ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ.
Cnewstv.in / 28.06.2022 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ.
ರಾಯಚೂರು : ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಗುತ್ತಿಗೆ ನೌಕರ ಅದೇ ಕಚೇರಿಯಲ್ಲಿ ನೇಣಿಗೆ ಶರಣಾದ ಘಟನೆ ಇಂದು ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಚಿಕ್ಕಹೆಸರೂರು ಊರಿನ ಬಸಪ್ಪ (45) ಎಂಬುವವನು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ
ಬಸಪ್ಪ ಕಳೆದ 10 ವರ್ಷದಿಂದ ರಾಜೀವ್ ಗಾಂಧಿ ವಸತಿ ನಿಗಮದ ಗುತ್ತಿಗೆ ಆಧಾರದ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದು, ಅದರೆ ಬರೋಬ್ಬರಿ 6 ವರ್ಷದಿಂದ ಸಂಬಳವಾಗಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಇದನ್ನು ಒದಿ : https://cnewstv.in/?p=10287
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತಾಲೂಕು ಪಂಚಾಯಿತಿ ಕಚೇರಿಯಲ್ಲೇ ನೇಣಿಗೆ ಶರಣಾದ ನೌಕರ. 2022-06-28