Breaking News

ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ..

Cnewstv / 28.02.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗದಲ್ಲಿ ಕಾರ್ಯಾರಂಭವಾಗಲಿದೆ ಕರ್ನಾಟಕದ ಪ್ರಥಮ ರಾಷ್ಟೀಯ ರಕ್ಷಾ ವಿಶ್ವವಿದ್ಯಾಲಯ..

ಶಿವಮೊಗ್ಗ : ರಾಷ್ಟೀಯ ರಕ್ಷಾ ವಿ ವಿ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಕರ್ನಾಟಕದಲ್ಲಿಯೇ ಇದು ಪ್ರಥಮವಾಗಿದ್ದು, ಜಿಲ್ಲೆಯ ಹೆಮ್ಮೆಯಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಕ್ಷಣಾ ಇಲಾಖೆಗೆ ಸೇರುವವರಿಗೆ ಬೋಧನೆಗಾಗಿ ಕೇಂದ್ರ ರಕ್ಷಣಾ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುವ ರಾಷ್ಟಿಯ ರಕ್ಷಾ ವಿಶ್ವವಿದ್ಯಾಲಯವು ಕರ್ನಾಟಕಕ್ಕೆ ಮಂಜೂರಾಗಿದ್ದು, ಅದರಲ್ಲೂ ಶಿವಮೊಗ್ಗಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಅಹಮದಾಬಾದ್‌ನ ರಕ್ಷಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕರ್ನಾಟಕಕ್ಕೆ ರಕ್ಷಾ ವಿವಿಯೊಂದನ್ನು ತರುವ ಬಗ್ಗೆ ಚರ್ಚಿಸಲಾಗಿತ್ತು. ಅದರ ಪರಿಣಾಮ ರಾಜ್ಯಕ್ಕೆ ಈ ವಿಶ್ವವಿದ್ಯಾಲಯ ಮಂಜೂರಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಶಿವಮೊಗ್ಗದಲ್ಲಿ ಕಾರ್ಯಾರಂಭ ಮಾಡಲಿದೆ. ಅದಕ್ಕಾಗಿ ನವುಲೆ ಸರ್ವೇ ನಂ.12ರಲ್ಲಿ 8 ಎಕರೆ ಭೂಮಿಯನ್ನು ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ತಾತ್ಕಾಲಿಕವಾಗಿ ರಾಗಿಗುಡ್ಡದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಟ್ಟಡದಲ್ಲಿ ವಿವಿ ಆರಂಭವಾಗಲಿದೆ. ಜಿಲ್ಲೆಯ ಯುವಕರಿಗೆ ಹೊಸ ದಿಕ್ಕನ್ನು ತೋರಿಸುತ್ತದೆ. ಉದ್ಯೋಗ ನೀಡುವಲ್ಲಿ ಸಹಕರಿಸುತ್ತದೆ ಎಂದರು.

ಇದನ್ನು ಒದಿ‌ : https://cnewstv.in/?p=12265

ಇಡೀ ದೇಶದಲ್ಲೇ ಎರಡನೇ ರಕ್ಷಾ ವಿಶ್ವವಿದ್ಯಾಲಯ ಇದಾಗಿದ್ದು, ಭದ್ರತಾ ವಿಷಯಕ್ಕೆ ಸಂಬಂಧಿಸಿದ ಕೋರ್ಸುಗಳ ಡಿಪ್ಲೊಮೋ, ಪದವಿ ತರಗತಿಗಳ ಶಿಕ್ಷಣ ನೀಡಲಾಗುವುದು. ಡಿಪ್ಲೊಮೋ ಇನ್ ಪೊಲೀಸ್ ಸೈನ್ಸ್, ಬೇಸಿಕ್ ಕೋರ್ಸ್ ಇನ್ ಕಾರ್ಪೋರೇಟ್ ಸೆಕ್ಯೂರಿಟಿ ಮ್ಯಾನೇಜ್‌ಮೆಂಟ್, ಡಿಪ್ಲೊಮೋ ಇನ ಕ್ರಿಮಿನಲ್ ಇನ್ವೆಸ್ಟಿಗೇಶನ್, ಪಿಜಿ ಡಿಪ್ಲೊಮೋ ಇನ್ ಸೈಬರ್ ಸೆಕ್ಯೂರಿಟಿ ಆಂಡ್ ಸೈಬರ್ ಲಾ. ರೋಡ್ ಟ್ರಾಫಿಕ್ ಸೇಪ್ಟಿ ಮ್ಯಾನೇಜ್‌ಮೆಂಟ್, ದೈಹಿಕ ಸಾಮರ್ಥ್ಯ ನಿರ್ವಹಣೆಯ ಎರಡು ವಾರಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಪಿಜಿ ಡಿಪ್ಲೊಮೋ ಇನ್ ಕೋಸ್ಟಲ್ ಸೆಕ್ಯೂರಿಟಿ ಅಂಡ್ ಎಎಂಪಿ: ಲಾ ಎನ್ಫೋರ್ಸ್ಮೆಂಟ್ ಕೋರ್ಸ್ಗಳ ಬೋಧನೆ ಮಾಡಲಾಗುವುದು ಎಂದರು.

ಇದರಿಂದ ಪೊಲೀಸ್ ಮತ್ತು ರಕ್ಷಣಾ ವಿಭಾಗಗಳಿಗೆ ನೇರವಾಗಿ ಅಭ್ಯರ್ಥಿಗಳು ಆಯ್ಕೆಯಾಗಬಹುದಾಗಿದ್ದು, ಇದೊಂದು ವೃತ್ತಿ ಭದ್ರತೆಯ ಶಿಕ್ಷಣವಾಗಿದೆ, ಜಿಲ್ಲೆಯ ವಿದ್ಯಾರ್ಥಿಗಳಿಗೆ ಇದು ವರದಾನವಾಗಲಿದೆ ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments