Breaking News

Monthly Archives: June 2019

ಸ್ಮಾರ್ಟ್ ಸಿಟಿ ಕಾಮಗಾರಿ ಉಸ್ತುವಾರಿ ಸಚಿವರಿಂದ ವೀಕ್ಷಣೆ

ಶಿವಮೊಗ್ಗ ನಗರದ ವಿವಿಧ ಬಡಾವಣೆಯಲ್ಲಿ ನಡೆಯುತ್ತಿರುವ ಸ್ಮಾರ್ಟ ಸಿಟಿ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ತಮ್ಮಣ್ಣ. ಶಾಸಕರಾದ ಕೆ.ಎಸ್.ಈಶ್ವರಪ್ಪ. ಜಿಲ್ಲಾಧಿಕಾರಿ K A   ದಯಾನಂದ್. ಪಾಲಿಕೆ ಆಯುಕ್ತರು. ಉಪಮೇಯರ್ ಸೇರಿದಂತೆ ಹಲವರು ವೀಕ್ಷಣೆ ಮಾಡಿದರು.

Read More »

ಕಾರ್ನಾಡ್ ನಿಧನ: ಮೂರು ದಿನ ಶೋಕ, 1 ದಿನ ರಜೆ

  ಇಂದು ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ್ ಕಾರ್ನಾಡ್ ಅವರ ಗೌರವಾರ್ಥ ಸರ್ಕಾರಿ ಶಾಲೆ, ಕಾಲೇಜು  ಕಚೇರಿಗಳಿಗೆ  ಒಂದು ದಿನ ರಜೆ ಘೋಷಿಸಲಾಗಿದೆ ಹಾಗೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಹಾಗೂ ಮೃತರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು. ಸಾಹಿತಿ ಗಿರೀಶ್​ ಕಾರ್ನಾಡ್​ ಅವರ ಅಂತ್ಯ ಸಂಸ್ಕಾರ ಬಯ್ಯಪ್ಪನಹಳ್ಳಿಯಲ್ಲಿರುವ ಕಲ್ಪಲಿ ವಿದ್ಯುತ್​ ಚಿತಾಗಾರದಲ್ಲಿ ನಡೆಯಲಿದೆ. ಆದರೆ ಇನ್ನೂ ಸಮಯ ನಿಗದಿಯಾಗಿಲ್ಲ… ಗಿರೀಶ್​ ಕಾರ್ನಾಡ್​ ಅವರ ಅಂತಿಮ ಸಂಸ್ಕಾರಕ್ಕೆ ಸಂಬಂಧಪಟ್ಟಂತೆ ...

Read More »

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ( 81)  ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಲ್ಯಾವೆಲಿ ರಸ್ತೆಯಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಸ್ಯಾಂಡಲ್ವುಡ್ ಹಾಲಿವುಡ್ ಬಾಲಿವುಡ್ ಸಿನಿಮಾಗಳಲ್ಲಿ  ನಟಿಸಿದ್ದಾರೆ . ಗಿರೀಶ್ ಕಾರ್ನಾಡ್‌ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು.

Read More »

ಮಲೆನಾಡಲ್ಲೇ ಮಳೆ ಕ್ಷೀಣ

  ಶಿವಮೊಗ್ಗ ಎಂದಾಕ್ಷಣ ಎಲ್ಲರಿಗೂ ಮಲೆನಾಡಿನ ಹೆಬ್ಬಾಗಿಲು ಎಂದು ತಿಳಿದುಕೊಳ್ಳುತ್ತಾರೆ. ಇಲ್ಲಿ ಕಾಲಕಾಲಕ್ಕೆ ಸರಿಯಾಗಿ ಮಳೆಯಾಗುತ್ತದೆ. ಮಳೆಗಾಲದಲ್ಲಂತೂ ಕುಂಭದ್ರೋಣ ಮಳೆ ಸುರಿಯುತ್ತದೆ ಎಂಬುದು ಎಲ್ಲರ ಅಭಿಪ್ರಾಯ. ಆದರೆ ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆಯ ಪ್ರಮಾಣ ಕಡಿಮೆಯಾಗುತ್ತಿದೆ. ಜೊತೆಗೆ ಕಾಲಕಾಲಕ್ಕೆ ಆಗಬೇಕಾದ ಮಳೆಯೂ ವಾಡಿಕೆಯಷ್ಟು ಆಗುತ್ತಿಲ್ಲ. ಬಾರಿಯ ಮುಂಗಾರು ಪೂರ್ವ ಮಳೆಯನ್ನೇ ಪರಿಗಣನೆಗೆ ತೆಗೆದುಕೊಂಡರೆ ಬರೋಬ್ಬರಿ ಶೇಕಡಾ 77 ರಷ್ಟು ಮಳೆ ಕೊರತೆ ಶಿವಮೊಗ್ಗ ಜಿಲ್ಲೆಯಲಾಗಿದೆ.   ಮುಂಗಾರು ಪೂರ್ವದಲ್ಲಿ ವಾಡಿಕೆಯಷ್ಟು ಮಳೆಯಾಗದೇ ಇರುವುದರಿಂದಾಗಿ ರೈತರು ತಲೆ ಮೇಲೆ ಕೈಹೊತ್ತು ಕೂರಬೇಕಾಗ ದುಸ್ಥಿತಿ ಬಂದೊದಗಿದೆ. ...

