ಶಿವಮೊಗ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜಾಮೀನು ಪಡೆದಿರುವ 6ನೇ ಆರೋಪಿ ಜಗದೀಶ್ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬುಧವಾರ ಸಂಜೆ ಬಿಡುಗಡೆಯಾಗಿದ್ದಾನೆ. ಕಳೆದ ವಾರವೇ ನ್ಯಾಯಾಲಯವು ಏಳು ಮಂದಿಗೆ ಜಾಮೀನು ನೀಡಿದರೂ ಐವರು ಮಾತ್ರ ಜಾಮೀನು ಷರತ್ತುಗಳನ್ನು ಪೂರೈಸಿದ್ದರಿಂದ ಅವರನ್ನು ಮಂಗಳವಾರವೇ ಬಿಡುಗಡೆಗೊಳಿಸಲಾಗಿತ್ತು. ಎ-6 ಜಗದೀಶ್ ಒಂದು ದಿನ ತಡವಾಗಿ ಜಾಮೀನು ಷರತ್ತು ಪೂರೈಸಿದ ಹಿನ್ನೆಲೆ ಬುಧವಾರ ಸಂಜೆ ಬಿಡುಗಡೆ ಮಾಡಲಾಗಿದೆ. ಜಗದೀಶ್ ಚಿತ್ರದುರ್ಗದಲ್ಲಿ ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ಯುವ ತಂಡದಲ್ಲಿದ್ದ ಜಗದೀಶ್ 6 ನೇ ಆರೋಪಿಯಾಗಿದ್ದ. ಪರಪ್ಪನ ...
Read More »Monthly Archives: December 2024
ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು
ಶಿವಮೊಗ್ಗ: ಸೊರಬ ಶಾಸಕ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಆಹ್ವಾನದ ಮೇರೆಗೆ ಸೊರಬ ತಾಲೂಕಿನ ವಿವಿಧ ಪಿಯು ಕಾಲೇಜಿನ ವಿದ್ಯಾರ್ಥಿಗಳು ಬೆಳಗಾವಿಗೆ ಭೇಟಿ ನೀಡಿ, ಚಳಿಗಾಲದ ಅಧಿವೇಶನ ವೀಕ್ಷಿಸಿದ್ದಾರೆ. ಸೊರಬದ ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವುದಕ್ಕೆ ಉಭಯ ಸದನದ ಸಭಾಪತಿಗಳಿಂದ ಸಚಿವ ಮಧು ಬಂಗಾರಪ್ಪ ಮೊದಲೇ ಅನುಮತಿ ಪಡೆದಿದ್ದ ಹಿನ್ನೆಲೆ ಬೆಳಗಾವಿಗೆ ವಿದ್ಯಾರ್ಥಿಗಳು, ಉಪನ್ಯಾಸಕರೊಂದಿಗೆ ಭೇಟಿ ನೀಡಿದ್ದಾರೆ. ಜಿಲ್ಲೆಯ ಸೊರಬ ತಾಲೂಕಿನ ಸಿರಿವಂತೆ, ಸೊರಬ, ಉಳವಿ ಹಾಗೂ ಆನವಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 350ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಉಪನ್ಯಾಸಕರೊಂದಿಗೆ ...
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ..
cnewstv | 17.11.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ಶಿವಮೊಗ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ್ ಗೆ ಇಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾಧಿತ್ಯ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿತ್ತು ಇಂದು ಜಾಮೀನು ದೊರೆತ ಹಿನ್ನೆಲೆಯಲ್ಲಿ ಆರೋಪಿ ಲಕ್ಷ್ಮಣ್ ನನ್ನು ಬಿಡುಗಡೆ ಮಾಡಲಾಗಿದೆ. ಇಂದು ಬೆಳಿಗ್ಗೆ ಈ ಮೇಲ್ ...
Read More »