Breaking News

ಶಿವಮೊಗ್ಗ

ಮಹಾನಗರ ಪಾಲಿಕೆ ವತಿಯಿಂದ ಮನೆ ಬಾಗಿಲಿಗೆ ಫುಡ್ ಸಪ್ಲೈ

  ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೊಟೇಲ್ ವ್ಯವಸ್ಥೆ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ, ಪಾಲಿಕೆ ವತಿಯಿಂದ ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಮಾ.27ರಿಂದ ಪ್ಯಾಕ್ಡ್ ಆಹಾರ ಸರಬರಾಜು ಮಾಡಲು ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ದೂರವಾಣಿ ಮೂಲಕ ಆರ್ಡರ್ ಮಾಡಿದರೆ ಒಂದು ಗಂಟೆಯ ಒಳಗಾಗಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ಮನೆ ಬಾಗಿಲಿಗೆ ಬರಲಿದೆ. ಮೆನು ಇಂತಿದೆ. ಟಿಫಿನ್: 2ಇಡ್ಲಿ-1 ವಡೆ ರೂ.40/ ಉಪ್ಪಿಟ್ಟು-ರೂ.30/ ಸೆಟ್‍ದೋಸೆ- ರೂ.50/ ರೈಸ್‍ಬಾತ್ ವಿತ್ ಚಟ್ನಿ ರೂ. 50/ ಮಧ್ಯಾಹ್ನದ ಊಟ: ಚಪಾತಿ, ಪಲ್ಯ, ...

Read More »

ಪ್ರಯಾಣಿಕರ ವಾಹನ ಸಂಚಾರ ಸಂಪೂರ್ಣ ಸ್ಥಗಿತ, ವಿದೇಶದಿಂದ ಬಂದವರ ಮೇಲೆ ತ್ರೀವ ನಿಗಾ.

  ಜಿಲ್ಲೆಯಲ್ಲಿ ಪ್ರಯಾಣಿಕರ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತೊಳಿಸಲಾಗಿದೆ. ಗೂಡ್ಸ್ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ತಮ್ಮ ವಾಹನಗಳನ್ನು ಬಳಸಿಕೊಳ್ಳಬಹುದಾಗಿದೆ ಇನ್ನೂ ವಿದೇಶದಿಂದ ಬಂದವರ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಅವರು ಮನೆಯಿಂದ ಯಾವುದೇ ಕಾರಣಕ್ಕೂ ಹೊರಗೆ ಬಾರದಂತೆ ಸೂಚನೆಗಳನ್ನು ನೀಡಲಾಗಿದೆ. ಅಂತವರ ಮನೆಗಳನ್ನು ಗುರುತಿಸಲು ಪೋಸ್ಟರ್‍ಗಳನ್ನು ಹಚ್ಚಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ನಿಗಾ ಇರಿಸಿರುವ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ನಿಗಾ ವಹಿಸಲು ಸಿಬ್ಬಂದಿ ನೇಮಕ ಮಾಡಲು ಸೂಚಿಸಲಾಗಿದೆ. ಹಾಗೂ ಬೆಂಗಳೂರಿನಿಂದ ನಿನ್ನೆ ...

Read More »

ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು- ಎಸ್ಪಿ ಕೆ.ಎಂ.ಶಾಂತರಾಜು

  ಶಿವಮೊಗ್ಗ  : ವಾಟ್ಸಾಪ್ ಮೂಲಕ ಕರೋನ ವೈರಸ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಕುಂಸಿ ಪೆÇಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರ ಗ್ರಾಮದ ವಾಸಿ ನಾಗರಾಜ್ ತಮ್ಮ ವಾಟ್ಸಾಪ್ ಖಾತೆಯಿಂದ ಕರೋನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಇರುವ ಸಂದೇಶವನ್ನು ಬೇರೆ ಸಾರ್ವಜನಿಕರ ಮೊಬೈಲ್ ಗೆ ಕಳುಹಿಸಿ ಗೊಂದಲ ಉಂಟಾಗಲು ಕಾರಣರಾಗಿದ್ದಾರೆ. ಸಾರ್ವಜನಿಕರಲ್ಲಿ ಭೀತಿಯನ್ನು ಹುಟ್ಟಿಸಿ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿರುವ ಬಗ್ಗೆ ಕುಂಸಿ ಪೆÇಲೀಸ್ ಠಾಣೆಯಲ್ಲಿ ಕಲಂ ...

Read More »

ಕರೋನಾ ಹಿನ್ನೆಲೆ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಜಾರಿ

ಶಿವಮೊಗ್ಗ: ಕರೋನಾ ಹರಡುವ ಭೀತಿ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇದಾಜ್ಞೆ ಹೇರಿ ಜಿಲ್ಲಾಧಿಕಾರಿ ಶಿವಕುಮಾರ್‌ ಆದೇಶಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು ಎಲ್ಲಡೆಯೂ ಕರೋನಾ ಭೀತಿ ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇಂದಿನಿಂದ‌ ಐದು ದಿನಗಳ ಕಾಲ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಲ್ಲೂ ಜನ ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು‌. ಇದಲ್ಲದೆ ಫುಟ್ ಕೋರ್ಟ್, ಬಾರ್ ಅಂಡ್ ರೆಸ್ಟೋರೆಂಟ್ ಎಂದಿನಂತೆ ತೆರೆದಿರಲಿವೆ. ನಿಷೇದಾಜ್ಞೆ ಉಲ್ಲಂಘಿಸಿ ಯಾರಾದರೂ ಒಂದೆಡೆ ಸೇರಿದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ...

Read More »

ಬಸ್, ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ...

Read More »

ನಗರದಲ್ಲಿ ವಾಹನ ನಿಲುಗಡೆ, ವೇಗಮಿತಿ, ಏಕಮುಖ ಸಂಚಾರಕ್ಕೆ ಉಲ್ಲಂಘಿಸಿದರೆ ಬಾರಿ ದಂಡ

  ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಸುಗಮ ಸಂಚಾರ ಹಾಗೂ ಆಕಸ್ಮಿಕ ಅಫಘಾತಗಳನ್ನು ನಿಯಂತ್ರಿಸಲು ವಿವಿಧ ರಸ್ತೆಗಳಲ್ಲಿ ವಾಹನ ನಿಲುಗಡೆ, ವೇಗಮಿತಿ ಮತ್ತು ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇಂದು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದ ಅಶೋಕ ಸರ್ಕಲ್, ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್, ಜೈಲ್ ಸರ್ಕಲ್, ವಿನೋಬ ನಗರ ಪೊಲೀಸ್ ಚೌಕಿ ಸರ್ಕಲ್ ಮತ್ತು ಹೆಲಿಪ್ಯಾಡ್ ಸರ್ಕಲ್ ಸೇರಿದಂತೆ ಒಟ್ಟು ಪ್ರಮುಖ 6ವರ್ತುಗಳ ವ್ಯಾಪ್ತಿಯಲ್ಲಿ 100ಮೀ. ಅಂತರದವರೆಗೆ ಎಲ್ಲಾ ರೀತಿಯ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಜೈಲ್ ರಸ್ತೆಯಲ್ಲಿ ...

Read More »

ಕೊರೊನಾ ಎಫೆಕ್ಟ್ : ಇನ್ನು 10 ದಿನಗಳ ಕಾಲ ವಿಶ್ಚ ವಿಖ್ಯಾತ ಜೋಗ ವೀಕ್ಷಣೆಗೆ ಬ್ರೇಕ್.

  ಮಹಾಮಾರಿ ಕೊರೊನಾ ವೈರಸ್‌ ಬಿಸಿ ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ತಟ್ಟಿದೆ.. ಪ್ರತಿದಿನ ನೂರಾರು ಪ್ರವಾಸಿಗರು ಹೊರ ರಾಜ್ಯ ಹಾಗೂ ವಿದೇಶಗಳಿಂದ ಆಗಮಿಸುತ್ತಿದ್ದರು. ಅದರೆ ದಿನೇದಿನೇ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಜೋಗ ವೀಕ್ಷಣೆಯನ್ನು ನಿಲ್ಲಿಸಲಾಗಿದೆ. ಜಲಪಾತಕ್ಕೆ ಎಂಟ್ರಿಯಾಗುವ ಗೇಟಿಗೆ ಬೀಗ ಹಾಕಲಾಗಿದೆ ಇನ್ನು ಹತ್ತು ದಿನಗಳ ಕಾಲ ಜೋಗ ವೀಕ್ಷಣೆಗೆ ಬ್ರೇಕ್ ಬಿದ್ದಿದೆ. ಸೋಂಕು ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ರಾಜ್ಯಸರ್ಕಾರ ಆದೇಶವನ್ನು ಹೊರಡಿಸಿದೆ.

Read More »

ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಸಚಿವರ ಭೇಟಿ. ಕರೋನಾ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕರೋನ ವೈರಸ್ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಮೂರು ಶಂಕಿತ ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿವೆ. ಜಿಲ್ಲೆಯಲ್ಲಿ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಮ್ಸ್‍ನಲ್ಲಿ 30 ಹಾಸಿಗೆಯ ಪ್ರತ್ಯೇಕ ವಾರ್ಡ್ ಸಜ್ಜುಗೊಳಿಸಲಾಗಿದ್ದು, ವೈದ್ಯಾಧಿಕಾರಿಗಳ ತಂಡ ದಿನದ 24ಗಂಟೆ ಕಾರ್ಯನಿರ್ವಹಿಸುತ್ತಿದೆ ...

Read More »

ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ ದಿನದ 24ಗಂಟೆ ಕಟ್ಟೆಚ್ಚರ ವಹಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ

  ಶಿವಮೊಗ್ಗ : ಕರೋನ ವೈರಸ್ ನಿರ್ವಹಣೆಗೆ ಅಗತ್ಯವಿರುವ ಕಿಟ್, ಮಾಸ್ಕ್ ಸೇರಿದಂತೆ ಎಲ್ಲಾ ಸಾಧನ ಸಲಕರಣೆಗಳೊಂದಿಗೆ ದಿನದ 24ಗಂಟೆ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಮೆಗ್ಗಾನ್ ಆಸ್ಪ್ರತೆಯಲ್ಲಿ ಕರೋನಾ ವೈರಸ್ ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಅವರು ಶನಿವಾರ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕರೋನಾ ವೈರಸ್ ಪತ್ತೆಗೆ ಅಗತ್ಯವಾದ ಕಿಟ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಮಾಸ್ಕ್ ಇನ್ನಷ್ಟು ಇಂದು ಸಂಜೆಯೊಳಗಾಗಿ ತರಿಸಬೇಕು. ತಮ್ಮಲ್ಲಿ ಹೆಚ್ಚುವರಿಯಾಗಿ ಲಭ್ಯವಿರುವ ಮಾಸ್ಕ್‍ಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ...

Read More »

ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.

ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್‌ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು.. https://youtu.be/7FHDhDVPZJY  

Read More »