Breaking News

Monthly Archives: January 2020

ಸಚಿವರೇ ಸಿಮ್ಸ್‌ಗೆ ಹೋಗದಿದ್ದರೆ ಗತಿ ಏನು?: ಮಾಜಿ ಶಾಸಕ ಕೆಬಿಪಿ ಪ್ರಶ್ನೆ

ಶಿವಮೊಗ್ಗ: ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಸಿಮ್ಸ್ ನಿರ್ದೇಶಕ ಡಾ. ಲೇಪಾಕ್ಷಿ ಅವರನ್ನು ನಿಂದಿಸಿರುವುದು ಸರಿ ಅಲ್ಲ ಎಂದು ಮಾಜಿ ಸಚಿವ ಕೆ.ಬಿ. ಪ್ರಸನ್ನ ಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈಶ್ವರಪ್ಪ ಅವರು ಡಾ. ಲೇಪಾಕ್ಷಿ ಅವರು ಇರುವ ವರೆಗೂ ಸಿಮ್ಸ್‌ಗೆ ಕಾಲಿಡುವುದಿಲ್ಲ ಎನ್ನುತ್ತಿದ್ದಾರೆ. ಇದು ಜನಪ್ರತಿನಿಧಿಯೊಬ್ಬರು ನಡೆದುಕೊಳ್ಳುವ ರೀತಿಯೇ? ಅವರು ಆಸ್ಪತ್ರೆಗೆ ಕಾಲಿಡದಿದ್ದರೆ ಅಲ್ಲಿಯ ಅವ್ಯವಸ್ಥೆಗಳನ್ನು ಸರಿ ಮಾಡುವವರು ಯಾರು? ರೋಗಿಗಳಿಗೆ ತೊಂದರೆ ಆದರೆ ಅದರ ಜವಾಬ್ದಾರಿ ಯಾರದು ಎಂದಿದ್ದಾರೆ. ಅಧಿಕಾರಿಯೊಬ್ಬರನ್ನು ಬಹಿರಂಗವಾಗಿಯೇ ಎಲ್ಲರ ...

Read More »

ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು

ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.

Read More »

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಿಡೀರ್ ರಸ್ತೆ ತಡೆ : ಪೊಲೀಸರಿಂದ ಸಿಕ್ತು ಲಾಠಿ ರುಚಿ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ಸಂಜೆ ದಿಢೀರ್ ರಸ್ತೆ ತಡೆ ನಡೆಸಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲವೆಂದು ಆಗ್ರಹಿಸಿ ಕಾರ್ಯಕರ್ತರು ಅಮೀರ್ ಅಹಮ್ಮದ್ ವೃತ್ತದ ಬಳಿ ಬಿ.ಎಚ್.ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರನ್ನು ಚದುರಿಸಿದರು.   ಘಟನೆ ವಿವರ: ಪೌರತ್ವ ಕಾಯ್ದೆ ವಿರುದ್ಧ ಜ.3ರಂದು ನಗರದಲ್ಲಿ ಪ್ರತಿಭಟನೆಗೆ ಅವಕಾಶ ನೀಡಬೇಕೆಂದು ವಿವಿಧ ಮುಸ್ಲಿಂ ಸಂಘಟನೆಗಳು ಜಿಲ್ಲಾಡಳಿತಕ್ಕೆ ಅನುಮತಿ ...

Read More »