Cnewstv.in / 29.07.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜೀನಾಮೆ ಇದಕ್ಕೆ ಉತ್ತರ ಅಲ್ಲ – ಕೆ.ಎಸ್.ಈಶ್ವರಪ್ಪ.
ಶಿವಮೊಗ್ಗ : ಕರಾವಳಿಯಲ್ಲಿ ನಡೆದ ಪ್ರವೀಣ್ ಹತ್ಯೆ ಬೆನ್ನಲ್ಲೇ ಯುವಮೋರ್ಚಾ ಕಾರ್ಯಕರ್ತರು ಸಾಲು-ಸಾಲು ರಾಜಿನಾಮೆ ನೀಡುತ್ತಿರುವುದರ ಬಗ್ಗೆ ಮಾತನಾಡಿದ ಈಶ್ವರಪ್ಪನವರು, ಯುವಕರು ರಾಜೀನಾಮೆ ನೀಡುತ್ತಿರುವುದರಿಂದ ಹಿಂದುತ್ವದ ಸಿದ್ಧಾಂತಕ್ಕೆ ಅಪಮಾನ ಮಾಡಿದಂತೆ, ಅನೇಕ ವರ್ಷಗಳಿಂದ ಸಂಘಟನೆ ಕಟ್ಟಿಕೊಂಡು ಬಂದ ನಮ್ಮ ನಾಯಕರಿಗೆ ಅಪಮಾನ ಮಾಡಿದಂತೆ. ರಾಜೀನಾಮೆ ಇದಕ್ಕೆ ಉತ್ತರ ಅಲ್ಲ, ರಾಜೀನಾಮೆಯನ್ನು ವಾಪಸ್ ತೆಗೆದುಕೊಳ್ಳಬೇಕು.
ಒಂದು ವೇಳೆ ರಾಜೀನಾಮೆಯನ್ನು ರಾಜ್ಯಧ್ಯಕ್ಷರು ಒಪ್ಪಿಕೊಂಡರೆ ಇವರ ಸ್ಥಾನಕ್ಕೆ ಮತ್ತೊಬ್ಬರು ಬರುತ್ತಾರೆ. ಇವರು ಆಕ್ರೋಶದಿಂದ ರಾಜೀನಾಮೆ ನೀಡಿದ್ದಾರೆ ಅಷ್ಟೇ. ಎಂದಿಗೂ ಅವರು ಬಿಜೆಪಿ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ ಎಂದರು.