ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ...
Read More »Monthly Archives: December 2019
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ 19ಕ್ಕೆ
ಶಿವಮೊಗ್ಗ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲವೇ. ಹೀಗೊಂದು ಪ್ರಶ್ನೆ ಇದೀಗ ಉದ್ಭವಿಸಿದೆ. ಎರಡು ದಿನಗಳ ಹಿಂದೆ ಕಾಯ್ದೆ ವಿರೋಧಿಸಿ ಶಿವಮೊಗ್ಗದ ಗಾಂಧಿ ಪಾರ್ಕ್ ನ ಗಾಂಧಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಡಿಸೆಂಬರ್ 19 ರಂದು ಜಿಲ್ಲಾ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಆದರೆ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ...
Read More »3 ದಿನಗಳ ಕಾಲ ನಡೆಯಲಿರುವ ಪೋಲಿಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆ – ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಇಂದು ಪೊಲೀಸ್ ಇಲಾಖೆಯು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 3 ದಿನಗಳ ಕಾಲ ನಡೆಯ ಲಿರುವ ವಾರ್ಷಿಕ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉದ್ಘಾಟಿಸಿದರು. ಪೊಲೀಸರು ತಮ್ಮ ವೃತ್ತಿ ಬದುಕಿನಲ್ಲಿ ಶಿಸ್ತು ರೂಢಿಸಿಕೊಂಡು ಸದಾ ಜಾಗೃತವಾಗಿರಬೇಕು. ತಮ್ಮ ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳುವುದರ ಜೊತೆಗೆ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲರೂ ವಿಜಯಿಗಳಾಗುವುದು ಸಾಧ್ಯವಿಲ್ಲದಿರಬಹುದು. ಆದರೆ ಗೆಲ್ಲುವ ಪ್ರಯತ್ನದಿಂದ ಹಿಂದೆ ಸರಿಯಬಾರದು. ಕ್ರೀಡೆಯಲ್ಲಿ ಸ್ಪರ್ಧಾಭಾವನೆ ಬಹುಮುಖ್ಯ. ಎಲ್ಲಾ ಸಂಘಟಿತವಾದ ಪ್ರಯತ್ನಕ್ಕೆ ಜಯ ಖಂಡಿತ ಲಭಿಸುತ್ತದೆ ಎಂದರು. ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ.ಶಾಂತರಾಜು, ...
Read More »ಪೌರತ್ವ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಧರಣಿ – ಬಂಧನ – ಬಿಡುಗಡೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕೆ.ಬಿ.ಪ್ರಸನ್ನ ಕುಮಾರ್ ನೇತೃತ್ವದಲ್ಲಿ ನಗರದ ಮಹಾತ್ಮಾಗಾಂಧಿ ಪ್ರತಿಮೆ ಬಳಿ ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಮೂಲಕ ದೇಶದ ಅಖಂಡತೆಗೆ ಭಂಗ ತಂದಿದೆ. ಜನ ಆತಂಕದಲ್ಲಿದ್ದಾರೆ ಎಂದು ಪ್ರತಿಭಟನಾನಿರತರು ದೂರಿದರು. ಕಾಯ್ದೆ ತಿದ್ದುಪಡಿ ಕೈಬಿಟ್ಟು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಉಳಿಸಬೇಕು. ಧರ್ಮಾಂಧತೆಯ ಆಧಾರದ ಮೇಲೆ ಯಾವುದೇ ಕಾಯ್ದೆಗಳನ್ನು ರಚಿಸಬಾರದು ಎಂದು ಧರಣಿ ನಿರತರು ಆಗ್ರಹಿಸಿದರು. ದೇಶದ ಐಕ್ಯತೆಗೆ ಮಾರಕವಾಗಿರುವ ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ, ...
