ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್.

Cnewstv / 07.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಉದ್ಘಾಟನೆ ಮಾಡುತ್ತಿದ್ದಾರೆ : ಕೆ.ಬಿ. ಪ್ರಸನ್ನಕುಮಾರ್.

ಶಿವಮೊಗ್ಗ : ಶಾಸಕರು ಎಲ್ಲಿ ತಮಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲವೋ ಎಂಬ ಆತಂಕದಿಂದ ಅವಸರದಲ್ಲಿ ವಾಸಕ್ಕೆ ಯೋಗ್ಯವಲ್ಲದ ಆಶ್ರಯ ಮನೆಗಳನ್ನು ಚುನಾವಣೆಯ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಮುಖ್ಯಮಂತ್ರಿಗಳು ಉದ್ಘಾಟನೆ
ಮಾಡುವುದನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು.

ಗೋಪಿಶೆಟ್ಟಿ ಮತ್ತು ಗೋವಿಂದಾಪುರದಲ್ಲಿ ಆಶ್ರಯ ಮನೆಗಳು ನಿರ್ಮಾಣವಾಗಿವೆ. ಆದರೆ ಅಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲ. ವಾಸಿಸಲು ಕೂಡ ಯೋಗ್ಯವಾಗಿಲ್ಲ. ಶಾಸಕ ಈಶ್ವರಪ್ಪನವರ ಮಾತಿನಂತೆ ಮುಖ್ಯಮಂತ್ರಿಗಳು ಅದನ್ನು ಉದ್ಘಾಟನೆ ಮಾಡಲು ಹೊರಟಿದ್ದಾರೆ. ಅದರ ಜೊತೆಗೆ ಇತರೆ ಕಾಮಗಾರಿಗಳು ಕೂಡ ಉದ್ಘಾಟನೆಯಾಗುತ್ತವೆ. ಉದ್ಘಾಟನೆ ಎಂಬುದು ಒಂದು ವಿಶಿಷ್ಟ ಸಂಪ್ರದಾಯ. ನಾವು ಹೊಸ ಮನೆ ಕಟ್ಟಿದಾಗ ಎಲ್ಲಾ ಕೆಲಸಗಳು ಮುಗಿದ ನಂತರ ಉದ್ಘಾಟನೆ ಮಾಡುತ್ತೇವೆ.

ಇದನ್ನು ಒದಿ : https://cnewstv.in/?p=12029

ಮುಖ್ಯವಾಗಿ ವಿದ್ಯುತ್ ಸಂಪರ್ಕವೇ ಅಲ್ಲಿಲ್ಲ. ಮೆಸ್ಕಾಂನ ಮೂಲದ ಪ್ರಕಾರ ಒಂಭತ್ತು ಕೋಟಿ ರೂ. ಠೇವಣಿ ಕಟ್ಟಬೇಕು ಈಗ ತಕ್ಷಣಕ್ಕೆ 4 ಕೋಟಿ ರೂ. ಕಟ್ಟಬೇಕು. ಅದಿನ್ನೂ ಆಗಿಲ್ಲ. ಟೆಂಡರ್ ಕೂಡ ಕರೆದಿಲ್ಲ. ಆದರೆ ಅಧಿಕಾರಿಗಳ ಬಾಯಿ ಮುಚ್ಚಿಸಿ ಕೇವಲ 20ಲಕ್ಷ ರೂ. ಕಟ್ಟಿದ್ದಾರೆ. ಅದು 28 ದಿನಕ್ಕೆ ಮಾತ್ರ. ನಂತರ ಸಂಪರ್ಕ ಪಡೆಯಲು 7ಲಕ್ಷರೂ.ನಂತೆ ಕಟ್ಟಬೇಕಾಗುತ್ತದೆ. ಈ ಹಣವೆಲ್ಲಾ ನೀರಿನಲ್ಲಿ ಹೋಮ ಮಾಡಿದ ಹಾಗಾಗುತ್ತದೆ. ಈ ಹಣವನ್ನು ಕೂಡ ಬಡವರ ಮೇಲೆಯೇ ಹಾಕುತ್ತಾರೆ. ಬಡವರಿಗೆ ಹೊರೆಯಾಗಲು ಶಾಸಕರೇ ಹೊಣೆಯಾಗುತ್ತಾರೆ ಎಂದರು.

ಯಾವುದೇ ಕಾರಣಕ್ಕೂ ಮೂಲಭೂತ ಸೌಲಭ್ಯ ಒದಗಿಸದೆ ಅವುಗಳನ್ನು ಉದ್ಘಾಟಿಸಬಾರದು. ಅಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಕೂಡ. ಇದೆ. ತುಂಗೆ ಹತ್ತಿರ ಇದ್ದರೂ ತರಾತುರಿಯಲ್ಲಿ ಬೋರ್‌ವೆಲ್‌ಗಳನ್ನು ತೆಗೆಸಿದ್ದಾರೆ. ಅಧಿಕಾರಿಗಳನ್ನು ಕೇಳಿದರೆ ಇದು ನಗರ ವ್ಯಾಪ್ತಿಗೆ ಬರುವುದಿಲ್ಲ. ಗ್ರಾಮಾಂತರ ವ್ಯಾಪ್ತಿಗೆ ಬರುತ್ತದೆ ಎಂಬ ಹಾರಿಕೆ ಉತ್ತರ ಕೊಡುತ್ತಾರೆ. ಶುದ್ಧ ನೀರು ಕೊಡಲು ಏಕೆ ಅಂತರ ಬೇಕು. ಇದು ಬಿಜೆಪಿಯ ಅವಾಂತರವಷ್ಟೆ. ಹೀಗೆ ಮೂಲಭೂತ ಸೌಕರ್ಯ ಒದಗಿಸಲು ಟೆಂಡರ್ ಕರೆಯಬೇಕು. ಆದರೆ ಬಹುಶಃ ಶೇ.40ರಷ್ಟು ಕಮಿಷನ್ ಕೊಟ್ಟು ಕೆಲಸ ಮಾಡಲು ಯಾವ ಗುತ್ತಿಗೆದಾರನೂ ಬಂದಿರಲಿಕ್ಕಿಲ್ಲ ಎಂದು ವ್ಯಂಗ್ಯವಾಡಿದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

 

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments