Breaking News

Monthly Archives: September 2019

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆರೋಗ್ಯ ಶಿಬಿರ ಆಯೋಜನೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನಾರಾಯಣ ಹೃದಯಾಲಯ, ಸರ್ಜಿ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ಸಹಯೋಗದೊಂದಿಗೆ ನಗರ ಬಿಜೆಪಿ ಆಯೋಜಿಸಿದ್ದ ಆರೋಗ್ಯ ಶಿಬಿರಕ್ಕೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಂಸದ ರಾಘವೇಂದ್ರ, ಪ್ರಪಂಚ ಕಂಡ ಅಪ್ರತಿಮ ನಾಯಕ ಪ್ರಧಾನಿ ಮೋದಿಯವರು. ಅವರ ಜನ್ಮದಿನದ ಅಂಗವಾಗಿ ನಮ್ಮ ಸಂಘಟನೆ ರಾಷ್ಟ್ರಾಧ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದೆ. ...

Read More »

ಜಿಲ್ಲೆಯ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಸಚಿವ ಸಿ.ಟಿ.ರವಿ

  ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 47ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, ಈ ತಾಣಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಧಾರ್ಮಿಕ, ಪ್ರಾಕೃತಿಕ, ಹೆರಿಟೇಜ್ ಸೇರಿದಂತೆ 4 ಟೂರಿಸಂ ಸಕ್ರ್ಯೂಟ್ ರೂಪಿಸಲಾಗಿದೆ. ಈ ಎಲ್ಲಾ ಪ್ರವಾಸಿ ತಾಣಗಳಿಗೆ ಸರಿಯಾದ ಸಂಪರ್ಕ ವ್ಯವಸ್ಥೆ, ವಸತಿ, ಶಾಪಿಂಗ್, ಶೌಚಾಲಯ, ಕುಡಿಯುವ ...

Read More »

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಗೆ ಸಿದ್ಧವಾದ ರಕ್ಷಣಾ ಇಲಾಖೆ

ನಾಳೆ ವಿಸರ್ಜನೆಗೊಳ್ಳುತ್ತಿರುವ ಹಿಂದೂ ಮಹಾಸಭಾ ಗಣಪತಿಯ ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಭರ್ಜರಿ ಸಿದ್ದತೆ ಮಾಡಿಕೊಂಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಓರ್ವ ಎಸ್ಪಿ, ಮೂವರು ಎಎಸ್ಪಿ, 16 ಡಿವೈಎಸ್ಪಿ, 51 ಇನ್ಸ ಸ್ಪೆಕ್ಟರ್ ಅಂಡ್ ಸಬ್ ಇನ್ ಸ್ಪೆಕ್ಟರ್, 3000 ಕ್ಕೂ ಅಧಿಕ ಪೊಲೀಸ್ ತುಕಡಿ, 14 ಕೆ.ಎಸ್.ಆರ್.ಪಿ 13 ಡಿಎಆರ್, 200 ಹೆಚ್ಚುವರಿ ಸಿಸಿ ಕ್ಯಾಮೆರಾ, 3 ಡ್ರೋಣ್ ಅಳವಡಿಸಿಕೊಳ್ಳಲಾಗಿದೆ. 700 ಜನರನ್ನ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನ ಗುರುತಿಸಿ ಅವರನ್ನ ವಿಚಾರಣೆ ನಡೆಸಲಾಗಿದೆ. ಈ ವಿಚಾರಣೆಯನ್ನ ...

Read More »

ಸಿಗಂದೂರಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಗಳ ನಡುವೆ ಡಿಕ್ಕಿ..

ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಬಳಿಯ ಶರಾವತಿಯ ಹಿನ್ನೀರಿನಲ್ಲಿ‌ಎರಡು ಲಾಂಚ್ ಗಳ‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ 500 ಕ್ಕುಹ ಹೆಚ್ಚು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ಸಂಚರಿಸುವ ಶರಾವತಿ-1 ಹಾಗೂ ಶರಾವತಿ-2 ಲಾಂಚ್ ಗಳ ನಡುವೆ ಅಂಬಾರಗೋಡ್ಲು ದಡದ ಸಮೀಪ ಡಿಕ್ಕಿ ಸಂಭವಿಸಿದೆ. ಲಾಂಚ್ ಚಾಲಕರುಗಳ ನಿರ್ಲಕ್ಷವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾಂಚ್ ಗಳ ಡಿಕ್ಕಿಯಲ್ಲಿ ಎರಡೂ ಲಾಂಚ್ ಗಳೂ ಜಖಂಗೊಂಡಿವೆ. ಆದರೆ ಸಂಚಾರ ನಡೆಸಲು ಯಾವುದೇ ಸಮಸ್ಯೆ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ಬಳಿಕವೂ ಮತ್ತೆ ಸಂಚಾರ‌ ಆರಂಭಿಸಿವೆ.

Read More »

ಸಚಿವ ನಾಗೇಶ್ ಅಣಕು ಶವಯಾತ್ರೆ.

