Cnewstv / 24.04.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ??
ಶಿವಮೊಗ್ಗ : 100 ಕ್ಕೆ 90 ಭಾಗ ವೀರಶೈವರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಹಾಗೆಯೇ 100 ಕ್ಕೆ 100ರಷ್ಟು ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಕೊನೆಯ ಎರಡು ದಿನಗಳು ಇರುವಾಗ ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳುವೆ.
ವೀರಶೈವರ ಬಗ್ಗೆ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯವರು ತುಂಬಾ ಹಗುರವಾಗಿ ಮಾತನಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ವೀರಶೈವರ ಕುರಿತು ಹೇಳಿಕೆಗಳನ್ನು ನೀಡಬಾರದು. ಹಾಗೆಯೇ ರಾಹುಲ್ ಗಾಂಧಿಯವರು ಬಿಜೆಪಿಯವರು ಬಸವಣ್ಣನವರ ತತ್ವವನ್ನು ಅನುಸರಿಸುತ್ತಾರೆಯೇ ಎಂದು ಹಗುರವಾಗಿ ಮಾತನಾಡಿದ್ದಾರೆ. ವೀರಶೈವರ ಬಗ್ಗೆ ರಾಹುಲ್ ಗಾಂಧಿಯವರಿಗೆ ಏನು ಗೊತ್ತಿದೆ ಎಂದು ಪ್ರಶ್ನೆ ಮಾಡಿದರು. ??
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv