Breaking News

ಶಿವಮೊಗ್ಗ

ಅಭಿನಂದನೆಗಳು

  ಗೋಲ್ಡನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ದಾವಣಗೆರೆಯಲ್ಲಿ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ಶಿವಮೊಗ್ಗದ ನವೀನ್ ನೂರು ಮೀಟರ್ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ಹಾಗೂ ಸಾವಿರದ ಐನೂರು ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More »

ತಂಗಿಯನ್ನು ಪ್ರೀತಿಸಬೇಡ ಅಂದಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ಯುವಕ

ತೀರ್ಥಹಳ್ಳಿ: ತನ್ನ ತಂಗಿಯನ್ನು ಪ್ರೀತಿಸ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಚಾಕುವಿನಿಂದ ಇರಿದ ಘಟನೆ ತೀರ್ಥಹಳ್ಳಿಯ ಸರ್ಕಾರಿ ಜೂನಿಯರ್ ಕಾಲೇಜು ಬಳಿ ಶುಕ್ರವಾರ ನಡೆದಿದೆ. ಘಟನೆಯಲ್ಲಿ ಹೊಟ್ಟೆಯ ಬಲ ಭಾಗಕ್ಕೆ ಗಂಭೀರ ಗಾಯಗೊಂಡಿರುವ ಬಾಲಕನನ್ನು ತೀರ್ಥಹಳ್ಳಿಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡವನನ್ನು ಯಡೇಹಳ್ಳಿ ಕೆರೆಯ ದರ್ಶನ್ ಎಂದು ಗುರುತಿಸಲಾಗಿದ್ದು ಚಾಕು ಇರಿದ ಆರೋಪಿ ಅವಿನಾಶ್ ಪಿಂಟೋ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಪೋಲಿಸರು ಮುಂದಾಗಿದ್ದಾರೆ. ತೀರ್ಥಹಳ್ಳಿ ಜೂನಿಯರ್ ಕಾಲೇಜಿಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ದರ್ಶನ್ ಸಹೋದರಿಯನ್ನ ಅವಿನಾಶ್ ಪ್ರೀತಿಸುತ್ತಿದ್ದ ...

Read More »

ಕೇರಳ ಸರ್ಕಾರ ಹಿಂದೂ ವಿರೋಧಿ ಧೋರಣೆ ಕೈಬಿಡಲು ಒತ್ತಾಯ

  ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವ ವಿವಾದ ಸಂಬಂಧ ಕೇರಳ ಸರ್ಕಾರ ತನ್ನ ಹಿಂದೂ ವಿರೋಧಿ ಧೋರಣೆಯನ್ನು ಕೈಬಿಡಬೇಕು ಎಂದು ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿ ಒತ್ತಾಯಿಸಿದೆ. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಸಮಿತಿಯ ಕಾರ್ಯಕರ್ತರು, ಶಬರಿಮಲೆ ಶ್ರೀ ಕ್ಷೇತ್ರಕ್ಕೆ ನಿರ್ಬಂಧವಿದ್ದ ಮಹಿಳಾ ಪ್ರವೇಶವನ್ನು ಸುಪ್ರೀಂ ಕೋರ್ಟ್ ಆದೇಶ ನೀಡಿ ತೆರವುಗೊಳಿಸಿದ್ದು, ಇದರ ವಿರುದ್ಧ ಭಕ್ತರ ನಂಬಿಕೆಗೆ ಪೂರಕವಾಗುವಂತೆ ಮೇಲ್ಮನವಿ ಸಲ್ಲಿಸಬೇಕು. ಶಬರಿಮಲೆಯಲ್ಲಿನ ಧಾರ್ಮಿಕ ನಂಬಿಕೆಗಳ ಉಳಿವಿಗಾಗಿ ಶಾಂತಿಯುತ ಹೋರಾಟ ಮಾಡುತ್ತಿರುವ ಅಯ್ಯಪ್ಪ ಮಾಲಾಧಾರಿಗಳು, ಭಕ್ತರು ಹಾಗೂ ಬಿಜೆಪಿ ಮತ್ತು ...

