Breaking News

ರಾಜ್ಯ

ಕೊರೊನಾ ಎದುರಿಸಲು ಮೆಗ್ಗಾನ್ ನಲ್ಲಿ ಸಮರ್ಪಕ ವ್ಯವಸ್ಥೆ ಇಲ್ಲ – ಹೆಚ್ ಎನ್ ಸುಂದರೇಶ್

ಎಲ್ಲರ ನಿದ್ದೆಗೆಡಿಸಿರುವ ಕರೋನಾ ವೈರಸ್ ಇದೀಗ ದೇಶಾದ್ಯಂತ ಹರಡುತ್ತಿದೆ. ಈಗಾಗಲೇ ನಮ್ಮ ರಾಜ್ಯದಲ್ಲೂ ಸಹ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದಕ್ಕಾಗಿ ಎಲ್ಲೆಡೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ. ಆದರೆ ನಮ್ಮ ಶಿವಮೊಗ್ಗದಲ್ಲಿ ಕರೋನಾ ತಡೆಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆರಂಭಿಸಿರು ಕರೋನಾ ಸ್ಪೆಷಲ್ ವಾರ್ಡ್ ನಲ್ಲಿ ವೈದ್ಯರು ಹಾಗೂ ಸಿಬ್ಬಂದಿಗೆ ಸೂಕ್ತ‌ ರಕ್ಷಣಾ‌ಸಲಕರಣೆಗಳೇ ಇಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಆರೋಪಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕರೋನಾ ತಡೆಗಾಗಿ ಸ್ಪೆಷಲ್ ವಾರ್ಡ್ ಆರಂಭಿಸಲಾಗಿದೆ. ಆದರೆ ವೈದ್ಯರು ಹಾಗೂ ಸಿಬ್ಬಂದಿಗೆ ಬೇಕಾದ ಮಾಸ್ಕ್ ಗಳು ಹಾಗೂ ...

Read More »

47 ಪತ್ರಕರ್ತರಿಗೆ ರಾಜ್ಯ ಪ್ರಶಸ್ತಿ.. ಯಾರ್ ಯಾರಿಗೆ ಪ್ರಶಸ್ತಿ ಸಿಕ್ಕಿದೆ ಗೊತ್ತಾ ??

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ, ಸಾಧನೆ ಮತ್ತು ಅತ್ಯುತ್ತಮ ವರದಿ(ಲೇಖನ)ಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕೆ.ಎನ್.ಸುಬ್ರಮಣ್ಯ ಪ್ರಶಸ್ತಿಗೆ ದಿ ಹಿಂದೂ ಬ್ಯೂರೋ ಉಪ ಮುಖ್ಯಸ್ಥ ಬಿ.ಎಂ.ಸತೀಶ್‌ ಕುಮಾರ್ ಆಯ್ಕೆಯಾಗಿದ್ದಾರೆ. ಅಪ್ಪಾಜಿಗೌಡ ಸ್ಮಾರಕ ಪ್ರಶಸ್ತಿ-(ಅತ್ಯುತ್ತಮ ಚಲನಚಿತ್ರ ವರದಿಗಳಿಗೆ) ಹಿರಿಯ ಪತ್ರಕರ್ತ ಮುರಳೀಧರ್ ಖಜಾನೆ, ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿ-(ಕನ್ನಡ ನಾಡು-ನುಡಿಗೆ ಸೇವೆ ಸಲ್ಲಿಸಿದ ಪತ್ರಕರ್ತರೊಬ್ಬರಿಗೆ) ಕೋಲಾರ ಕನ್ನಡ ಮಿತ್ರ ಸಂಪಾದಕರು ಕೋ.ನಾ.ಪ್ರಭಾಕರ್ ಅವರು ಆಯ್ಕೆಯಾಗಿದ್ದಾರೆ. ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ-ಪ್ರಜಾವಾಣಿ ವರದಿಗಾರ ಭೀಮಸೇನ ...

