ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ.

Cnewstv / 10.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ.

ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಅಗತ್ಯ ಕೌಂಟರ್‍ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.

ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‍ಸೈಟ್ ವಿಳಾಸ www.shivamoggacitycorp.org ಮುಖಾಂತರ ಆನ್‍ಲೈನ್‍ನಲ್ಲಿ ಹಾಗೂ ಯುಪಿಐ ಮೊಬೈಲ್ ಆ್ಯಪ್‍ಗಳಾದ ಪೇಟಿಎಂ/ಫೋನ್ ಪೇ/ಗೂಗಲ್ ಪೇ/ಇತರೆ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿರುತ್ತದೆ.

ಸರ್ಕಾರದ ಸುತ್ತೋಲೆಯನ್ವಯ 2023-24 ನೇ ಸಾಲಿಗೆ ಅನ್ವಯಿಸುವ ಆಸ್ತಿ ತೆರಿಗೆ ಮೇಲಿನ ಶೇ.5 ರ ತೆರಿಗೆ ರಿಯಾಯಿತಿ ಸೌಲಭ್ಯದ ಕಾಲಾವಧಿಯನ್ನು ಜೂನ್-30ರವರೆಗೆ ಅಲ್ಲದೇ ದಿನಾಂಕ:01-07-2023 ರಿಂದ ಅನ್ವಯಿಸುವಂತೆ ವಿಳಂಬದ ಅವಧಿಗೆ ಮಾಸಿಕ ಶೇ.2 ರಷ್ಟು ದಂಡ ವಿಧಿಸಲಾಗುವುದು.

ಸಾರ್ವಜನಿಕರು ಜೂನ್-30 ರವರೆಗೆ ಶೇ.5 ರ ತೆರಿಗೆ ರಿಯಾಯಿತಿ ಸೌಲಭ್ಯವನ್ನು ಉಪಯೋಗಿಸಿಕೊಂಡು ಪಾವತಿಸಬಹುದು. ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕಚೇರಿಯ ರಾಜಸ್ವ ನಿರೀಕ್ಷಕರು ಹಾಗೂ ಕರ ವಸೂಲಿಗಾರರು ಕಚೇರಿಯಿಂದ ಅನುಮೋದಿತವಾಗಿರುವ ಇಡಿಸಿ(ಪಿಓಎಸ್) ಯಂತ್ರಗಳ ಮೂಲಕ ನೇರವಾಗಿ ಆಸ್ತಿ ಮಾಲೀಕರ ಸ್ವತ್ತಿನ ಸ್ಥಳದಲ್ಲಿ ಪಾವತಿಸಿಕೊಂಡು ರಸೀದಿಯನ್ನು ನೀಡುವ ಸೌಲಭ್ಯ ಸಹ ಕಲ್ಪಿಸಲಾಗಿದ್ದು, ಏಪ್ರಿಲ್-2023ರ ಅವಧಿಯಲ್ಲಿ ತೆರಿಗೆ ಪಾವತಿಸಿ ಸಾರ್ವಜನಿಕರು ಶೇ. 5%ರ ತೆರಿಗೆ ರಿಯಾಯಿತಿ ಸೌಲಭ್ಯವನ್ನು ಪಡೆಯಲು ಹಾಗೂ ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments