Breaking News

ಕೆ ಎಸ್ ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು..

Cnewstv / 12.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಈಶ್ವರಪ್ಪ ರಾಜೀನಾಮೆ ಹಿನ್ನೆಲೆ : ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು..

ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಅವರ ಅಭಿಮಾನಿಗಳು ಸಾಲು ಸಾಲು ಪ್ರತಿಭಟನೆಗಳನ್ನ ನಡೆಸುತ್ತಿದ್ದಾರೆ. ಇಂದು ಕೂಡ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಅವರ ಬೆಂಬಲಿಗರು ಪ್ರತಿಭಟನೆಯನ್ನು ನಡೆಸಿದರು.

ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಈಶ್ವರಪ್ಪನವರಿಗೆ ಟಿಕೆಟ್ ಕೊಡಬೇಕು ಇಲ್ಲವಾದರೆ ಅವರ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಬೆಂಗಳೂರಿನತ್ತ ಬಿಜೆಪಿ ಪಾಲಿಕೆ ಸದಸ್ಯರು.

ಶಿವಮೊಗ್ಗ ಮಹಾನಗರ ಪಾಲಿಕೆಯ 25 ಬಿಜೆಪಿ ಸದಸ್ಯರು ಇಂದು ಬೆಂಗಳೂರಿಗೆ ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ ಶಿವಮೊಗ್ಗ ಅಭ್ಯರ್ಥಿಯನ್ನಾಗಿ ಈಶ್ವರಪ್ಪನವರನ್ನೇ ಘೋಷಿಸಬೇಕು ಎಂದು ಅವರ ಮುಖೇನ ಹೈಕಮಾಂಡಿಗೆ ಮನವಿ ಸಲ್ಲಿಸಲಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*