Read More »

ಸೀಡ್ ಪೇಪರ್ ಬಳಕೆಗೆ ಮುಂದಾಗಿರುವ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ.

  ಶಿವಮೊಗ್ಗ: ಆಮಂತ್ರಣ ಪತ್ರಿಕೆ, ಕರಪತ್ರಗಳನ್ನು ವಿವಿಧ ಡಿಸೈನ್ ಗಳಲ್ಲಿ ಮಾಡುವುದನ್ನು ನೋಡಿದ್ದೇವೆ. ಆದರೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪರಿಸರ ಸ್ನೇಹಿ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರಗಳ ಬಳಕೆಗೆ ವಿಶೇಷ ಪ್ರಯತ್ನ ಮಾಡಿದೆ. ಇದುವರೆಗೆ ನಾವು ಸೀಡ್ ಬಾಲ್ ಗಳನ್ನು ನೋಡಿದ್ದೆವು. ಇದೀಗ ಸೀಡ್ ಪೇಪರ್‌ ಸಹ ಬಂದಿದೆ. ಈ ಸೀಡ್ ಪೇಪರ್ ಬಳಕೆ ಮಾಡಿದ ಮೊದಲ ಸರ್ಕಾರಿ ಇಲಾಖೆ ಹಾಗೂ ನಿಗಮ ಎಂಬ ಹೆಗ್ಗಳಿಕೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲುತ್ತದೆ.. ನಿಗಮದ ಅಧ್ಯಕ್ಷರಾದ ಡಿ.ಎಸ್ ಅರುಣ್ ...

Read More »

ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ

ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...

Read More »

ಬೃಹತ್ ಉದ್ಯೋಗ ಮೇಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ..

  ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕ ವಾತಾವರಣ ನಿರ್ಮಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.. ಇಂದು ಶಿವಮೊಗ್ಗದ ಎನ್‍ಇಎಸ್ ಕಾಲೇಜು ಆವರಣದಲ್ಲಿ ಎರಡು ದಿನಗಳ ಬೃಹತ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಳ್ಳಲಾಗಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರುವರೆ ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗಳಿಗೆ 220ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಂದಿನ 15ದಿನಗಳ ಒಳಗಾಗಿ ನಿರ್ಮಾಣ ಕಾಮಗಾರಿ ಆರಂಭವಾಗಲಿದ್ದು, 8ರಿಂದ 10ತಿಂಗಳ ...

Read More »

ಮಾರಿ ಹಬ್ಬದ ಅಂಗವಾಗಿ ನಡೆದ ಕುರಿ ಕಾಳಗದ ಝಲಕ್

  ಶಿವಮೊಗ್ಗ : ಅಖಾಡದ ಸುತ್ತಲೂ ಕಿಕ್ಕಿರಿದ ಪ್ರೇಕ್ಷಕರು, ಮೈದಾನದ ಪಕ್ಕದಲ್ಲಿರುವ ಕಟ್ಟಡಗಳ ಮೇಲೆ ಕುಳಿತಿದ್ದ ಜನ. ಇದು ಕ್ರಿಕೆಟ್ ಟೂರ್ನಿ ಅಥವಾ ಪ್ರೋ ಕಬಡ್ಡಿ ನೋಡಲು ಸೇರಿದ್ದ ಪ್ರೇಕ್ಷಕರಲ್ಲ ಬದಲಾಗಿ ನಮ್ಮ ಗ್ರಾಮೀಣ ಸೊಗಡಿನ ಕ್ರೀಡೆ ಕುರಿಕಾಳಗ ವೀಕ್ಷಣೆಗೆ ಸೇರಿದ್ದ ಜನಸಾಗರ. ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ಸಮಿತಿಯಿಂದ ಕೋಟೆ ಮಾರಿಕಾಂಬ ಜಾತ್ರೆ ಅಂಗವಾಗಿ ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಆಯೋಜಿಸಿದ್ದ ಕುರಿ ಕಾಳಗವನ್ನು ವೀಕ್ಷಿಸಲು ಜನಸಾಗರವೇ ಹರಿದುಬಂದಿತ್ತು. 2, 4, 6 ಹಾಗೂ 8 ಹಲ್ಲಿನ ಕುರಿಗಳಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿತ್ತು. ಕುರಿಗಳು ...

