Breaking News

Monthly Archives: October 2020

ಜಿಲ್ಲೆಯಲ್ಲಿ ಕಡಿಮೆಯಾದ ಕರೋನಾ ಪಾಸಿಟಿವ್ ಪ್ರಕರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕಳೆದ ತಿಂಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳು ಕಡಿಮೆಯಾಗಿದ್ದು, ಶೇಕಡಾ 6.6 ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಕರೊನಾ ನಿಯಂತ್ರಣ ಕುರಿತು ಮುಖ್ಯಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಜಿಲ್ಲೆಯ ಅಂಕಿಅಂಶಗಳ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಕಳೆದ ತಿಂಗಳು ಕರೋನಾ ಪಾಸಿಟಿವ್ ಪ್ರಕರಣಗಳು ಶೇ.25ರಷ್ಟು ಇತ್ತು. ಇದೀಗ ಶೇ.6.6 ಗೆ ಇಳಿದಿದೆ. ಇದೇ ರೀತಿ ಕರೋನಾ ಸಾವಿನ ಪ್ರಮಾಣದಲ್ಲಿಯೂ ಗಣನೀಯವಾದ ಇಳಿಕೆ ಕಂಡು ಬಂದಿದೆ. ಶೇ.2.5ರಷ್ಟಿದ್ದ ಸಾವಿನ ಪ್ರಮಾಣ ಇದೀಗ 0.9ಕ್ಕೆ ಇಳಿದಿದೆ. ಇದೇ ...

Read More »

ಅಕ್ಟೋಬರ್ 9 & 10 ರಂದು ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ

ಶಿವಮೊಗ್ಗ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿಯು ಪ್ರಗತಿಯಲ್ಲಿರುವುದರಿಂದ 110/11 ಕೆ.ವಿ. ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2 ಕುಂಸಿ, ಎಫ್-3 ಸಿರಿಗೆರೆ, ಎಫ್-9 ಆಯನೂರು, ಎಫ್-10 ಹಾರ್ನಳ್ಳಿ ಮಾರ್ಗಗಳಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಹಾರ್ನಳ್ಳಿ, ರಾಮನಗರ, ಕೆಸವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುಮಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ಟೋಬರ್-09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಸಂಜೆ 06 ...

Read More »

ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಧರಣಿ

  ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿ ಪಾರ್ಕಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹವನ್ನು ಮಾಡಲಾಯಿತು. ದೇಶದಲ್ಲಿರುವ ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಮುಂತಾದ ಪ್ರಕರಣಗಳು ನಡೆಯುತ್ತಿದ್ದರೂ ಸಹ ಕೇಂದ್ರ ಸರ್ಕಾರ ಮೌನ ವಹಿಸುತ್ತಿದೆ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಇಡೀ ದೇಶದ ಜನರ ನೆಮ್ಮದಿಯನ್ನು ಹಾಳು ಮಾಡಿದೆ. ಉತ್ತರ ಪ್ರದೇಶದ ಹಾಥರಸ್ ಗಾಮ್ರದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉತ್ತರಪ್ರದೇಶ ಸರ್ಕಾರ ಮುಚ್ಚಿಹಾಕುವ ಪ್ರಯತ್ನ ಮಾಡ್ತಾ ಇದೆ ಎಂದು ಜಿಲ್ಲಾ ಕಾಂಗ್ರೆಸ್ ...

Read More »

ಬಲಿಪಡೆಯಲು ಕಾಯುತ್ತಿದೆ ಸ್ಮಾರ್ಟ್ ಸಿಟಿ ಕಾಮಗಾರಿ

  ಶಿವಮೊಗ್ಗ: ಶಿವಮೊಗ್ಗ ನಗರಾದ್ಯಂತ ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಿದ್ದು, ಅವೈಜ್ಞಾನಿಕ ಕಾಮಗಾರಿಗಳು ಜನರ ಬಲಿಪಡೆಯಲು ಬಾಯ್ದೆರೆದು ಕುಳಿತಿವೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೆಲಸ ನಡಿಯುತ್ತಿದ್ದು, ರಸ್ತೆ ಮೇಲೆ ಅವೈಜ್ಞಾನಿಕವಾಗಿ ಗುಂಡಿಗಳನ್ನು ತೆಗೆದಿದ್ದರಿಂದಾಗಿ ವಿದ್ಯುತ್ ಕಂಬಗಳು ರಸ್ತೆಗೆ ವಾಲಲಾರಂಭಿಸಿವೆ. ಒಂದು ವೇಳೆ ವಿದ್ಯುತ್ ತಂತಿ ವಾಹನಗಳಿಗೆ ತಗುಲಿದರೆ ಬಾರಿ ಪ್ರಾಣಾಪಾಯವಾಗುವ ಸಾಧ್ಯತೆಯಿದೆ. ಕೂಡಲೇ ಸಂಬಂಧಿಸಿದವರು ಸಮರ್ಪಕ‌ ಕಾಮಗಾರಿ‌ ನಡೆಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Read More »

ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ : ಶ್ರೀ ಪ್ರಸನ್ನನಾಥ ಸ್ವಾಮೀಜಿ

ಶಿವಮೊಗ್ಗ: ರೈತರನ್ನು ದೇವರು ಎಂದು ಪರಿಗಣಿಸಿ ತಮ್ಮಿಂದ ಆದಷ್ಟು ಸಹಕಾರವನ್ನು ನೀಡಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖಾ ಮಠಾಧೀಶರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇಂದು ಡಿಸಿಸಿ ಬ್ಯಾಂಕ್‍ನ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಸಲಹೆ ನೀಡಿದ್ದಾರೆ. ಇಂದು ನವೀಕೃತಗೊಂಡ ಬ್ಯಾಂಕಿನ ಎಲ್ಲ ವಿಭಾಗಗಳಿಗೆ ಭೇಟಿ ನೀಡಿದ ಬಳಿಕ ಬ್ಯಾಂಕ್ ಆಡಳಿತ ಮಂಡಳಿಗೆ ಮತ್ತು ಸಿಬ್ಬಂದಿಗಳಿಗೆ ಆಶೀರ್ವಚನ ನೀಡಿದರು. ಇತ್ತೀಚೆಗೆ ಉದ್ಗಾಟನಾ ಸಂದರ್ಭದಲ್ಲಿ ಅನಿವಾರ್ಯ ಕಾರಣದಿಂದ ಭೇಟಿ ನೀಡಲು ಆಗಲಿಲ್ಲ ಎಂದು ತಿಳಿಸಿದ ಅವರು, ಬಡ ರೈತರಿಗೆ ಜಿಲ್ಲಾ ಸಹಕಾರಿ ...

Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ

ಶಿವಮೊಗ್ಗ : ಗರ್ಬಿಣಿ, ಬಾಣಂತಿಯರಿಗೆ, ಮಕ್ಕಳಿಗೆ ಸಮರ್ಪಕವಾಗಿ ಪೌಷ್ಠಿಕ ಆಹಾರ ಒದಗಿಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಕೇಂದ್ರ‌ಸರ್ಕಾರ ಡಿಜಿಟಲ್ ಇಂಡಿಯಾದ ಪೋಷಣ್ ಅಭಿಯಾನದ ಅಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಿಸಲಾಗಿತ್ತಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ 2439 ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಮೊಬೈಲ್ ವಿತರಿಸಲಾಯಿತು. ಪೇಪರ್‌ಲೆಸ್ ಆಫೀಸ್ ಕಾನ್ಸೆಪ್ಟ್ ಅಡಿ ಮೊಬೈಲ್ ವಿತರಿಸಲಾಗುತ್ತಿದೆ. ಕಾಮನ್ ಅಪ್ಲಿಕೇಷನ್ ಸಿಸ್ಟಮ್ ಹಾಗೂ ಸ್ನೇಹ ಆ್ಯಪ್ ಅಳವಡಿಸಿಕೊಂಡು ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಈ ಮೊಬೈಲ್ ಅನುಕೂಲವಾಗಲಿದೆ. ಸಂಸದ ಬಿ.ವೈ.ರಾಘವೇಂದ್ರ‌ ಹಾಗೂ ಜಿಲ್ಲಾ ಉಸ್ತುವಾರಿ ...

Read More »

ರಾಜ್ಯ ಕಾಂಗ್ರೆಸ್ ಗೆ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು

  ಶಿವಮೊಗ್ಗ : ಕೃಷಿ ಮಸೂದೆ ಬಗ್ಗೆ ಮೊದಲು 2012ರಲ್ಲಿ ಚರ್ಚೆ ಮಾಡಿದ್ದೇ ಅಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ. ರಾಜ್ಯ ಕಾಂಗ್ರೆಸ್ ನಾಯಕರಿಗೆ ತಾಕತ್ತಿದ್ದರೆ ಮನಮೋಹನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಕೇಂದ್ರ ಕಾಂಗ್ರೆಸ್ ಗೆ ಶಿಫಾರಸ್ಸು ಮಾಡಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಕಾಂಗ್ರೆಸ್ ಚರ್ಚಿಸಿದ್ದ ಮಸೂದೆಯನ್ನೇ‌ ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೆ ಈ ಮಸೂದೆ ಬಗ್ಗೆ ಇದೀಗ ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ.ಕೂಡಲೇ ರಾಜ್ಯದ ...

