Breaking News

ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ..

Cnewstv.in / 06.07.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ ?? ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ..

ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಸರಣಿ ಟ್ವೀಟ್‌ ಮಾಡಿ
ಆಕ್ರೋಶ ವ್ಯಕ್ತಪಡಿಸಿದ್ದಾರೆ

ಹೆಚ್.ಡಿ. ಕುಮಾರಸ್ವಾಮಿಯವರ ಸರಣಿ ಟ್ವೀಟ್..

ಹೌದು. ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ?

ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ.

ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ?

ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಿಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು!!

ʼಮಿಷನ್‌ ದಕ್ಷಿಣ್‌ʼ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ʼನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ.

ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ.

ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಮತ್ತೆ ನಿಮ್ಮ ಅವಗಾಹನೆಗೆ;

1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌

ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. ‘ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ’ ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ʼಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ ‘ಪರಿವಾರಕೋಟಿ’ಯನ್ನೇ ಬರೆಯಬಹುದು.

ಇದನ್ನು ಒದಿ : https://cnewstv.in/?p=10394

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*