ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಾಗಾರ.

Cnewstv.in / 03.09.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಾಗಾರ.

ಶಿವಮೊಗ್ಗ : ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ತಮ್ಮ ಗುರುತಿನಚೀಟಿಗೆ(ಎಪಿಕ್ ಕಾರ್ಡ್) ನಮೂನೆ-6ಬಿ ಮೂಲಕ ಜೋಡಿಸುವ ಕುರಿತು ದಿನಾಂಕ: 04-09-2022 ಮತ್ತು 18-09-2022 ರ ಭಾನುವಾರಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿಶೇಷ ಕಾರ್ಯಾಗಾರ ನಡೆಯಲಿದೆ.

ಸದರಿ ದಿನಗಳಂದು ಎಲ್ಲಾ ಮತಗಟ್ಟೆ ಅಧಿಕಾರಿಗಳು ಈ ವಿಶೇಷ ಕಾರ್ಯಗಾರದಲ್ಲಿ ಹಾಜರಿದ್ದು, ಮತದಾರರು ಹಾಜರುಪಡಿಸುವ ಆಧಾರ್ ಸಂಖ್ಯೆಗಳಿಗೆ ಅವರ ಗುರುತಿನ ಚೀಟಿಗಳ ನ್ಯಾಷನಲ್ ವೋಟರ್ ಸರ್ವಿಸ್ ಪೋರ್ಟಲ್(ಎನ್‍ವಿಎಸ್‍ಪಿ) ಮತ್ತು ವೋಟರ್ ಹೆಲ್ಪ್‍ಲೈನ್(ವಿಹೆಚ್‍ಎ)ಯನ್ನು ಬಳಕೆ ಮಾಡಿ ಜೋಡಿಸುವ ಕಾರ್ಯ ಮಾಡುವರು.

113 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರು ಈ ಸಂದರ್ಭದಲ್ಲಿ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಹಾಜರಾಗಿ ತಮ್ಮ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಅಥವಾ ಇತರೆ ದಾಖಲಾತಿಗಳಾದ ನರೇಗಾ(ಒಓಖಉಇಂ) ಜಾಬ್ ಕಾರ್ಡ್, ಬ್ಯಾಂಕ್/ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‍ಪುಸ್ತಕಗಳು, ಕಾರ್ಮಿಕ ಸಚಿವಾಲಯದ ವಿಮಾ ಸ್ಮಾರ್ಟ್‍ಕಾರ್ಡ್, ಚಾಲನಾ ಪರವಾನಿಗೆ, ಪಾನ್‍ಕಾರ್ಡ್, ಎನ್‍ಪಿಆರ್ ಅಡಿಯಲ್ಲಿ ಆರ್‍ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿಗಳು-ಕೇಂದ್ರ/ರಾಜ್ಯ ಸರ್ಕಾರ/ಪಿಎಸ್‍ಯು ಗಳು ನೀಡಿರುವ ಭಾವಚಿತ್ರದ ಗುರುತಿನಚೀಟಿ ಅಥವಾ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆ, ಭಾರತ ಸರ್ಕಾರದಿಂದ ನೀಡಿದ ವಿಶಿಷ್ಟ ಗುರುತಿನ ಚೀಟಿ ಹಾಜರುಪಡಿಸಬಹುದೆಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=11024

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments