Breaking News

Monthly Archives: November 2018

ಟಿಪ್ಪು ಜಯಂತಿಗೆ ತಯಾರಾದ ಜಿಲ್ಲಾಡಳಿತ

ಸದ್ಯ ಶಿವಮೊಗ್ಗದಲ್ಲಿ ಹಾಟ್ ಸುದ್ದಿಯಾಗಿರುವುದು ಟಿಪ್ಪು ಜಯಂತಿ. ಜಿಲ್ಲಾಡಳಿತ ರಾಜ್ಯ ಸರ್ಕಾರದ ಸೂಚನೆಯಂತೆ ಟಿಪ್ಪು ಜಯಂತಿಯನ್ನು ನಾಳೆ ನಗರದ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಗುತ್ತಿದೆ . ಇದಕ್ಕೆ ಪ್ರೊಟೋಕಾಲ್ ಪ್ರಕಾರ ಜನಪ್ರತಿನಿಧಿಗಳಿಗೆ ಆಹ್ವಾನವನ್ನು ನೀಡಲಾಗಿದೆ.ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಟಿಪ್ಪು ಜಯಂತಿ ಆಚರಣೆಯ ಬಗ್ಗೆ ವಿರೋಧವಿರುವ ಕಾರಣ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತನ್ನು ಮಾಡಲಾಗಿದೆ.ಜಯಂತಿಯಲ್ಲಿ ವೇದಿಕೆ ಕಾರ್ಯಕ್ರಮ ಮಾತ್ರ ಇದ್ದು, ಯಾವುದೇ ರೀತಿಯ ಮೆರವಣಿಗೆ ಇರುವುದಿಲ್ಲ .ರಂಗಮಂದಿರದೊಳಗೆ ಪ್ರವೇಶಿಸಲು ಪಾಸ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ...

Read More »

ಸಮ್ಮಿಶ್ರ ಪಕ್ಷದ ಎದುರು ಅರಳಿದ ಕಮಲ

ಬಹಳ ಕುತೂಹಲ ಕೆರಳಿಸಿದ್ದ ಹಾಗೂ ರಾಷ್ಟ್ರ ಮತ್ತು ರಾಜ್ಯದ ಗಮನ ಸೆಳೆದಿದ್ದ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು 52148 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ .ಇಂದು ನಡೆದ ಮತ ಎಣಿಕೆ ಕಾರ್ಯದ ಆರಂಭದಲ್ಲಿ ರಾಘವೇಂದ್ರ ಹಾಗೂ ಮಧು ಬಂಗಾರಪ್ಪ ನಡುವೆ ತೀವ್ರ ಜಿದ್ದಾಜಿದ್ದಿ ಸ್ಪರ್ಧೆ ಏರ್ಪಟ್ಟಿತ್ತು ..ಬಿವೈ ರಾಘವೇಂದ್ರ ಅವರು 5,43,306ಮತಗಳನ್ನು ಪಡೆದಿದ್ದಾರೆ. ಮೈತ್ರಿ ಪಕ್ಷದ ಅಭ್ಯರ್ಥಿ ಮಧು ಬಂಗಾರಪ್ಪನವರು 4,91,158 ಮತಗಳನ್ನು ಪಡೆದಿದ್ದಾರೆ. ಇನ್ನು ಜೆಡಿಯು ಅಭ್ಯರ್ಥಿ ಮಹಿಮಾ ಪಾಟೀಲ್ ಅವರು ಕೇವಲ 8,713 ...

Read More »

ಬಿಜೆಪಿಯಲ್ಲಿ ಸ್ಫೋಟಗೊಂಡ ಭಿನ್ನಮತ..