Read More »

ಸಿಡಿಲು ಬಡಿದು ನೂರಾರು ಕುರಿಗಳ ಸಾವು

  ಭಾನುವಾರ ರಾತ್ರಿ ಹೊಲದಲ್ಲಿ ಬೀಡು ಬಿಟ್ಟಿದ್ದ ಕುರಿ ಮಂದೆಗೆ ಸಿಡಿಲು ಹೊಡೆದ ಪರಿಣಾಮ 250ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಸೊರಬ ತಾಲೂಕಿ‌ನ ಗುಡ್ಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಡಕಳ ಗ್ರಾಮದ ಕಲ್ಲಪ್ಪ ಎಂಬುವರು ತಮ್ಮ ಕುರಿ ಮಂದೆಯನ್ನು ಮೇಯಿಸಲು ಸೊರಬ ತಾಲೂಕಿಗೆ ಬಂದಿದ್ದರು. ಭಾನುವಾರ ಕುರಿಗಳನ್ನು ಮೇಯಿಸಿ ರಾತ್ರಿ ಹೊಲವೊಂದರಲ್ಲಿದ್ದ ಮರದ‌ ಕೆಳಗೆ ಕುರಿಗಳನ್ನು ತರುಬಿದ್ದರು.‌ಈ ವೇಳೆ ಗುಡುಗು ಸಿಡಿಲು ಸಹಿತ ಮಳೆ ಆರಂಭಗೊಂಡಿದ್ದು, ಕುರಿ ಮಂದೆಗೆ ಸಿಡಿಲು ಬಡಿದಿದೆ. ಇದರಿಂದಾಗಿ 250 ಕುರಿಗಳು ಮೃತಪಟ್ಟರೆ 150 ...

Read More »

ಮಲೆನಾಡಿನಲ್ಲಿ ಕಾಣಿಸಿಕೊಂಡ ವಿಶೇಷ ಪ್ರಾಣಿ..

ಶಿವಮೊಗ್ಗದಲ್ಲಿ ಸದ್ಯ ಕುತೂಹಲ ಕೇರಳಿಸುದ ಸುದ್ದಿ ನೀರುನಾಯಿಗಳು.. ತುಂಗಾ ನದಿಯ ದಡದಲ್ಲಿ ನೀರು ನಾಯಿಗಳು ಕಾಣಿಸುತ್ತಿದೆ ಎಂಬ ಸುದ್ದಿ ಕಾಡ್ಗಿಚ್ಚಿನ ಹಾಗೆ ಹಬ್ಬುತ್ತಿದೆ. ಕೆಲವರು ನಾವು ನೋಡಿದ್ದೇವೆ..ನಾವು ನೋಡಿಲ್ಲ.. ಎಂಬ ಊಹಪೋಹಗಳ ನಡುವೆ ಛಾಯಾಗ್ರಾಹಕರು ತೆಗೆದ ನೀರುನಾಯಿಯ ಫೋಟೋವೊಂದು ಎಲ್ಲ ಕಡೆ ಹರಿದಾಡುತ್ತಿದೆ. ತುಂಗಾ ನದಿಯ ಬೆಕ್ಕಿನಕಲ್ಮಠ, ಮತ್ತೂರು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ. ಮಾಹಿತಿಗಳ ಪ್ರಕಾರ ತುಂಗಭದ್ರಾ ನದಿಗಳಲ್ಲಿ ಅಪಾರ ಸಂಖ್ಯೆಯಲ್ಲಿ ಅಪರೂಪದ ‘ನೀರುನಾಯಿ’ ಗಳಿವೆ (ಆಟರ್).. ಇದು ತುಂಬಾ ನಾಚಿಕೆ ಸ್ವಭಾವದ ಜೀವಿ. ನೀರು ನಾಯಿ  ಕಾರ್ಡೇಟಾ ವಂಶಕ್ಕೆ ಸೇರಿದ ...

Read More »

ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ

ಭದ್ರಾವತಿಯ ಪೂರ್ಣಪ್ರಜ್ಞ ಶಾಲಾ ವಾಹನ ನಿನ್ನೆ ಎನ್​.ಆರ್.ಪುರದ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ವೇಳೆ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಳು. 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದರು. ಇದರಲ್ಲಿ 5ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು. ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಾ ಇದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದರು ಹಾಗು ಮೃತ ವಿದ್ಯಾರ್ಥಿನಿ ಪೋಷಕರಿಗೆ ಸಾಂತ್ವನವನ್ನು ಹೇಳಿ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನೂ ಸಹ ಸಂಸದರು ನೀಡಿದರು..  

Read More »

ಶಬರಿಮಲೆ ದೇವಾಲಯ ವಿವಾದ-ಸುಪ್ರೀಂ ತೀರ್ಪಿನ ವಿರುದ್ಧ ಆಕ್ರೋಶ

  ಶಬರಿಮಲೆ ದೇವಾಲಯಕ್ಕೆ ಸ್ತ್ರೀಯರಿಗೆ ಪ್ರವೇಶದ ಹಕ್ಕನ್ನ ಕಲ್ಪಿಸಿದ ಸುಪ್ರೀಂಕೋರ್ಟ್ ನ ಆದೇಶದ ವಿರುದ್ದ ಇಂದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧೀಕಾರಿಗಳ ಮೂಲಕ ರಾಜ್ಯದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಶಿವಮೊಗ್ಗ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹೊರಟ ಶಬರಿಮಲೆ ಸಂಪ್ರದಾಯ ಉಳಿಸಿ ಪ್ರತಿಭಟನಾ ಮೆರವಣಿಗೆ ಗಾಂಧಿ ಬಜಾರ್, ಎ.ಎ.ವೃತ್ತ, ನೆಹರೂ ರಸ್ತೆ, ಗೋಪಿ ವೃತ್ತ, ಬಾಲರಾಜ್ ರಸ್ತೆ, ಕೋರ್ಟ್ ಸರ್ಕಲ್ ಮೂಲಕ ಸಾಗಿ ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ...