Read More »

ಜನಮನ ಸೆಳೆದ ಮಾವು ಹಲಸು ಮೇಳ.

  ಹಣ್ಣುಗಳ ರಾಜ ಮಾವು ಹಾಗೂ ಹಲಸಿನ ಮೇಳವು ಶಿವಮೊಗ್ಗ ದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿಲಾಗಿದೆ.. ರಾಜ್ಯದ ನಾನಾ ಕಡೆಯಿಂದ ಮಾವು ಮತ್ತು ಹಲಸಿನ ವ್ಯಾಪಾರರಿಗಳು ವಿವಿಧ ತರೆವಾರಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ. ಕಣ್ಣುಹಾಯಿಸಿದಲ್ಲೆಲ್ಲಾ ಕಾಣುವ ರಸಪುರಿ, ಮಲಗೋವಾ, ತೋತಾಪುರಿ, ಮಲ್ಲಿಕಾ, ಅಲಾನ್ಸೊ, ಬಾದಾಮಿ, ಬಗನಪಲ್ಲಿ, ಲಾಂಗ್ರಾ, ಪ್ರಿನ್ಸಸ್, ವನರಾಜ, ರಾಜಗಿರಿ, ಸಿರಿ, ಆಫೂಸ್, ಕಲ್ಮಿ, ಬೆನಸಾನ್ ತಳಿಯ ಮಾವಿನ ಹಣ್ಣುಗಳು, ಸದಾನಂದ ಹಲಸು, ಬಿ.ಡಿ.ವಿ.ಟಿ. ಹಲಸು, ಕೆಂಪು ರುದ್ರಾಕ್ಷಿ, ಹಳದಿ ರುದ್ರಾಕ್ಷಿ, ಹೇಮಚಂದ್ರ, ಲಾಲ್ಬಾಗ್ ಮಧೂರ, ಮಾಂಕಾಳಿ, ಕೆಂಪು, ಹಲಸು, ವಟಗರ, ...

Read More »

ಮಹಿಳೆಯರ ಸುರಕ್ಷತೆಗೆ ಪಿಂಕ್ ಸಾರಥಿ ಆರಂಭ

  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಿಎಂಟಿಸಿಯ 25 ಪಿಂಕ್ ಸಾರಥಿ ವಾಹನಗಳಿಗೆ ಚಾಲನೆ ನೀಡಿದರು. ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರದ ನಿರ್ಭಯಾ ಯೋಜನೆಯಡಿ ಪಿಂಕ್ ಸಾರಥಿ ವಾಹನಗಳನ್ನ ನಗರದಲ್ಲಿ ಪ್ರಾರಂಭಿಸಲಾಗಿದೆ. ಇವು ಬಿಎಂಟಿಸಿ ಬಸ್ ಸಂಚಾರ ಮಾಡುವ ಮಾರ್ಗಗಳಲ್ಲಿ ಗಸ್ತು ತಿರುಗಲಿದ್ದಾವೆ. ವಿಶೇಷವಾಗಿ ರಾತ್ರಿ ವೇಳೆ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಈ ವಾಹನಗಳು ಹೆಚ್ಚಿನ ಒತ್ತು ನೀಡಲಿದೆ. ಇನ್ನೂ ಪಿಂಕ್​ ಸಾರಥಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಡಿಸಿ ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಹ್ಯಾರಿಸ್, ಬಿಎಂಟಿಸಿ ಎಂಡಿ ಎನ್.ವಿ.ಪ್ರಸಾದ್, ಭದ್ರತೆ ಮತ್ತು ...

