Cnewstv.in / 14.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ತುಂಗಾ ನದಿಯಲ್ಲಿ ಯುವಕ ನಾಪತ್ತೆ ??
ಶಿವಮೊಗ್ಗ : ತುಂಬಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕ ನಾಪತ್ತೆ ಯಾಗಿದ್ದಾರೆ.
ಇಂದು ಮಧ್ಯಾಹ್ನ ಹೊಳೆ ಬಸ್ ಸ್ಟಾಪ್ ಹತ್ತಿರ ಯುವಕ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿಯ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಕೆಲವರು ಯುವಕ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ಆಯ ತಪ್ಪಿ ನದಿಗೆ ಬಿದ್ದಿದ್ದಾನೆ ಎಂದು ಹೇಳುತ್ತಿದ್ದಾರೆ. ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿರುವ ವಿಡಿಯೋ..