Read More »ಹಾಲಿವುಡ್ ನಲ್ಲಿ ಮಲೆನಾಡ ಪ್ರತಿಭೆ
ಶಿವಮೊಗ್ಗ: ಹಾಲಿವುಡ್ ಚಿತ್ರರಂಗದಲ್ಲಿ ಮಲೆನಾಡಿನ ಪ್ರತಿಭೆ ಪೂರ್ವ ಹೊಸ ಸಂಚಲನ ಮೂಡಿಸುತ್ತಿದ್ದಾರೆ. ಡೈರಿ ಫ್ರೆಶ್ ಮಾಲೀಕರಾದ ಶಿವಮೊಗ್ಗದ ಗೋಪಾಳದ ಶಿವಕುಮಾರ್ ಹಾಗೂ ವೀಣಾ ದಂಪತಿಯ ಪುತ್ರರಾಗಿರುವ ಪೂರ್ವ ಪ್ರಸ್ತುತ ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಲಾಸ್ ಎಂಜಲೀಸ್ ನಲ್ಲಿ ಎಂಎಫ್ ಎ ಇನ್ ಮಾಸ್ಟರ್ ಕೋರ್ಸ್ ಮುಗಿಸಿರುವ ಪೂರ್ವ ಇದೀಗ ಹಾಲಿವುಡ್ ನ ಹೊಸ ಚಿತ್ರದ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಆರಂಭದ ದಿನಗಳಿಂದಲೂ ಹಾಲಿವುಡ್ ಚಿತ್ರರಂಗದ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಪೂರ್ವ ಲಾಸ್ ಎಂಜಲೀಸ್ ನಲ್ಲಿ ಎಂಎಫ್ ಎ ಕೋರ್ಸ್ ಮಾಡಿ ಈಗಾಗಲೇ ಹಾಲಿವುಡ್ ...
Read More »ಜನರು ಇಟ್ಟ ನಂಬಿಕೆ ಗೆ ನಾವು ಮೋಸ ಮಾಡಿಲ್ಲ, ಉತ್ತಮ ಆಡಳಿತ ನಡೆಸಿದ್ದೇವೆ- ಎಸ್ ಎನ್ ಚನ್ನಬಸಪ್ಪ
ಶಿವಮೊಗ್ಗ: ಇಂದು ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದರು ಮಹಾನಗರ ಪಾಲಿಕೆ ಉಪಮೇಯರ್ ಎಸ್ ಎನ್ ಚನ್ನಬಸಪ್ಪ,, ಮಹಾನಗರಪಾಲಿಕೆಯಲ್ಲಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಆಡಳಿತ ಮಂಡಳಿ ಉತ್ತಮ ಕೆಲಸ ಮಾಡುವ ಮೂಲಕ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಇವುಗಳನ್ನು ಮಾಡುವ ಸಂದರ್ಭದಲ್ಲಿ ನಾಗರಿಕರಿಗೆ ಒಂದಿಷ್ಟು ತೊಂದರೆಯಾಗಿರುವುದು ನಿಜ. ಆದರೆ ಅಭಿವೃದಿಯಾಗಬೇಕಾದರೆ ಸಣ್ಣಪುಟ್ಟ ತೊಂದರೆಗಳು ಸಹಜವಾಗಿರುತ್ತದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತವೆ. ಈಗಾಗಲೇ ಅಭಿವೃದಿಯ ಉತ್ತಮ ಹೆಜ್ಜೆ ಇಟ್ಟಿದ್ದೇವೆ. ಮುಂದಿನ ಎರಡು ವರ್ಷಗಳ ಅವಧಿ ಯಲ್ಲಿ ...
Read More »ಗೋಡೆಗೆ ಬಾಳೆಹಣ್ಣು ಅಂಟಿಸಿ ‘ಆರ್ಟ್’ ಅಂದ್ರು, ₹85 ಲಕ್ಷ ಕೊಟ್ಟು ತಗೊಂಡುಹೋದ್ರು..!
