Cnewstv / 19.12.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು.
ಶಿವಮೊಗ್ಗ : ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿದ ಘಟನೆ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ನಡೆದಿದೆ.
ಪ್ರವೀಣ್ ಅಲಿಯಾಸ್ ಮೋಟು ಎಂಬಾತನ ಕಾಲಿಗೆ ಪೋಲಿಸರು ಗುಂಡು ಹಾರಿಸಿದ್ದಾರೆ. ಕೆಲವು ದಿನಗಳ ಹಿಂದೆ ಕಾರಿಗೆ ಬೆಂಕಿ ಹಚ್ಚಿ ಬೆದರಿಸಿದ್ದ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ ಪ್ರವೀಣ್ ಮೇಲೆ 15 ಕ್ರಿಮಿನಲ್ ಪ್ರಕರಣಗಳಿವೆ.
ಇಂದು ಗ್ರಾಮಾಂತರ ಪೊಲೀಸರು ಕುಂಸಿ ಬಳಿಯ ಗ್ರಾಮ ಒಂದರಲ್ಲಿ ಪ್ರವೀಣ್ ಅಡಗಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲು ಹೋದಾಗ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾಗಿದ್ದಾನೆ ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಶಿವರಾಜು ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Video Player
00:00
00:00
Recent Comments