Read More »

ಗೇಲಿ ಮಾಡಿದಾತನಿಗೆ ಈಗ ಪಕ್ಕೆಲುಬು ಮುರಿದಂತಹ ಅನುಭವ!

ಸಾಮಾಜಿಕ ಜಾಲತಾಣದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಹುಡುಗನೋಬ್ಬ ಪಕ್ಕೆಲುಬು ಎಂದು ತಪ್ಪಾಗಿ ಉಚ್ಚಾರಿಸುತ್ತಿದ್ದ ವಿಡಿಯೋ ವೈರಲ್ ಅಗಿತ್ತು. ಅದರೆ ಇಂದು ಆ ವೀಡಿಯೋ ವೈರಲ್ ಮಾಡಿದ ಶಿಕ್ಷಕನಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ನಿದೇಶಕರು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸೇರಿದ್ದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಅದೇಶವನ್ನು ಹೊರಡಿಸಿದ್ದಾರೆ. ಒಟ್ಟಿನಲ್ಲಿ ಮಗುವಿಗೆ ಪಕ್ಕೆಲುಬು ಉಚ್ಚಾರಣೆ ಬರುವುದಿಲ್ಲ ಎಂದು ಗೇಲಿ ಮಾಡಿದವರಿಗೆ ಇದ್ದಾಗಿನ ಪಕ್ಕೆಲುಬು ಇದೀಗ ಮುರಿದಂತಾಗಿದೆ.

Read More »

ಸುಭಿಕ್ಷಾ ಲೋಕಾರ್ಪಣೆ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 4ಸಾವಿರ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದೆ ಇದಕ್ಕಾಗಿ ರಾಜ್ಯ ಸರಕಾರ 2,200 ಕೋಟಿ ರೂ ಅನುದಾನವನ್ನು ನಿಗದಿಪಡಿಸಿದೆ. ರೈತರಿಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿ ...

Read More »

Malleswaram footpaths leave people dancing

BBMP may say ‘We are running aerobic classes in public places.” BENGALURU: Bharatanatyam is an essential skill to walk on Malleswaram footpaths and that is what this satirical dance video made by a group of citizens, tries to portray. The clip starts with two pedestrians who come upon a broken footpath, filled with debris and broken slabs. They have to ...

Read More »

ಅನರ್ಹರಿಗೆ ಟಿಕೆಟ್ ಖಚಿತ

ಶಿವಮೊಗ್ಗ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶಿಕಾರಿಪುರದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಈ ಕುರಿತು ಅಮಿತ್ ಷಾ ಸೇರಿದಂತೆ ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದೇನೆ. ಇದಕ್ಕೆ ವರಿಷ್ಟರೂ ಒಪ್ಪಿಗೆ ಸೂಚಿಸಿದ್ದಾರೆ. ಅನರ್ಹ ಶಾಸಕರನ್ನು ಗೆಲ್ಲಿಸಬೇಕಾದ ಜವಾಬ್ದಾರಿ ಬಿಜೆಪಿ ಕಾರ್ಯಕರ್ತರು‌ ಸೇರಿದಂತೆ ಎಲ್ಲ ನಾಯಕರ ಮೇಲಿದೆ. ಇದಕ್ಕಾಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಇಬ್ಬಿಬ್ಬರು ಉಸ್ತುವಾರಿಗಳನ್ನು ಈಗಾಗಲೇ‌ ನೇಮಿಸಲಾಗಿದೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಸಂಬಂಧ ...

Read More »