Breaking News

ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು.

Cnewstv / 24.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸರ್ಕಾರದ ಜನ ಕಲ್ಯಾಣ ಯೋಜನೆಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬೇಕು.

ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದು ಜನಸಾಮಾನ್ಯರು ಅದರ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ಶಿವಮೊಗ್ಗ ಮಹಾನಗರಪಾಲಿಕೆ ಮಹಾಪೌರರಾದ ಶಿವಕುಮಾರ್ .ಎಸ್ ಹೇಳಿದ್ದಾರೆ.

ನಗರದ ಕಮಲಾ ನೆಹರು ರಾಷ್ಟ್ರೀಯ ಸ್ಮಾರಕ ಮಹಿಳಾ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ಆಯೋಜಿಸಲಾದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಕೇಂದ್ರ ಸರ್ಕಾರದ ಎಂಟು ವರ್ಷಗಳ ಸಾಧನೆ ಕುರಿತ ವಿಶೇಷ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸಂವಹನ ಇಲಾಖೆ ತನ್ನ ಜಾಗೃತಿ ಅಭಿಯಾನಗಳ ಮೂಲಕ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಗ್ರಾಮೀಣ ಜನರಿಗೆ ನೀಡುತ್ತಿರುವುದು ಶ್ಲಾಘನೀಯ. ಇಂದಿನ ಯುವಸಮುದಾಯ ಮೊಬೈಲ್ ಗೀಳಿನಿಂದ ಹೊರಬಂದು ಶಿಕ್ಷಣದೆಡೆ ಗಮನ ಹರಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದು ಅದನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಸಹಕರಿಸಬೇಕೆಂದು ಅವರು ಕರೆ ನೀಡಿದರು.
ಶ್ರೀ. ನಾಗರಾಜು.ಎಸ್.ಎನ್, ಕಾರ್ಯದರ್ಶಿ , ರಾಷ್ಟ್ರೀಯ ಶಿಕ್ಷಣ ಸಂಸ್ಥೆ, ಶಿವಮೊಗ್ಗ ಮಾತನಾಡಿ, ಕೇಂದ್ರ ಪುರಸ್ಕøತ ಯೋಜನೆಗಳನ್ನು ಗ್ರಾಮೀಣ ಭಾಗಗಳ ಜನರಿಗೆ ತಲುಪಿಸುವ ಅಗತ್ಯವಿದ್ದು ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮಾಧ್ಯಮ ಘಟಕಗಳು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಕ್ಷೇತ್ರ ಪ್ರಚಾರ ಅಧಿಕಾರಿ ಶ್ರೀಮತಿ ಅಕ್ಷತಾ ಪ್ರಸ್ತಾವಿಕವಾಗಿ ಮಾತನಾಡಿ, ಛಾಯಾಚಿತ್ರ ಪ್ರದರ್ಶನದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಸರ್ಕಾರದ ಎಂಟು ವರ್ಷಗಳ ಸಾಧನೆ ಕುರಿತ ಮಾಹಿತಿ ನೀಡಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಇದರ ಪ್ರಯೋಜನ ಪಡೆಯಬೇಕು ಎಂದರು.

ಪ್ರೋ. ಸತ್ಯನಾರಾಯಣ, ಆಜೀವ ಸದಸ್ಯರು, ಆಲ್ ಇಂಡಿಯಾ ಎಕನಾಮಿಕ್ ಅಸೋಸಿಯೇಶನ್ ಮಾತನಾಡಿ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪೆÇ್ರ. ಹೆಚ್.ಎಸ್ ನಾಗಭೂಷಣ, ಐ.ಕ್ಯೂ.ಎ.ಸಿ ಸಂಯೋಜಕಿ ಶ್ರೀಮತಿ. ಮಮತಾ ಪಿ.ಆರ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕ್ಷೇತ್ರ ಪ್ರಚಾರ ಸಹಾಯಕ ಶ್ರೀ. ಸಿ.ವಿಒ ಲಕ್ಷ್ಮೀಕಾಂತ್ ಕಾರ್ಯಕ್ರಮ ನಿರೂಪಿಸಿದರು.

ಛಾಯಾಚಿತ್ರ ಪ್ರದರ್ಶನ ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ತೆರೆದಿರುತ್ತದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments