Cnewstv.in / 24.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಅಕ್ರಮ ಹಣ ವರ್ಗಾವಣೆ : ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇಡಿ.
ನವದೆಹಲಿ : ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಲಾಗಿದೆ

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳ ಕುರಿತು ದೆಹಲಿ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವ ಮನೀಶ್ ಸಿಸೋಡಿಯಾ ಸೇರಿದಂತೆ 15 ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಎಫ್ಐಆರ್ನಲ್ಲಿ ಸಿಸೋಡಿಯಾ ನಂಬರ್ ಓನ್ ಆರೋಪಿಯಾಗಿದ್ದಾರೆ. 11 ಪುಟಗಳ ದಾಖಲೆಯಲ್ಲಿ ಪಟ್ಟಿ ಮಾಡಲಾಗಿದೆ. 2021-22ರ ಅಬಕಾರಿ ನೀತಿಯ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಅನುಮತಿಯಿಲ್ಲದೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿತ್ತು. ಇದು ಪರವಾನಗಿದಾರರಿಗೆ ಟೆಂಡರ್ ಸಲ್ಲಿಸಲು ಅನುಕೂಲವಾಗುವ ಉದ್ದೇಶದಿಂದ ಮಾಡಲಾಗಿದೆ ಎಂದು ಆರೋಪಿಸಲಾಗಿದೆ
ಇದನ್ನು ಒದಿ : https://cnewstv.in/?p=10946
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
C News TV Kannada News Online in cnewstv