗೊಳ್ಳಲಾಗುತ್ತಿದೆ . ಶಿವಮೊಗ್ಗ ನಗರದಲ್ಲಿ ಜನರು ಒಂದು ಏರಿಯಾ ಬಿಟ್ಟು ಮತ್ತೊಂದು ಏರಿಯಾಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಪೊಲೀಸರು ಸೆಕ್ಟರ್ ವೈಸ್ ಲಾಕ್ ಡೌನ್ ಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಮುಖ ರಸ್ತೆಗಳು ಹಾಗೂ ಸರ್ಕಲ್ ಗಳನ್ನು ಬ್ಯಾರೀಕೇಡ್ ಕಟ್ಟಿ ಲಾಕ್ ಮಾಡಲಾಗಿದೆ. ಈ ಮೂಲಕ ...

Read More »

8000 ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆಗೆ ಸಿದ್ಧತೆ

  ಶಿವಮೊಗ್ಗ: ಕೊರೋನ ವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾಗಿರುವ ಸಾಮಾನ್ಯ ಮತ್ತು ಮಧ್ಯಮವರ್ಗದ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ತಿಳಿಸಿದರು. ಶಿವಮೊಗ್ಗ ಸಮೀಪದ ಗೋಂದಿಚಟ್ನಳ್ಳಿಯ ರೈಸ್ ಮಿಲ್ ನಲ್ಲಿ ವಿತರಣೆಗಾಗಿ ಪ್ಯಾಕ್ ಮಾಡಲಾಗುತ್ತಿದ್ದ ಗೋದಾಮಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈ ಆಹಾರದ ಕಿಟ್ ಗಳನ್ನು ...

Read More »

ಜಿಲ್ಲೆಯಲ್ಲಿ ಇಂದಿನಿಂದ ಕೋಳಿ, ಮೊಟ್ಟೆ ಮಾರಾಟ ಪುನಾರಂಭ : ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಹಕ್ಕಿಜ್ವರದ ಕಾರಣದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಬಂಧಿಸಲಾಗಿದ್ದ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು ಇಂದಿನಿಂದ ಪುನಾರಂಭಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೆರೆಯ ಜಿಲ್ಲೆಯಲ್ಲಿ ಹಕ್ಕಿಜ್ವರದ ಹೊಸ ಪ್ರಕರಣಗಳು ವರದಿಯಾಗದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟವನ್ನು ಇಂದಿನಿಂದ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಇಂದಿನಿಂದ ಕೊಳೆಗೇರಿ ನಿವಾಸಿಗಳು ಸೇರಿದಂತೆ ಬಡವರಿಗೆ ಪ್ರತಿ ಕುಟುಂಬಕ್ಕೆ ...

Read More »

ಕರೋನಾ ಹಿನ್ನೆಲೆ ಕಾರ್ಕಳದಿಂದ ಕೊಪ್ಪಳಕ್ಕೆ ಕಾಲ್ನಡಿಗೆಯಲ್ಲೇ ಊರಿಗೆ ಹೊರಟ ದಂಪತಿ

ಶಿವಮೊಗ್ಗ: ಕರೋನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ದಂಪತಿ ತಮ್ಮೂರಿಗೆ ನೂರಾರು ಕಿಲೋಮೀಟರ್ ಕಾಲ್ನಡಿಗೆಯಲ್ಲೇ ತೆರಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ದಂಪತಿ ತಿರುಪತಿ ಹಾಗೂ ಚಂದವ್ವ ಕೆಲಸಕ್ಕೆಂದು ಕೊಪ್ಪಳ ಜಿಲ್ಲೆಯಿಂದ ಕಾರ್ಕಳಕ್ಕೆ ತೆರಳಿದ್ದರು. ಅಲ್ಲಿ ಒಂದು ವಾರ ಕೆಲಸವನ್ನೂ ಮಾಡಿದ್ದರು. ಆದರೆ ಕರೋನಾ ಭೀತಿ ಹಿನ್ನೆಲೆಯಲ್ಲಿ ಇಡೀ ಭಾರತವನ್ನೇ ಲಾಕ್ ಡೌನ್ ಮಾಡಲಾಯಿತು. ಆದರೆ ಈ ದಂಪತಿ ಮತ್ತೆ ಕೆಲಸ ಆರಂಭಗೊಳ್ಳಬಹುದೇನೋ ಎಂಬ ನಿರೀಕ್ಷೆಯಲ್ಲಿ ಅಲ್ಲೇ ಒಂದು ವಾರ ಕಳೆದಿದ್ದಾರೆ. ಅಷ್ಟರಲ್ಲಾಗಲೇ ಅವರು ದುಡಿದ ಹಣವೆಲ್ಲಾ ಖಾಲಿಯಾಗಿದೆ. ಆಗ ...

Read More »

ಕರೋನಾ ತಡೆಗಾಗಿ ಕಾಶಿ ಶ್ರೀಗಳಿಂದ ದೇಣಿಗೆ

ಶಿವಮೊಗ್ಗ: ಕರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಕರೋನಾ ಎಫೆಕ್ಟ್ ನಿಂದ ಸಂತ್ರಸ್ಥರಾದವರಿಗೆ ಅನುಕೂಲ ಒದಗಿಸುವ ಉದ್ದೇಶದಿಂದ ಕಾಶಿ ಜಗದ್ಗುರುಗಳಾದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕೇಂದ್ರ‌ ಹಾಗೂ ರಾಜ್ಯ ಸರ್ಕಾರಗಳಿಗೆ ದೇಣಿಗೆ ನೀಡಿದರು. ಕಳೆದ 20 ದಿನಗಳಿಂದ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಿರುವ ಕಾಶಿ ಶ್ರೀಗಳು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ 2 ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆಯ ಚೆಕ್ಕನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿದರು. ಶ್ರೀಗಳು ವಾಸ್ತವ್ಯ ಹೂಡಿರುವ ಶಿವಮೊಗ್ಗ ಹೊರವಲಯದ ಮತ್ತೋಡು ...

Read More »

ನಾಳೆಯಿಂದ ಕರ್ನಾಟಕ ಲಾಕ್ ಡೌನ್

ಕೇವಲ 9 ಜಿಲ್ಲೆಗಳನ್ನು ಮಾತ್ರ ಲಾಕ್ ಡೌನ್ ಮಾಡಲಾಗಿತ್ತು ಆದರೆ ಜನರು ಸರ್ಕಾರದ ಆದೇಶಗಳನ್ನು ಪಾಲಿಸುತ್ತಿಲ್ಲ. ಜನಹೀತ ದೃಷ್ಟಿಯಿಂದ ರಾಜ್ಯವ್ಯಾಪ್ತಿ ಕರ್ನಾಟಕ ಕರ್ಫ್ಯೂ ಜಾರಿಗೊಲಿಸುವತಂಹ ಕಠಿಣ ನಿರ್ಧಾರವನ್ನ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ನಾಳೆಯಿಂದ ಒಂಬತ್ತು ದಿನಗಳ ಕಾಲ ಜನರು ಮನೆಯಲ್ಲಿ ಇರಬೇಕು. ಮಾಚ್ 31 ರ ತನಕ ಕರ್ನಾಟಕ ಕರ್ಫ್ಯೂ ಜಾರಿಯಲ್ಲಿರುತ್ತದೆ ಒಂದು ವೇಳೆ ಯಾವುದೇ ಅದೇಶ ಮೀರಿದರೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ. ಹಾಲು ತರಕಾರಿ ದಿನಸಿ ಔಷಧಿ ಆಸ್ಪತ್ರೆ ಸೇರಿದಂತೆ ಅಗತ್ಯ ವಸ್ತುಗಳು ಜನರಿಗೆ ಲಭ್ಯವಿರುತ್ತದೆ ಆದರೆ ಅನಗತ್ಯವಾಗಿ ಯಾರು ಮನೆಯಿಂದ ಹೊರಗೆ ...

Read More »

ಕೊರೊನಾ ಎಫೆಕ್ಟ್ : ಇನ್ನು 10 ದಿನಗಳ ಕಾಲ ವಿಶ್ಚ ವಿಖ್ಯಾತ ಜೋಗ ವೀಕ್ಷಣೆಗೆ ಬ್ರೇಕ್.

  ಮಹಾಮಾರಿ ಕೊರೊನಾ ವೈರಸ್‌ ಬಿಸಿ ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ತಟ್ಟಿದೆ.. ಪ್ರತಿದಿನ ನೂರಾರು ಪ್ರವಾಸಿಗರು ಹೊರ ರಾಜ್ಯ ಹಾಗೂ ವಿದೇಶಗಳಿಂದ ಆಗಮಿಸುತ್ತಿದ್ದರು. ಅದರೆ ದಿನೇದಿನೇ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜೋಗ ವೀಕ್ಷಣೆಯನ್ನು ನಿಲ್ಲಿಸಲಾಗಿದೆ. ಜಲಪಾತಕ್ಕೆ ಎಂಟ್ರಿಯಾಗುವ ಗೇಟಿಗೆ ಬೀಗ ಹಾಕಲಾಗಿದೆ ಇನ್ನು ಹತ್ತು ದಿನಗಳ ಕಾಲ ಜೋಗ ವೀಕ್ಷಣೆಗೆ ಬ್ರೇಕ್ ಬಿದ್ದಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ರಾಜ್ಯಸರ್ಕಾರ ಆದೇಶವನ್ನು ಹೊರಡಿಸಿದೆ.

Read More »