Read More »

ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ: ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಜಿಲ್ಲೆಯ 271ಗ್ರಾಮ ಪಂಚಾಯತ್‍ಗಳ ಪೈಕಿ 201 ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದ್ದು, ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಪ್ರತಿ ಗ್ರಾಮ ಪಂಚಾಯತ್‍ಗೆ ತಲಾ 20ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್‍ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ...

Read More »

ಶಿವಮೊಗ್ಗದಲ್ಲಿ ಗಾಂಧೀಜಿ ಅವರ ಕುರುಹುಗಳೇನು ಗೊತ್ತಾ ??

  ಶಿವಮೊಗ್ಗ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ‌ ಮಹಾತ್ಮ ಗಾಂಧೀಜಿ ಶಿವಮೊಗ್ಗಕ್ಕೂ ಬಂದಿದ್ದರು.‌ ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ವಾರ ಪ್ರವಾಸ ಕೈಗೊಂಡಿದ್ದ‌ ಗಾಂಧೀಜಿ ಅವರು ಉಳಿಸಿಹೋಗಿರುವ ಕುರುಹುಗಳು ಇನ್ನೂ ಶಿವಮೊಗ್ಗದಲ್ಲಿವೆ. ಈ ಕುರುಹುಗಳನ್ನು ನೋಡಿದಾಗ ಮಹಾತ್ಮಾ ಗಾಂಧಿಜಿ ಮತ್ತೆ ಮತ್ತೆ ನಮಗೆ ನೆನಪಾಗುತ್ತಾರೆ. ಗಾಂಧಿಜಿ ಅವರು ಶಿವಮೊಗ್ಗದಲ್ಲಿ ಉಳಿಸಿರುವ ಕುರುಹುಗಳೇನು ಎಂಬ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. ವಕೀಲ ದಿವಂಗತ ವೆಂಕಟಸುಬ್ಬ ಶಾಸ್ತ್ರಿ ಅವರ ಸತತ ಪ್ರಯತ್ನದ ಫಲವಾಗಿ ಮಹಾತ್ಮಾ‌ ಗಾಂಧೀಜಿ ಹಾಗೂ ಅವರ ಪತ್ನಿ ಕಸ್ತೂರ‌ ಬಾ ಅವರು 1927ರ ಆಗಸ್ಟ್ 14 ರಂದು ...

Read More »

ಮಾಸ್ಕ್ ಧರಿಸದವರಿಗೆ ದಂಡ‌ ಹಾಕುತ್ತಿರುವ ಪೊಲೀಸರು.

  ಶಿವಮೊಗ್ಗ : ಕರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮಾಸ್ಕ್ ಬಳಕೆ ಮಾಡಿರುವ ರಾಜ್ಯ ಸರ್ಕಾರ ನಗರ ಪ್ರದೇಶಗಳಲ್ಲಿ ಮಾಸ್ಕ್ ಧರಿಸದವರಿಗೆ 1000 ರೂಪಾಯಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂಪಾಯಿ ದಂಡ ವಿಧಿಸಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲೂ ಪೊಲೀಸರು ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿ ಮಾಸ್ಕ್ ಧರಿಸದಿರುವ ಸಾರ್ವಜನಿಕರಿಗೆ ದಂಡ ವಿಧಿಸಲಾರಂಭಿಸಿದ್ದಾರೆ. ಶಿವಮೊಗ್ಗದಲ್ಲಿ ಪ್ರಾಯೋಗಿಕವಾಗಿ ಮಾಸ್ಕ್ ಧರಿಸದವರಿಗೆ 200 ರೂಪಾಯಿ ದಂಡ ವಿಧಿಸುತ್ತಿದ್ದಾರೆ. ಶಿವಮೊಗ್ಗದ ವಿವಿಧ ಸರ್ಕಲ್ ಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಮಾಸ್ಕ್ ಧರಿಸದವರನ್ನು ನಿಲ್ಲಿಸಿ ದಂಡ ವಿಧಿಸಲಾಗುತ್ತಿದೆ. ನಾಳಿನಿಂದ ಯಾರು ...

Read More »