Read More »

ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರದ ಡಬಲ್ ಧಮಾಕ; ಜಯಂತಿ ರಜೆಗೆ ಅಡ್ಡಿಯಿಲ್ಲ

  ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಾಲ್ಕನೆಯ ಶನಿವಾರ ರಜೆ ನೀಡುವ ಜತೆಯಲ್ಲಿ ವಿವಿಧ ಜಯಂತಿ ಆಚರಣೆ ವೇಳೆ ನೀಡಲಾಗುತ್ತಿದ್ದ ರಜೆಗೆ ಕತ್ತರಿ ಹಾಕಲು ಸರ್ಕಾರ ಮುಂದಾಗಿತ್ತು. ಆದರೆ, ಅದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಸರ್ಕಾರಿ ಕಚೇರಿಗಳಿಗೆ ಪ್ರತಿ ತಿಂಗಳ ನಾಲ್ಕನೆ ಶನಿವಾರ ರಜೆ ನೀಡುವುದಾಗಿ ಸರ್ಕಾರ ಪ್ರಕಟಿಸಿತ್ತು. ಅದರ ಜತೆಗೆ ಕೆಲವು ಜಯಂತಿಗಳಿಗೆ ನೀಡುತ್ತಿದ್ದ ರಜೆಯನ್ನು ರದ್ದುಗೊಳಿಸಲಾಗಿತ್ತು. ಆರನೇ ವೇತನ ಆಯೋಗ ತನ್ನ 2ನೇ ಅವಧಿಯಲ್ಲಿ ನಾಲ್ಕನೆ ಶನಿವಾರದ ರಜೆಗೆ ಕುರಿತು ಶಿಫಾರಸು ...

Read More »

ಪವಿತ್ರ ರಂಜಾನ್ ಆಚರಣೆ

ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಶಿವಮೊಗ್ಗ ಜಿಲ್ಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು. ಅದರಲ್ಲೂ ಶಿವಮೊಗ್ಗ ನಗರದ ಈದ್ಗಾ ಮೈದಾನದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಏಕಕಾಲದಲ್ಲಿ ಪವಿತ್ರ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಅಪ್ಪಿಕೊಂಡು ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳು ಹೊಸ ಬಟ್ಟೆ ಧರಿಸಿ ಪರಸ್ಪರ ಅಪ್ಪಿಕೊಂಡು ಸಂಭ್ರಮಿಸುತ್ತಿದ್ದುದು ವಿಶೇಷವಾಗಿತ್ತು. ಪ್ರಾರ್ಥನೆ ಬಳಿಕ ಮುಸ್ಲಿಂ ಸಮುದಾಯದ ಬಡವರೂ ಹಬ್ಬವನ್ನು ಸಂತಸದಿಂದ ಆಚರಣೆ ಮಾಡಲಿ ಎಂದು ಉಳ್ಳವರು ದಾನ ಮಾಡುತ್ತಿದ್ದ ದೃಷ್ಯ ಸಾಮಾನ್ಯವಾಗಿತ್ತು. ಶಿವಮೊಗ್ಗ ನಗರ ...

Read More »

ಬಿಜೆಪಿಗೆ ಶಾಕ್, ಮೈತ್ರಿಕೂಟಕ್ಕೆ ಅಲ್ಪ ಸಮಾಧಾನ

  ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಐದು ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಬಿಜೆಪಿಗೆ ಬಿಗ್ ಶಾಕ್ ನೀಡಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಅಲ್ಪ ಸಮಾಧಾನವನ್ನೂ ತಂದುಕೊಟ್ಟಿದೆ. ಅದರಲ್ಲೂ ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಸೋಲುಕಂಡಿರುವುದು ಬಿಜೆಪಿಗೆ ದೊಡ್ಡ ಶಾಕ್ ನೀಡಿದೆ. ಹತ್ತಾರು ವರ್ಷಗಳಿಂದಲೂ ಶಿಕಾರಿಪುರ ಪುರಸಭೆ ಬಿಜೆಪಿ ಹಿಡಿತದಲ್ಲೇ ಇತ್ತು. ಜೊತೆಗೆ ಶಿಕಾರಿಪುರ ಬಿಜೆಪಿ ಭದ್ರಕೋಟೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ತವರು. ಆದ್ದರಿಂದ ಈ ಬಾರಿಯೂ ಪುರಸಭೆಯ ಗದ್ದುಗೆಯನ್ನು ಬಿಜೆಪಿಯೇ ಹಿಡಿಯಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ...

Read More »