Breaking News

‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.

Cnewstv / 08.03.2023 / ಬೆಂಗಳೂರು /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

‘ಕರ್ನಾಟಕ ಬಂದ್’ ಹಿಂಪಡೆದ ಕಾಂಗ್ರೆಸ್.

ಬೆಂಗಳೂರು : ನಾಳೆ ಕಾಂಗ್ರೆಸ್ ಕರೆ ನೀಡಿದ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಯುವಕರಿಗೆ ನಮ್ಮ ಮೊದಲ ಆದ್ಯತೆ, ಬಂದ್ ಹಿಂಪಡೆಯಲಾಗಿದೆ ಆದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

” ಮಾರ್ಚ್ 9 ರಂದು ಪಿಯುಸಿ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಮಾರ್ಚ್ 9 ರ ‘ಕರ್ನಾಟಕ ಬಂದ್’ ಕರೆಯನ್ನು ಹಿಂಪಡೆಯಲು ಪೋಷಕರು ಮತ್ತು ವಿದ್ಯಾರ್ಥಿಗಳು ನನ್ನನ್ನು ಮತ್ತು ಸಿಎಲ್‌ಪಿ ನಾಯಕರನ್ನು ಸಂಪರ್ಕಿಸಿದ್ದಾರೆ.

ನಮ್ಮ ಯುವಕರಿಗೆ ಮೊದಲ ಆದ್ಯತೆ.

ಬಂದ್ ಹಿಂಪಡೆಯಲು ಕೆಪಿಸಿಸಿ ನಿರ್ಧರಿಸಿದೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*