Read More »

ಶಾಲಾ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸ್ ಪಲ್ಟಿ : ವಿದ್ಯಾರ್ಥಿನಿ ಸಾವು.

ಭದ್ರಾವತಿಯ ಪೂರ್ಣ ಪ್ರಜ್ಞ ಶಾಲೆಯಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದ್ಯೊಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ಬೆಳ್ಳಗೆ ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕಿನ ಬಾಳೆಕೊಪ್ಪದ ಬಳಿ ನಡೆದಿದೆ. . ಬಸ್ಸಿನ ಮುಂಭಾಗದಲ್ಲಿ ಕುತ್ತಿದ್ದ ದಿಯಾ(16) ಎಂಬ ವಿದ್ಯಾರ್ಥಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದಳು. 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿದ್ದು, ಮೂವರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಮತ್ತು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ಪತ್ರೆಗೆ ದಾಖಲಾದ ಮಕ್ಕಳನ್ನು ...

Read More »

ಶರಣರ ಜನ್ಮ ಶತಮಾನೋತ್ಸವ : ಬಸವ ಕೇಂದ್ರ

ಶರಣ ಡಾ. ಸಿದ್ದಯ್ಯ ಪುರಾಣಿಕ್ ಹಾಗೂ ಶರಣ ಡಾ. ಬಸವರಾಜು ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಇಂದು ಬಸವ ಕೇಂದ್ರದಲ್ಲಿ ನಡೆಸಲಾಯಿತು. ಈ ಶರಣರು ಆಧುನಿಕ ವಚನಕಾರರು ಎಂದೇ ಪ್ರಸಿದ್ಧರಾದವರು. ಸಂಶೋಧನೆಯ ಜೊತೆಗೆ ಸೃಜನಶೀಲ ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು . ಮನಸ್ಸು ಎಷ್ಟು ಮೃದುವೋ, ವಿಷಯ ಪ್ರತಿಪಾದನೆಯಲ್ಲಿ ಅಷ್ಟೇ ಕಠಿಣ. ಇವರ ಚಿಂತನೆಗಳನ್ನು ಆದರ್ಶಗಳನ್ನು ಜನರಲ್ಲಿ ತುಂಬುವ ಹಾಗು ಅವರಿಗೆ ಅಭಿವಂದನೆ ಸಲ್ಲಿಸುವ ವಿಶೇಷ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಶ್ರೀ ಬಸವ ಮರುಳಸಿದ್ದ ಮಹಾಸ್ವಾಮಿಗಳು, ...

Read More »

ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ನಾಯಕರಿಂದ ವಿರೋಧ

ಟಿಪ್ಪು ಜಯಂತಿ ಆಚರಣೆಗೆ ಶಿವಮೊಗ್ಗ ಬಿಜೆಪಿಯ ಸ್ಥಳೀಯ ನಾಯಕರು ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ನಗರದ ಶಿವಪ್ಪನಾಯಕ ವೃತ್ತದ ಬಳಿ ಪ್ರತಿಭಟನೆಯನ್ನು ನಡೆಸಿದ್ದರು, ಪ್ರತಿಭಟನೆಯಲ್ಲಿ ಡಿ ಎಸ್ ಅರುಣ್, ದತ್ತಾತ್ರಿ , ಹಿರಣ‌್ಯಯ್ಯ ಮುಂತಾದ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ cnewstv.in ಜೊತೆ ಮಾತನಾಡಿದ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಟಿಪ್ಪು ಒಬ್ಬ ಮತಾಂಧ ಕೇವಲ ಹಿಂದೂಗಳನ್ನು ಮಾತ್ರವಲ್ಲದೆ ಕ್ರೈಸ್ತರನ್ನು ಸಹ ಮತಾಂತರ ಮಾಡುತ್ತಿದ್ದ. ಇಂತಹ ಮತಾಂಧನನ್ನು ವೈಭವೀಕರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಲ್ಲ ಇದನ್ನು ನಾವು ಖಂಡಿಸುತ್ತೇವೆ. ಈ ರೀತಿಯ ವ್ಯಕ್ತಿಗಳನ್ನು ಆರಾಧನೆ ಮಾಡುವುದು ರಾಜ್ಯ ಸರ್ಕಾರ ...

Read More »