Breaking News

ಶಿವಮೊಗ್ಗ

ಜ್ಞಾನವುಳ್ಳ ಮಹಾನ್ ಚೈತನ್ಯ ಸರ್ವಜ್ಞ : ಸುವರ್ಣ ಶಂಕರ್

ಜ್ಞಾನವುಳ್ಳ ಮಹಾನ್ ಚೈತನ್ಯ ಸರ್ವಜ್ಞ : ಸುವರ್ಣ ಶಂಕರ್ ಸರ್ವಜ್ಞ ಒಬ್ಬರು ಮಹಾನ್ ಚೇತನ, ಸಂತನೂ ಹೌದು, ಕವಿಯು ಹೌದು. ಸರ್ವಜ್ಞರು ಅಪಾರ ಜ್ಞಾನವುಳ್ಳವರಾಗಿದ್ದರು ಎಂದು ಪಾಲಿಕೆಯ ಮಹಾಪೌರರು ಸುವರ್ಣ ಶಂಕರ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕುಂಬಾರರ ಸಂಘ ಹಾಗೂ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವಜ್ಞನ ತ್ರಿಪದಿಗಳು ಸಾರ್ವಕಾಲಿಕವಾಗಿವೆ. ಭವಿಷ್ಯ, ಒಗಟು, ದಾನ, ಕೌಟುಂಬಿಕ, ವೈದ್ಯಕೀಯ, ರಾಜಕೀಯ, ಕಲೆ ...

Read More »

ಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ವ್ಯವಸ್ಥೆಗೆ ಅಗತ್ಯ ಕ್ರಮ.

  ಶಿವಮೊಗ್ಗ: ಫೆ.25ರಿಂದ ನಗರದಲ್ಲಿ ನಡೆಯಲಿರುವ ಐದು ದಿನಗಳ ಕೋಟೆ ಶ್ರೀಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳ ಒದಗಿಸುವ ನಿಟ್ಟಿನಲ್ಲಿ ಇಂದು ಮಾರಿಕಾಂಬಾ ಸೇವಾಸಮಿತಿಯು ಮಹಾನಗರ ಪಾಲಿಕೆ ಹಾಗೂ ನೀರುಸರಬರಾಜು ಮಂಡಳಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು. ಜಾತ್ರೆಯ ಆರಂಭಿಕ ದಿನವಾದ ಫೆ.25 ರಂದು ಗಾಂಧಿಬಜಾರಿನಲ್ಲಿ ಹೆಚ್ಚುವರಿ ಬೆಳಕಿನ‌ ವ್ಯವಸ್ಥೆ, ಈ ಟಾಯ್ಲೆಟ್ ಮತ್ತು ಕುಡಿಯುವ ನೀರಿನ‌ ವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದೇ ರೀತಿ ನಾಲ್ಕು ದಿನಗಳ ಕಾಲ ಗದ್ದುಗೆಯಲ್ಲಿ ಜಾತ್ರೆ ...

Read More »

ಬಿ ಎಸ್ ಯಡಿಯೂರಪ್ಪನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಶಿವಮೊಗ್ಗ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರ 78ನೇ ಹುಟ್ಟು ಹಬ್ಬದ ಪ್ರಯುಕ್ತ ಪ್ರೇರಣ ಎಜುಕೇಷನ್ ಮತ್ತು ಸೋಶಿಯಲ್ ಟ್ರಸ್ಟ್ ಹಾಗೂ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗದ ವೀರೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳ್ಳಿಗೆ 9 ಗಂಟೆಗೆ ಉಚಿತ ಬೃಹತ್ ಅರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಎಲ್ಲರಿಗೂ ವೈದ್ಯರ ಸಲಹೆ ಮೇರೆಗೆ ಸಾಮನ್ಯ ಔಷಧಿಗಳನ್ನು ಉಚಿತವಾಗಿ ನೀಡಲಾಗುತ್ತದೆ.. ಆಯುಷ್ ಭಾರತದ ಯೋಜನೆಯಡಿಯಲ್ಲಿ ಆರೋಗ್ಯ ಕಾಡ್ ಗಳನ್ನು ಈಗಾಗಲೇ ವಿತರಿಸುವಂತಹ ಕಾರ್ಯ ನಡೆದಿದೆ. ಯಾರಿಗೆ ಈ ಕಾರ್ಡ್ ದೊರೆತಿಲ್ಲವೋ ಅಂತವರಿಗೆ ಫೆಬ್ರವರಿ 27, ...