ಮಿಯಾಮಿ: ಖಾಲಿ ಗೋಡೆಯೊಂದರ ಮೇಲೆ ಟೇಪ್ ಹಾಕಿ ಬಾಳೆ ಹಣ್ಣು ಅಂಟಿಸಿದ್ದಾರೆ. ಆ ಗೋಡೆ ಮೇಲೆ ಒಂದು ಬಾಳೆ ಹಣ್ಣು, ಅದರ ಮೇಲೊಂದು ಟೇಪ್ ಅಂಟಿಸಿರೋದು ಬಿಟ್ರೆ ಬೇರೇನೂ ಇಲ್ಲ. ಹಿಂಗೆ ಬಾಳೆಹಣ್ಣು ಅಂಟಿಸಿದ್ದನ್ನ ನೋಡಿದ ಜನ ವಾವ್, ಆಸಮ್..ಬ್ರಿಲಿಯಂಟ್..ಮಾರ್ವಲಸ್ ಅಂತ ಇರೋಬರೋ ಪದಗಳನ್ನ ಬಳಸಿ ಇದೆಂಥಾ ಅದ್ಭುತ ಕಲೆ ಅಂತ ಹೊಗಳಿದ್ದಾರೆ. ಅಷ್ಟೇ ಯಾಕೆ, ಇದು ನನಗೇ ಬೇಕು ಅಂತ ಪೇಂಟಿಂಗ್ಗಳನ್ನ ಕೆಲಕ್ಟ್ ಮಾಡಿ ಇಡೋ ವ್ಯಕ್ತಿಯೊಬ್ಬ ಬರೋಬ್ಬರಿ 85 ಲಕ್ಷ ಕೊಟ್ಟು ಆ ಬಾಳೆಹಣ್ಣು ಮತ್ತು ಡಕ್ಟ್ ಟೇಪ್ ತಗೊಂಡು ...
Read More »ತುಂಗಾ ನದಿಗೆ ಹಾರಿ ಆಹಾರ ನಿರೀಕ್ಷಕ ಆತ್ಮಹತ್ಯೆ.
ಶಿವಮೊಗ್ಗ : ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಐ.ಡಿ.ದತ್ತಾತ್ರೇಯ ಶನಿವಾರ ಬೆಳಿಗ್ಗೆ ಮಂಡಗದ್ದೆ ಸಮೀಪದ ಮುಡುಬಾ ಬಳಿ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಡಾರೆ. ಘಟನೆ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫುಡ್ ಇನ್ಸಪೆಕ್ಟರ್ ದತ್ತಾತ್ರೇಯಾ ಈ ಮುನ್ನ ತಾಲೂಕಿನ ನಗರದಲ್ಲಿ ವಿಎ ಆಗಿ ಆರ್.ಐ ಆಗಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯರವರು ಪತ್ನಿ, ಹಾಗು ನಾಲ್ವರು ...
Read More »Malleswaram footpaths leave people dancing
BBMP may say ‘We are running aerobic classes in public places.” BENGALURU: Bharatanatyam is an essential skill to walk on Malleswaram footpaths and that is what this satirical dance video made by a group of citizens, tries to portray. The clip starts with two pedestrians who come upon a broken footpath, filled with debris and broken slabs. They have to ...
Read More »ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ : ಇಬ್ಬರ ಬಂಧನ.
ಸಾಗರ : ಬಂಗಾರದ ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ನಕಲಿ ನಾಣ್ಯಗಳನ್ನು ನೀಡಿದ ಆರೋಪದ ಮೇಲೆ ಇಬ್ಬರನ್ನು ಸಾಗರ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ. ಹೊಸದುರ್ಗದ ಸತೀಶ್ (28),ಕಡೂರಿನ ಮಂಜು (25) ಬಂದಿತ ಆರೋಪಿಗಳು. ನಿತ್ಯಾನಂದ ಎಂಬುವವರಿಗೆ ಬಂಗಾರದ ನಾಣ್ಯ ನೀಡುವುದಾಗಿ 1.30.000 ರೂ.ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಇಂದು ಬೆಳಗ್ಗೆ ತ್ಯಾಗರ್ತಿ ಕ್ರಾಸ್ ಬಳಿ ಇಬ್ಬರನ್ನು ವಶಕ್ಕೆ ಪಡೆದಿದ್ದು,ಬಂದಿತರಿಂದ 1ಲಕ್ಷ ನಗದು ಹಣ,3 ಲಕ್ಷ ಬೆಲೆಯ ಟಾಟಾ ಏಸ್ ವಾಹನ ಹಾಗೂ ನಕಲಿ ಬಂಗಾರವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಹೆಚ್ಚುವರಿ ...
Read More »
C News TV Kannada News Online in cnewstv