Cnewstv / 19.11.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ : ಸರ್ಕಾರಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ.
ಶಿವಮೊಗ್ಗ : ಶಿವಮೊಗ್ಗ ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ದೇವಸ್ಥಾನದ ವಿದ್ಯುತ್ ಬಿಲ್ ಪಾವತಿಸಿ, ಕಗ್ಗತಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೆ ಬೆಳಕು ಕೊಡಿ ಎಂದು ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀ ಆಂಜನೇಯ ಸ್ವಾಮಿಗೆ ದೇವಸ್ಥಾನದಲ್ಲಿ ಸಂಜೆಯಾಗುತ್ತಿದ್ದಂತೆ ಕತ್ತಲೆ ವಾಸದ ದುರಂತ ಸ್ಥಿತಿ ಒದಗಿಬಂದಿದೆ.ದೇವಾಲಯದಲ್ಲಿ ಕಳೆದ ನಾಲ್ಕಾರು ದಿನಗಳಿಂದ ವಿದ್ಯುತ್ ನಿಲುಗಡೆಯಾಗಿದೆ. ಪ್ರತಿನಿತ್ಯ ಬೆಳಕಿಗಾಗಿ ಜನರೇಟರ್ಗಳನ್ನು ಬಳಸಲಾಗುತ್ತಿದೆ. ಭಕ್ತರೇ ಪ್ರತಿನಿತ್ಯ ಡಿಸೇಲ್ ವೆಚ್ಚ ನಿರ್ವಹಿಸುತ್ತಿದ್ದಾರೆ. ವಿದ್ಯುತ್ ಕಡಿತಕ್ಕೆ ಕಾರಣ ಎಂದರೆ ಮುಜರಾಯಿ ಇಲಾಖೆ ಸಕಾಲಕ್ಕೆ ವಿದ್ಯುತ್ ಬಾಕಿ ಪಾವತಿ ಮಾಡದಿರುವುದರಿಂದ. ಮೆಸ್ಕಾಂ ಇಲಾಖೆ ಯುವರು ನಗರದ ಪುರಾಣ ಪ್ರಸಿದ್ಧ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ವಿದ್ಯುತ್ ಕಡಿತ ಮಾಡಿದ್ದಾರೆ. ಹೀಗಾಗಿ ಬೆಳಕಿಗಾಗಿ ಜನರೇಟರ್ಗಳೇ ಗತಿಯಾಗಿದೆ. ಶಿವಮೊಗ್ಗೆಯ ಐತಿಹಾಸಿಕ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲೇ ಈ ಪರಿಸ್ಥಿತಿ ಅಂದರೆ ಆಡಳಿತ ನಡೆಸುತ್ತಿರುವ ಸರ್ಕಾರ ದಿವಾಳಿಯಾಗಿದೆ ಎಂಬುದನ್ನು ಭಕ್ತರ ಹಾಗೂ ಸಾರ್ವಜನಿಕರ ಪ್ರಶ್ನೆಯಾಗಿದೆ.
ಸಮಾಜದ ಬೇಡಿಕೆಯ ಈಡೇರಿಕೆಗಾಗಿ 658 KM ಐತಿಹಾಸಿಕ ಪಾದಯಾತ್ರೆ – ಪ್ರಣವಾನಂದ ಶ್ರೀ.
C News TV Kannada News Online in cnewstv