Read More »

ಬೆಲೆ ಏರಿಕೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಗ್ಯಾಸ್ ಸಿಲೆಂಡರ್ ಬೆಲೆ ಪೆಟ್ರೋಲ್ ಡೀಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಇಂದು ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಂ ಸುಂದರೇಶ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ 400 ರೂಪಾಯಿ ಇದ್ದ ಸಿಲಿಂಡರ್ ಬೆಲೆ 800 ಅಗಿದೆ. ಪೆಟ್ರೋಲ್ 80 ರೂ. ಡೀಸೆಲ್‌ ‌40 ರೂ ಏರಿಕೆ ಆಗಿದೆ ಇದರಿಂದ ಜನಸಾಮಾನ್ಯರ ಬದುಕು ...

Read More »

“ಆಚಾರ್ಯ ಅದ್ವಿತೀಯ” ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ..

  ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಿಂದ ಫೆಬ್ರವರಿ 24ರಂದು ಕಾಲೇಜು ಆವರಣದಲ್ಲಿ ಒಂದು ದಿನದ ರಾಜ್ಯಮಟ್ಟದ ನಿರ್ವಹಣೆ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಎಟಿಎನ್ ಸಿ ಕಾಲೇಜು ಪ್ರಾಚಾರ್ಯ ಪ್ರೊ.ಎಚ್.ಎಂ.ಸುರೇಶ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ 10 ಸ್ಪರ್ದೆಗಳು ನಡೆಯಲಿದ್ದು ನಿರ್ವಹಣೆಗೆ ಸಂಬಂಧಿಸಿದಂತೆ 5 ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಸಂಬಂಧಿಸಿದ ಐದು ಸ್ಪರ್ಧೆಗಳು ನಡೆಯಲಿವೆ. ಈ ಎರಡು ವಿಭಾಗದ ಸ್ಪರ್ಧೆಗಳಲ್ಲಿ ಕುವೆಂಪು ವಿಶ್ವವಿದ್ಯಾಲಯ ಹಾಗೂ ರಾಜ್ಯದ ಇತರೆ ವಿಶ್ವವಿದ್ಯಾಲಯಗಳ 50 ತಂಡಗಳಿಂದ ಸುಮಾರು 500 ವಿದ್ಯಾರ್ಥಿಗಳು ...

Read More »

ಮಾರ್ಕೆಟ್ ಲೋಕಿಗೆ ಪೊಲೀಸರ ಗುಂಡೇಟು

ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಎಡಗಾಲಿಗೆ ಶೂಟೌಟ್ ಮಾಡಿರುವ ಪೊಲೀಸರು ಲೋಕಿಯನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಕೆಟ್ ಗಿರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮಾರ್ಕೆಟ್ ಲೋಕಿ ಅಂದಿನಿಂದ ತಲೆಮರೆಸಿಕೊಂಡಿದ್ದ. ಇಂದು ಅಬ್ಬಲಗೆರೆ ಬಳಿ ಮಾರ್ಕೆಟ್ ಲೋಕಿ ಇದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಲೋಕಿ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಲೋಕಿಯ ಎಡಗಾಲಿಗೆ ಶೂಟ್ ಮಾಡಿ ವಶಕ್ಕೆ ಪಡೆದು ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.  

Read More »

ಬಹುಮುಖಿ ರಾಷ್ಟ್ರೀಯ ನಾಟಕೋತ್ಸವ ಫೆಬ್ರವರಿ 15 ರಿಂದ 22

  ಶಿವಮೊಗ್ಗ ರಂಗಾಯಣ ವತಿಯಿಂದ ಬಹುಮುಖಿ ರಾಷ್ಟ್ರೀಯ ನಾಟಕೋತ್ಸವವನ್ನು ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಫೆಬ್ರವರಿ 15 ರಿಂದ 22 ರವರೆಗೆ ಅಯೋಜಿಸಲಾಗಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ತಿಳಿಸಿದರು.. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಟಕೋತ್ಸವದಲ್ಲಿ ಮಣಿಪುರಿ, ಹಿಂದಿ, ತುಳು, ಕನ್ನಡ ಭಾಷೆಯ ನಾಟಕಗಳು ಪ್ರದರ್ಶಿಸಲ್ಪಡುತ್ತವೆ. ಇದಕ್ಕೆ ಮಣಿಪುರ, ಮುಂಬಯಿ, ಮಂಗಳೂರು, ಧಾರವಾಡ, ಉಡುಪಿ, ಮೂಡಬಿದರೆ ಹಾಗೂ ಬೆಂಗಳೂರಿನ ಪ್ರತಿಷ್ಠಿತ ನಾಟಕ ತಂಡಗಳು ಪಾಲ್ಗೊಳ್ಳಲಿವೆ. ಪ್ರತಿದಿನ ನಾಟಕದ ಪ್ರದಶನ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸಂಜೆ 6.45 ಕ್ಕೆ ನಡೆಯಲಿದೆ. ರಂಗೋತ್ಸವದಲ್ಲಿ ಪ್ರತಿ ದಿನ ರಂಗಭೂಮಿ ...

Read More »

ಶ್ರೇಷ್ಠತೆಯ ಪ್ರತೀಕ ಮೈಸೂರು ಸಿಲ್ಕ್ಸ್ ಸೀರೆಗಳ ಮೇಳ ಶಿವಮೊಗ್ಗದಲ್ಲಿ

ಶಿವಮೊಗ್ಗ : ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದಿನಿಂದ 5ದಿನಗಳ ಕಾಲ ನಡೆಯಲಿರುವ ಮೈಸೂರು ಸಿಲ್ಕ್ ಸೀರೆ ಹಾಗೂ ಸಿಲ್ಕ್ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಜಿಲ್ಲಾಧುಕಾರಿಗಳಾದ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದ್ದರು.. ಜಾಗತಿಕವಾಗಿ ಅಗ್ರಪಂಕ್ತಿಯಲ್ಲಿ ಗುರುತಿಸಲ್ಪಡುವ ಮೈಸೂರು ಸಿಲ್ಕ್ಸ್ ಉತ್ಪನ್ನಗಳು ನಾಡಿನ ಹೆಮ್ಮೆ ಹಾಗೂ ಶ್ರೇಷ್ಠ ಪರಂಪರೆಯ ಪ್ರತೀಕವೆನಿಸಿದೆ. ನಕಲು ಮಾಡಲಾಗದಂತಹ ಮೈಸೂರು ಸಿಲ್ಕ್ ಉತ್ಪನ್ನಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವರ್ಷಕ್ಕೆ 2ಬಾರಿ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಆರಂಭಿಸುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಶ್ರೀಸಾಮಾನ್ಯರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ...

Read More »

ಮಹಿಳೆಯರಿಗೆ ಒಲಿದ ಮಹಾನಗರ ಪಾಲಿಕೆ ಗದ್ದುಗೆ.. ಸುವರ್ಣಾ ಶಂಕರ್ ಮೇಯರ್, ಸುರೇಖಾ ಮುರಳೀಧರ್ ಉಪಮೇಯರ್

  ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಮೇಯರ್ ಆಗಿ ಸುವರ್ಣ ಶಂಕರ್ ಮತ್ತು ಉಪಮೇಯರ್ ಆಗಿ ಸುರೇಖಾ ಮುರುಳೀಧರ್ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ 11-30 ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಚುನಾವಣಾ ಅಧಿಕಾರಿಯಾಗಿ ವಿದ್ಯಾಕುಮಾರಿ ಹಾಗು ಪ್ರಾದೇಶಿಕ ಆಯುಕ್ತ N V ಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮೇಯರ್ ಚುನಾವಣೆಗೆ ಬಿಜೆಪಿಯ ಸುವರ್ಣ ಶಂಕರ್ ಮತ್ತು ಕಾಂಗ್ರೆಸ್ ನ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಸುವರ್ಣ ಶಂಕರ್ ಪರವಾಗಿ 26 ಮತಗಳು ಲಭ್ಯವಾದರೆ ಯಮುನಾ ರಂಗೇಗೌಡರಿಗೆ 12 ...

Read More »

ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ

ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಯುವ ಸಬಲೀಕರಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ.ಕೆ.ಎಸ್.ಈಶ್ವರಪ್ಪ ಅವರ 71ನೇ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ನಮಸ್ಕಾರ. ಜಿಲ್ಲೆಯ ಎಲ್ಲಾ ಸಮಸ್ತ ನಾಗರಿಕ ಬಾಂಧವರಿಗೆ ಗಣರಾಜ್ಯೋತ್ಸವ ಶುಭಾಶಯಗಳು ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಬಾಳುತ್ತೇವೆ, ರಾಷ್ಟ್ರದ ಸಾರ್ವಭೌಮತೆಯನ್ನು ಗೌರವಿಸಿ, ಅದನ್ನು ಎತ್ತಿಹಿಡಿಯುತ್ತೇವೆ. ನಮ್ಮದೇ ದೇಶ-ನಮ್ಮದೇ ಸಂವಿಧಾನ- ನಮ್ಮದೇ ಆಡಳಿತ-ನಾವು ಸ್ವತಂತ್ರರಾಗಿ ಬದುಕುತ್ತೇವೆ ಎನ್ನುವ ಶಪಥವನ್ನು ಸಮಸ್ತ ಭಾರತೀಯರೂ ಕೈಗೊಂಡ ದಿನ ನಮ್ಮ ಗಣರಾಜ್ಯ ದಿನ. ಮಾನ್ಯ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿಯವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ...

Read More »