ಶಿವಮೊಗ್ಗ :ಬಂಜಾರ ತಾಂಡಗಳ ಮನೆ ಬಾಗಿಲಿಗೆ ಮದ್ಯ ಸರಬರಾಜು ಮಾಡುವುದಾಗಿ ಹೇಳಿಕೆ ನೀಡಿರುವ ಸಚಿವ ನಾಗೇಶ್ ವಿರುದ್ಧ ಶಿವಮೊಗ್ಗದಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗದ ಬಸ್ ನಿಲ್ದಾಣದಿಂದ ಗೋಪಿವೃತ್ತದವರೆಗೆ ಸಚಿವ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದ ಬಂಜಾರ ಸಮುದಾಯದವರು ಸಚಿವ ನಾಗೇಶ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಾಗೇಶ್ ಬಂಜಾರ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಕಾರರು ತಮಟೆ, ಚಟ್ಟದೊಂದಿಗೆ ನಾಗೇಶ್ ಅವರ ಅಣಕು ಶವಯಾತ್ರೆ ನಡೆಸಿದರು. ಬಳಿಕ ಗೋಪಿ ವೃತ್ತದಲ್ಲಿ ನಾಗೇಶ್ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದರು. ಬಳಿಕ ನಾಗೇಶ್ ...

Read More »

ಮದ್ಯಪಾನ ಮಾಡಿದ್ದ ಕಾರು ಚಾಲಕನಿಗೆ ಬಿತ್ತು ಭಾರಿ ದಂಡ

ಶಿವಮೊಗ್ಗ: ಮದ್ಯಪಾನ ಮಾಡಿ ಕಾರು ಚಾಲನೆ ಮಾಡುತ್ತಿದ್ದ ಚಾಲಕನೊಬ್ಬ ದೊಡ್ಡ ಮೊತ್ತದ ದಂಡ ಪಾವತಿಸಿದ್ದಾನೆ. ನೂತನ ವಾಹನ ಕಾಯ್ದೆ ಅಡಿ ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ. ಹೌದು ಸಂಚಾರ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬರು ಬರೋಬ್ಬರಿ 12 ಸಾವಿರ ರೂ. ದಂಡ ತೆತ್ತಿದ್ದಾರೆ. ಶಿಕಾರಿಪುರದ ವ್ಯಕ್ತಿಯೊಬ್ಬರಿಗೆ ಶಿವಮೊಗ್ಗದ 3ನೇ ಜೆಎಂಎಫ್‌ಸಿ ನ್ಯಾಯಾಲಯವು 12 ಸಾವಿರ ರೂ. ದಂಡ ವಿಧಿಸಿದೆ. ಕುಡಿದು ವಾಹನ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರು ಕಾರು ಚಲಾಯಿಸುತ್ತಿದ್ದರು. ಈ ವೇಳೆ ಸಂಚಾರ ಪೊಲೀಸರು ವಾಹನ ತಡೆದು ತಪಾಸಣೆ ...

Read More »

ಪಾಲಿಕೆ ಸಭೆಯಲ್ಲಿ ವಾಕ್ಸಮರ

https://youtu.be/vqxYLZMLZpM ಶಿವಮೊಗ್ಗ: ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿಲ್ಲ ಎಂದು ಮಹಾನಗರ ಪಾಲಿಕೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ದಸರಾ ಆಚರಣೆ ಅಂಗವಾಗಿ ನಡೆದ ಪಾಲಿಕೆ ವಿಶೇಷ ಸಭೆಯ ಆರಂಭದಲ್ಲೇ ನೆರೆ ಸಂತ್ರಸ್ತರ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಮೊದಲು ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿ. ಈಗ ನೀಡುತ್ತಿರುವ ಪರಿಹಾರದಲ್ಲೂ ಕೆಲವರು ಕಮಿಷನ್ ಪಡೆಯುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಸಂತ್ರಸ್ತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.. ...

Read More »

ಬೈಕ್ ಲಾರಿ ಮುಖಾಮುಖಿ ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು

  ಸಾಗರ : ತಾಳಗುಪ್ಪದ ಚೂರಿಕಟ್ಟೆ ಬಳಿ ಮೀನಿನ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರರು ಸಿದ್ಧಾಪುರ ತಾಲ್ಲೂಕಿನ ಹೊಸೂರು ಗ್ರಾಮದವರು. ಸಂದೀಪ್(22),ವಿನಾಯಕ(25) ಮೃತ ಯುವಕರು. ಸಾಗರ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.. ಇಮ್ರಾನ್ ಸಾಗರ್ Contact For advertisement 7676236690

Read More »

ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಬುಧವಾರ ಸಂಜೆ ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವೈದ್ಯರೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು. ಮೆಗ್ಗಾನ್ ಆಸ್ಪತ್ರೆಯ ಬಗ್ಗೆ, ಇಲ್ಲಿನ ವೈದ್ಯರ ಬಗ್ಗೆ ದಿನನಿತ್ಯ ನಿರಂತರ ದೂರುಗಳು ಬರುತ್ತಿವೆ. ವೈದ್ಯರು ಹಾಗೂ ಆಡಳಿತ ನಡುವೆ ಸಮನ್ವಯದ ಕೊರತೆ ಕಾಣಿಸುತ್ತಿದೆ. ಇನ್ನು ಮುಂದೆ ಈ ರೀತಿಯ ಯಾವುದೇ ದೂರುಗಳು ಬಾರದಂತೆ ಕೆಲಸ ಮಾಡಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.. Contact for Advertisement : 7676236690 

Read More »