  ಶಿವಮೊಗ್ಗ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು, ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ಇಂದಿಗೂ ನಾನು ಒಪ್ಪಿಕೊಂಡಿಲ್ಲ. ಇದ್ದಕ್ಕಿದ್ದಂತೆ ಒಂದೂವರೆ ವರ್ಷದ ಹಿಂದೆ ನನ್ನನ್ನು ರಾಜ್ಯ ಉಪಾಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿದ್ರು. ಇದೀಗ ಚುನಾವಣೆ ಬರುತ್ತಿದ್ದಂತೆ ಮತ್ತೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ಹೀಗಾಗಿ ನಾನು ರಾಜ್ಯ ಉಪಾಧ್ಯಕ್ಷ ಸ್ಥಾನವನ್ನು ಒಪ್ಪಿಕೊಂಡಿಲ್ಲ.ಯಡಿಯೂರಪ್ಪ ಅವರು ಸರ್ಕಾರ ಉಳಿಸಬಹುದು ಹಾಗೆಯೇ ಕೆಡವಬಹುದು. ಆದ್ರೆ, ಮನಸುಗಳನ್ನು ಕಟ್ಟಲು ಆಗುವುದಿಲ್ಲ ನನ್ನ ಸೈದ್ದಾಂತಿಕ ನಿಲುವು ಹಾಗೂ ನನ್ನ ಮನಸಾಕ್ಷಿ ಒಪ್ಪುವುದಿಲ್ಲ. ನಾನು ...

Read More »

ಶಿವಮೊಗ್ಗ ಲೋಕಸಭಾ ಉಪ-ಚುನಾವಣೆ ಶಾಂತಿಯುತವಾಗಿ ನಡೆದಿದೆ.

  ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಶಾಂತಿಯುತವಾಗಿ ನಡೆದಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹೇಳಿದರು. ನಕ್ಸಲ್ ಏರಿಯಾದಲ್ಲೂ ಕೂಡ ಶಾಂತಿಯುತ ಮತದಾನವಾಗಿದೆ. ಯಾವುದೇ ರೀತಿಯ ಅಹಿಿಂತ ಕರ ಘಟನೆೆಗಳು ನಡೆದಿಲ್ಲ.ದುರಸ್ಥಿ ಹಿನ್ನೆಲೆಯಲ್ಲಿ 20 ಬಿಯು, 36ಸಿಯು, 53 ವಿವಿ ಪ್ಯಾಟ್ ಬದಲಾಯಿಸಲಾಗಿದೆ ಎಂದರು.ಇನ್ನೂಶಿ ವಮೊಗ್ಗ ಗ್ರಾಮಾಂತರ ಭಾಗದಲ್ಲಿ 69.91%‌. ಭದ್ರಾವತಿ 56.98%. ಶಿವಮೊಗ್ಗ ನಗರ 51.45%. ಶಿಕಾರಿಪುರ 79.19%.ಸೊರಬ 78.05%,ತೀರ್ಥಹಳ್ಳಿ 66.08%, ಸಾಗರ 58.38%,ಬೈಂದೂರು 55.78% ಹಾಗೂ ಒಟ್ಟು ಜಿಲ್ಲೆಯಲ್ಲಿ 65.82 % ಮತದಾನ ವಾಗಿದೆ.

Read More »

ಮುದ್ದಿನಕೊಪ್ಪ ಗ್ರಾಮದ ಕೆರೆಯಲ್ಲಿ ಶವ ಪತ್ತೆ

  ಶಿವಮೊಗ್ಗದ ಹೊರವಲಯ ಮುದ್ದಿನಕೊಪ್ಪ ಗ್ರಾಮದ ದಾಸನಕಟ್ಟೆ ಕೆರೆಯಲ್ಲಿ ಶವವೊಂದು ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಸೋಮಿನಕೊಪ್ಪದ ವಾಸಿ ಸುರಹೊನ್ನೆ ಬಾಬು ಎಂದು ಗುರುತಿಸಲಾಗಿದೆ. ಯಾರೋ ದುಷ್ಕರ್ಮಿಗಳು ಹಗ್ಗದಿಂದ ಅವರ ಕುತ್ತಿಗೆಗೆ ಬಿಗಿದು ಕೊಲೆ ಮಾಡಿ , ಯಾರಿಗೂ ತಿಳಿಯಬಾರದು ಎಂದು ಕೆರೆಯಲ್ಲಿ ತಂದು ಹಾಕಿದ್ದಾರೆ ಈ ಘಟನೆ ನಡೆದು ಸುಮಾರು 5 ರಿಂದ 6 ದಿನಗಳು ಆಗಿದೆ. ಶವವನ್ನು ಕೆರೆಯ ನೀರಿನಲ್ಲಿ ಹಾಕಿದ್ದರಿಂದ ಊದಿಕೊಂಡು ಕೊಳೆತು ವಾಸನೆ ಬರುತ್ತಿದೆ. ಪ್ರಕರಣವು ಶಿವಮೊಗ್ಗ ಕುಂಸಿ ಠಾಣೆಯಲ್ಲಿ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More »