Cnewstv / 15.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವಿಧಾನಸಭಾ ಚುನಾವಣೆಗೆ ಸರ್ಕಾರ ದುಡ್ಡು ಮಾಡಲು ಹೊರಟಿದೆ : ಮಾಜಿ ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಸರ್ಕಾರದಿಂದ ಒಂದೇ ದಿನ 16 ಸಾವಿರ ಕೋಟಿ ರೂಪಾಯಿ ಟೆಂಡರ್ ಆಗಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿ ಸರ್ಕಾರ ದುಡ್ಡು ಮಾಡಲು ಹೊರಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನು ಒದಿ : https://cnewstv.in/?p=12082
ಇಂದು ಬೆಳಿಗ್ಗೆ ಡಿಕೆ ಶಿವಕುಮಾರ್ ನಿವಾಸದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,
ಸರ್ಕಾರದಿಂದ ಟೆಂಡರ್ ಗೋಲ್ ಮಾಲ್ ನಡೆಯುತ್ತಿದೆ. ಇದಕ್ಕೆಲ್ಲಾ ಸಿಎಂ ಬೊಮ್ಮಾಯಿ ಅವರೇ ಕಾರಣ. ನಾವು ಇದನ್ನ ಇಲ್ಲಿಗೆ ಬಿಡುವುದಿಲ್ಲ ಕೋರ್ಟ್ ಮೊರೆಗೆ ಹೋಗುತ್ತೇವೆ. ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ನಂತರ ಟೆಂಡರ್ ರದ್ದು ಮಾಡುತ್ತೇವೆ. ತನಿಖಾ ಸಮಿತಿ ರಚನೆ ಮಾಡಿ ಹಗರಣವನ್ನು ಬಯಲಿಗೆಳೆಯುತ್ತೇವೆ. ಯಾರ ಮೇಲಾದರೂ ಆರೋಪ ಇದ್ದರೂ ಎಲ್ಲರನ್ನು ತನಿಖೆಗೆ ನೀಡುತ್ತೇವೆ ಎಂದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv