Breaking News

ಶಿವಮೊಗ್ಗ

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ..

Cnewstv.in / 27.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ.. ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಐ.ಎ.ಎಸ್.‌ ಅಧಿಕಾರಿ ವಂದಿತಾ ಶರ್ಮ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್‌ ಅವರು ಇದೇ ಮೇ 31 ಕ್ಕೆ ನಿವೃತ್ತಿಗೊಳ್ಳಲಿದ್ದಾರೆ. ಅಂದು ವಂದಿತಾ ಶರ್ಮ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ವಂದಿತಾ ಶರ್ಮ ಅವರು 1986 ರ ಬ್ಯಾಚಿನ ಕರ್ನಾಟಕ ...

Read More »

ಪಡಿತರ ಅಕ್ಕಿ ಬಹಿರಂಗ ಹರಾಜು..

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪಡಿತರ ಅಕ್ಕಿ ಬಹಿರಂಗ ಹರಾಜು.. ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1995 ರ ನಿಯಮಗಳ ಉಲ್ಲಂಘನೆಗಾಗಿ ಆಹಾರ ಇಲಾಖೆಯು ವಶಕ್ಕೆ ಪಡೆದ ಪಡಿತರ ಅಕ್ಕಿ ದಾಸ್ತಾನನ್ನು ನಗರದ ಕೆಎಫ್‍ಸಿಎಸ್‍ಸಿ ಸಗಟು ಮಳಿಗೆ, ಎಪಿಎಂಸಿ ಆವರಣ ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾದ 38.90 ಕ್ವಿಂಟಾಲ್ ಅಕ್ಕಿಯನ್ನು ಮೇ 30 ರಂದು ಬೆಳಿಗ್ಗೆ 11.30 ಕ್ಕೆ ...

Read More »

ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಸಿದ್ದರಾಮಯ್ಯ ಒಬ್ಬ ಅಲೆಮಾರಿ..ಅರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ : ಕೆ.ಎಸ್. ಈಶ್ವರಪ್ಪ. ಶಿವಮೊಗ್ಗ : RSS ನವರು ಈ ದೇಶದವರು ಅಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್ ಈಶ್ವರಪ್ಪನವರು ತಿರುಗೇಟು ನೀಡಿದ್ದಾರೆ.‌ ಸಿದ್ದರಾಮಯ್ಯನವರು ಒಂದು ಬಾರಿ ಒಂದು ಬಾರಿ ಚಾಮುಂಡೇಶ್ವರಿಯಲ್ಲಿ ನಿಂತುಕೊಳ್ಳುತ್ತಾರೆ ಮತ್ತೊಂದು ಬಾರಿ ಬಾದಾಮಿಯಲ್ಲಿ ನಿಂತುಕೊಳ್ಳುತ್ತಾರೆ, ಮುಂದಿನ ಬಾರಿ ಎಲ್ಲಿ ನಿಂತು ಕೊಳ್ಳುತ್ತಾರೋ ಗೊತ್ತಿಲ್ಲ.‌ ಅಲೆಮಾರಿಗೆ ಆರ್ ಎಸ್ಎಸ್ ಬಗ್ಗೆ ಕಲ್ಪನೆಯೇ ಇಲ್ಲ.‌ ...

Read More »

ರೋಸ್ಮರ್ ಪದ್ಧತಿ ಅನುಸರಿಸದೇ ಪಿಯು ಪುವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ರೋಸ್ಮರ್ ಪದ್ಧತಿ ಅನುಸರಿಸದೇ ಪಿಯು ಪುವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ. ಶಿವಮೊಗ್ಗ : ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಪಿಯು ಪುವೇಶಕ್ಕೆ ವಿದ್ಯಾರ್ಥಿಗಳು ಪೋಷಕರು ಮುಂದಾಗಿದ್ದು, ಜಿಲ್ಲೆಯಲ್ಲಿ ಬಹುತೇಕ ಖಾಸಗಿ ಕಾಲೇಜುಗಳಲ್ಲಿ ಸರ್ಕಾರದ ರೋಸ್ಟರ್‌ ಪದ್ಧತಿ ಅನುಸರಿಸದೇ ಪ್ರವೇಶ ನೀಡುತ್ತಿರುವುದನ್ನು ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ತೀವ್ರವಾಗಿ ಖಂಡಿಸಲಾಯಿತು. ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ...

Read More »

MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ. ಬೆಂಗಳೂರು : ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ಇವರ ವತಿಯಿಂದ ಇಂದು ನಡೆದ MSME-2022ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ಮಾನ್ಯ ಶಾಸಕರು ವಿಧಾನಪರಿಷತ್ ಹಾಗೂ ಖ್ಯಾತ ಕೈಗಾರಿಕೋದ್ಯಮಿಗಳಾದ ಎಸ್. ರುದ್ರೇಗೌಡರವರು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ...

