ತೀರ್ಥಹಳ್ಳಿ: ಪಟ್ಟಣದ ತುಂಗಾನದಿ ತೀರದಲ್ಲಿ ಸಿಡಿಮದ್ದು ಸ್ಫೋಟಗೊಂಡು, ಬಾಲಕನೋರ್ವ ಗಾಯಗೊಂಡ ಘಟನೆ ನಡೆದಿದೆ. ತೀರ್ಥಹಳ್ಳಿಯ ತೇಜು(9) ಸ್ಫೋಟದಿಂದ ಗಾಯಗೊಂಡ ಬಾಲಕ. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿ ಪಟ್ಟಣದ ತುಂಗಾನದಿ ತೀರದಲ್ಲಿ ತೆಪ್ಪೋತ್ಸವ ಆಚರಣಾ ಸಮಿತಿಯು ಜನವರಿ 1 ರಂದು ತೆಪ್ಪೋತ್ಸವ ಆಯೋಜಿಸಿತ್ತು. ತೆಪ್ಪೋತ್ಸವ ಮುಗಿದ ನಂತರ ಎರಡೂವರೆ ಗಂಟೆ ಸಿಡಿಮದ್ದು ಪ್ರದರ್ಶನ ಕಾರ್ಯಕ್ರಮ ಸಹ ನಡೆಸಲಾಗಿತ್ತು. ಸಿಡಿಮದ್ದು ಪ್ರದರ್ಶನ ನಡೆದ ನಾಲ್ಕು ದಿನಗಳ ಬಳಿಕ ಜ.5 ರ ಭಾನುವಾರ ಸಂಜೆ ನದಿ ತೀರದಲ್ಲಿ ಸಿಡಿಯದೇ ಅರ್ಧಂಬರ್ಧ ಉಳಿದಿದ್ದ ಪಟಾಕಿಗಳನ್ನು 3 ಬಾಲಕರು ಒಟ್ಟುಗೂಡಿಸುವ ಪ್ರಯತ್ನದಲ್ಲಿದ್ದಾಗ ...
Read More »Monthly Archives: January 2025
ಧನಂಜಯ ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್: ಆರೋಪಿ ಬಂಧಿಸಿದ ಕೋಟೆ ಪೊಲೀಸರು.
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26) ಬಂಧಿತ ಆರೋಪಿ. ಆರೋಪಿಯು ಈ ಹಿಂದೆ ಕಾನೂನು ಪದವಿ ಓದುವಾಗ ಎನ್ಇಎಸ್ ಕಾರ್ಯದರ್ಶಿ ನಾಗರಾಜ್ ಅವರು ವಿಷಯವೊಂದರ ಕುರಿತಾಗಿ ಆರೋಪಿಗೆ ಬೈಯ್ದಿದ್ದರು. ಈ ಹಿನ್ನೆಲೆಯಲ್ಲಿ ಮನ ನೊಂದಿದ್ದ ಆರೋಪಿ ಸೌಹಾರ್ದ ಪಟೇಲ್, ಕೊರಿಯರ್ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿಯನ್ನು ...
Read More »ಮೆಗ್ಗಾನ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ..
cnewstv | 06.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಮೆಗ್ಗಾನ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ.. ಶಿವಮೊಗ್ಗ : ಇಂದು ಬೆಳಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬೇಟಿ ನೀಡಿ ಪೌರಕಾರ್ಮಿಕ ಮೂರ್ತಿ ಯವರ ಆರೋಗ್ಯ ವಿಚಾರಣೆ ಮಾಡಿದ್ದರು.. ಮಾಜಿ ಕಾರ್ಪೊರೇಟರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕ ಮೂರ್ತಿ ಆತ್ಮಹತ್ಯೆಗೆ ಯತ್ನಿಸಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸಂತೋಷ್ ಲಾಡ್ ಮೂರ್ತಿ ಯವರ ಆರೋಗ್ಯ ವಿಚಾರಿಸಿ, ಬುದ್ದಿ ...
Read More »ಹಿರಿಯ ಸಾಹಿತಿ ನಾ.ಡಿಸೋಜ ನಿಧನ : ಬೇಳೂರು ಸಂತಾಪ
ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು,ಮಂಗಳೂರಿನ ಫಾಧರ್ ಮುಲ್ಲರ್ ಆಸ್ಪತ್ರೆಯಲ್ಲಿ ಇಂದು ಸಂಜೆ 7.30ಕ್ಕೆ ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ನವೀನ್, ಸಾಮಾಜಿಕ ಜಾಲತಾಣ ಹಾಗೂ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಜತೆಗೆ ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಕೂಡ ಆಗಿದ್ದರು. ಸೋಮವಾರ ಪೂರ್ತಿ ದಿನ ಸಾಹಿತಿ ನಾ.ಡಿಸೋಜ ...
Read More »ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು..
cnewstv | 04.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶ್ರೀ ಗುರುಬಸವ ಮಹಾಶಿವಯೋಗಿಗಳ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ವಿವಿಧ ಸ್ಪರ್ಧೆಗಳು.. ಶಿವಮೊಗ್ಗ : ನಗರದ ಬೆಕ್ಕಿನ ಕಲ್ಮಠದ ಹಿರಿಯ ಜಗದ್ಗುರು ಶ್ರೀ ಗುರುಬಸವ ಮಹಾಶಿವಯೋಗಿಗಳ 113ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಯಂತಿ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ನಾಗರೀಕರಿಗೆ ವಿವಿಧ ಸ್ಪರ್ಧೆಗಳನ್ನು ಬೆಕ್ಕಿನ ಕಲ್ಮಠದಲ್ಲಿ ಏರ್ಪಡಿಸಲಾಗಿದೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ್ಷೆ ದಿವ್ಯ ಪ್ರೇಮ್ ತಿಳಿಸಿದರು. ಇಂದು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿ ...
Read More »ಎಂಎಸ್ಪಿ ಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ರೈತರ ಪ್ರತಿಭಟನೆ
ಶಿವಮೊಗ್ಗ: ರೈತ ವಿರೋಧಿಯಾದ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಒತ್ತಾಯಿಸಿದೆ. ಶಿವಮೊಗ್ಗ ಡಿಸಿ ಕಚೇರಿ ಆವರಣದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಎಂ ಎಸ್ ಪಿ ಯನ್ನು ಕಾನೂನಾತ್ಮಕವಾಗಿ ಜಾರಿ ಮಾಡಬೇಕು ಹಾಗೂ ವಿದ್ಯುತ್ ಶಕ್ತಿ ಖಾಸಗಿಕರಣ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ರೈತರು ಈ ಹಿಂದೆ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಲಿಖಿತ ಭರವಸೆ ಸಹ ನೀಡಿತ್ತು. ಭರವಸೆ ನೀಡಿ ...
Read More »
C News TV Kannada News Online in cnewstv