ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್”.
Cnewstv.in / 22.10.2022/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ “ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್”.
ಬೆಂಗಳೂರು : ದಿ. ಪುನೀತ್ ರಾಜಕುಮಾರ್ ಕೇವಲ ನಟನಾಗಿ ಮಾತ್ರವಲ್ಲದೆ ತಮ್ಮ ಸಮಾಜಮುಖಿ ಕಾರ್ಯದಿಂದ ಕೂಡ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಅವರ ಸಮಾಜಮುಖೀ ಕಾರ್ಯಗಳು ಅನೇಕ ಜನರಿಗೆ ಸ್ಫೂರ್ತಿದಾಯಕವಾಗಿದೆ. ಇದೇ ನಿಟ್ಟಿನಲ್ಲಿ ಪ್ರಕಾಶ್ ರೈ ರವರು ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಅಪ್ಪು ಎಕ್ಸ್ಪ್ರೆಸ್ ಅಂಬುಲೆನ್ಸ್ ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್ ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ.
ನೆನ್ನೆ ನಡೆದ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಕಾಶ್ ರೈ ವೇದಿಕೆ ಮೇಲೆ ಹಂಚಿಕೊಂಡಿದ್ದಾರೆ. ಅಲ್ಲದೆ ತಮಿಳು ನಟ ಸೂರ್ಯ, ತೆಲುಗು ನಟ ಚಿರಂಜೀವಿ ಮತ್ತು ಶಿವರಾಜ್ ಕುಮಾರ್ ಅವರು ಕೂಡ ತಲಾ 1 ಅಂಬುಲೆನ್ಸ್ ಕೊಡುವುದಾಗಿ ಹೇಳಿದ್ದಾರೆ.
ಪ್ರಕಾಶ್ ರೈ ಈ ವಿಚಾರವನ್ನು ತಿಳಿಸುವ ಸಂದರ್ಭದಲ್ಲಿ ವೇದಿಕೆ ಮೇಲೆ ಬಂದ ನಟ ಯಶ್ ಕೂಡ ತಾವು ಈ ಕಾರ್ಯಕ್ಕೆ ಕೈಜೋಡಿಸುತ್ತೇವೆ. ಉಳಿದ 25 ಜಿಲ್ಲೆಗಳಿಗೆ ತಾವೇ ಅಂಬುಲೆನ್ಸ್ ಕೊಡುವುದಾಗಿ ಘೋಷಣೆ ಮಾಡಿದ್ದಾರೆ.
ಇದನ್ನು ಓದಿ :
http://cnewstv.in/?p=11287
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ರಾಜ್ಯಾದ್ಯಂತ ಸೇವೆಸಲ್ಲಿಸಲಿದೆ "ಅಪ್ಪು ಎಕ್ಸ್ಪ್ರೆಸ್ ಆಂಬುಲೆನ್ಸ್". 2022-10-22