Read More »

ಜೈಲ್ ರಸ್ತೆಯಲ್ಲಿ ಅಪ್ರಾಪ್ತ ಬಾಲಕಿ ಅಪಹರಣ. ‌

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಜೈಲ್ ರಸ್ತೆಯಲ್ಲಿ ಅಪ್ರಾಪ್ತ ಬಾಲಕಿ ಅಪಹರಣ. ‌ ಶಿವಮೊಗ್ಗ: ನಗರದ ಜೈಲ್ ರಸ್ತೆ ಕೃಷ್ಣಪ್ಪ ಕಾಂಪೌಂಡಿನಿಂದ ನಿನ್ನೆ ಸಂಜೆ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಕೆ. ಪಿ. ಅಗ್ರಹಾರದ ಲಿಂಗರಾಜು ಅಲಿಯಾಸ್ ವಿರಾಟ್ ಅಲಿಯಾಸ್ ರಾಜು ತಂದೆ ಲಕ್ಷ್ಮೀನಾರಾಯಣ ಎನ್ನುವ 26 ರ ಯುವಕ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಬಾಲಕಿಯು 5.15 ಅಡಿ ಎತ್ತರ, ಸಾಮಾನ್ಯ ಕಪ್ಪು ಬಣ್ಣದ ಕೂದಲು, ಗೋಧಿ ಬಣ್ಣ, ...

Read More »

ವಿಕಲಚೇತನರು ಯುಡಿಐಡಿ ಕಾರ್ಡ್ ಪಡೆಯುವುದು ಕಡ್ಡಾಯ.

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ವಿಕಲಚೇತನರು ಯುಡಿಐಡಿ ಕಾರ್ಡ್ ಪಡೆಯುವುದು ಕಡ್ಡಾಯ. ಶಿವಮೊಗ್ಗ : ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಹಾಗೂ ಕೇಂದ್ರ ಸರ್ಕಾರದ ಸೂಚನೆಯಂತೆ ಈಗಾಗಲೇ ಗುರುತಿನ ಚೀಟಿ ಪಡೆದಿರುವ ಎಲ್ಲ ವಿಕಲಚೇತನರು ಹಾಗೂ ಹೊಸದಾಗಿ ಗುರುತಿನ ಚೀಟಿ ಪಡೆಯಲು ಎಲ್ಲ ವಿಕಲಚೇತನರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ವಿಶಿಷ್ಟ ವಿಕಲಚೇತನರ ಗುರುತಿನ ಚೀಟಿ(ಯುಡಿಐಡಿ) ಸ್ಮಾರ್ಟ್‍ಕಾರ್ಡ್ ಸೌಲಭ್ಯ ಪಡೆಯುವುದು ಕಡ್ಡಾಯವಾಗಿರುತ್ತದೆ. ವಿಶಿಷ್ಟ ಅಂಗವಿಕಲ ಗುರುತಿನ ಚೀಟಿಯನ್ನು (ಯುಡಿಐಡಿ ಸ್ಮಾರ್ಟ್‍ಕಾರ್ಡ್) ಹೊಂದದೇ ಇರುವ ...

Read More »

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್

Cnewstv.in / 26.05.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಎಸ್. ಸೆಲ್ವಕುಮಾರ್ ಶಿವಮೊಗ್ಗ : ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ನಗರದಲ್ಲಿ ಕಾಲುವೆಗಳು, ಚರಂಡಿಗಳಲ್ಲಿ ತುಂಬಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ಇದೇ ರೀತಿ ನೀರು ಸರಾಗವಾಗಿ ಹರಿದುಹೋಗಲು ಅಡ್ಡಿಯಾಗುವ ಅಡೆತಡೆಗಳನ್ನು ನಿವಾರಿಸಬೇಕು. ಇತ್ತೀಚಿನ ಅತಿವೃಷ್ಟಿಯಿಂದ ...

Read More »

ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ, ನೇರ ಸಂದರ್ಶನ.

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶ, ನೇರ ಸಂದರ್ಶನ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ...

Read More »

ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಇಟ್ಟುಕೊಂಡ ಆರೋಪಿ ಬಂಧನ..

Cnewstv.in / 26.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಇಟ್ಟುಕೊಂಡ ಆರೋಪಿ ಬಂಧನ.. ಶಿವಮೊಗ್ಗ : ಪರವಾನಗಿ ಇಲ್ಲದ ಹಳೆಯ ನಾಡ ಬಂದೂಕುಗಳನ್ನು ಕ್ರಮವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಲಾಕ್ಷಪ್ಪ (47) ಎಂಬ ವ್ಯಕ್ತಿಯು ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮದ ತಮ್ಮ ಮನೆಯಲ್ಲಿ ಪರವಾನಗಿ ಇಲ್ಲದ ಹಳೆಯ ನಾಡ ಬಂದುಕುಗಳನ್ನು ಅಕ್ರಮವಾಗಿ ಇಟ್ಟುಕೊಂಡು ಅದನ್ನು ದುರಸ್ತಿ ಮಾಡಿಕೊಡುತ್ತಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ...

Read More »