Breaking News

ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.

Cnewstv.in / 21.07.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಭಾರತದ 15ನೇ ರಾಷ್ಟ್ರಪತಿಯಾಗಿ, ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮ ಆಯ್ಕೆ.

ನವದೆಹಲಿ : ಭಾರತದ ಮೊದಲ ಬುಡಕಟ್ಟು ಸಮುದಾಯದ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮ ಆಯ್ಕೆಯಾಗಿದ್ದಾರೆ.‌

ತೀವ್ರ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮ ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ದಾ ವಿರೋಧ ಗೆಲುವು ಸಾಧಿಸಿದ್ದಾರೆ. ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ

ಮೂರು ಸುತ್ತಿನ ಮತ ಎಣಿಕೆ ನಂತರ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮ ಹೊಟ್ಟು ಮತ ಮೌಲ್ಯದ ಶೇ.‌ 50 ಕ್ಕೂ ಹೆಚ್ಚು ಮತ ಗಳಿಸಿದ್ದಾರೆ. ದ್ರೌಪದಿ ಮರ್ಮ ಅವರು ಈಗಾಗಲೇ ಒಟ್ಟು ಮಾನ್ಯ ಮತಗಳ ಶೇ.53 ಕ್ಕಿಂತ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದ್ದಾರೆ.

ದ್ರೌಪದಿ ಮರ್ಮ ರವರೆಗೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯಗಳನ್ನು ಕೊರಿದ್ದಾರೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

ಇದನ್ನು ಒದಿ : https://cnewstv.in/?p=10590

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*