Breaking News

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ.

ಶಿವಮೊಗ್ಗ: ಶಿವಮೊಗ್ಗ ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ನನ್ನ ಅವಧಿಯಲ್ಲಿ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸಿದ್ದು, ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಶಿವಮೊಗ್ಗ ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕರ್ನಾಟಕ ಸರ್ಕಾರ ೨೭-೧೨-೨೦೧೯ರಂದು ನನ್ನನ್ನು ಮುಂದಿನ ಆದೇಶದವರೆಗೆ ಅನ್ವಯವಾಗುವಂತೆ ಶಿವಮೊಗ್ಗ ರಂಗಾಯಣದ ನಿರ್ದೇಶಕನನ್ನಾಗಿ ನೇಮಕ ಮಾಡಿ, ಆದೇಶ ಹೊರಡಿಸಿತ್ತು. ಅದರಂತೆ ನಾನು ಮೂರು ವರ್ಷ ಮೂರು ತಿಂಗಳು ಕಾಲ ಈ ಹುದ್ದೆಯಲ್ಲಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ತೀರ್ಥಹಳ್ಳಿಯಂತಹ ಗ್ರಾಮೀಣ ಭಾಗದಲ್ಲಿ ಕಳೆದ ಮೂರು ದಶಕಗಳಿಂದ ರಂಗಭೂಮಿ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡ ನನಗೆ ಸಂಘಟನೆಯ ಹಿರಿಯರು ಅನಿರೀಕ್ಷಿತವಾಗಿ ಈ ಜವಾಬ್ದಾರಿಯನ್ನು ನೀಡಿದರು.

ನನ್ನ ಅವಧಿಯಲ್ಲಿ ಬಿಎಸ್‌ವೈ. ಬಿವೈಆರ್, ಆರಗ ಜ್ಞಾನೇಂದ್ರ, ಕೆ.ಎಸ್. ಈಶ್ವರಪ್ಪ, ಸಿ.ಟಿ ರವಿ. ಅರವಿಂದ ಲಿಂಬಾವಳಿ ಮೊದಲಾದ ನಾಯಕರು ಬೆನ್ನಿಗೆ ನಿಂತು ಸಹಕರಿಸಿದ್ದು, ಅವರೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ನನ್ನ ಅವಧಿಯಲ್ಲಿ ಶಿವಮೊಗ್ಗ ರಂಗಾಯಣದಲ್ಲಿ ವಾರಾಂತ್ಯ ನಾಟಕಗಳ ಪ್ರದರ್ಶನ ಬಹುಮುಖಿ ರಾಷ್ಟಿçÃಯ ಉತ್ಸವಗಳ ಆಯೋಜನೆ, ಚಿಣ್ಣರೊಂದಿಗೆ ಶಿವಮೊಗ್ಗ ರಂಗಾಯಣ,- ಬೇಸಿಗೆ ಶಿಬಿರಗಳು, ಯುವ ಹವ್ಯಾಸಿ ಕಲಾವಿದರಿಗಾಗಿ ೩ ತಿಂಗಳ ರಂಗ ಶಿಕ್ಷಣ ಸರ್ಟಿಫಿಕೇಟ್ ಕೋರ್ಸ್, ಯುವಜನತೆಯನ್ನು ರಂಗಭೂಮಿಯೆಡೆಗೆ ಸೆಳೆಯುವ ಪ್ರಯತ್ನವಾಗಿ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾಲೇಜು ರಂಗೋತ್ಸವ, ಕೋವಿಡ್‌ನ ಸಂದರ್ಭದಲ್ಲಿಯೂ ವಿರಮಿಸದೆ ಆನ್‌ಲೈನ್ ಕಾರ್ಯಕ್ರಗಳ ಆಯೋಜನೆ, ಜೀವನ್ಮುಖಿ ಮಹಿಳಾ ರಂಗೋತ್ಸವ, ವಿಶ್ವ ರಂಗಭೂಮಿ ದಿನಾಚರಣೆ, ರಂಗಾಯಣ ರೆಪೆರ್ಟರಿಯ ನಾಟಕಗಳ ಪ್ರದರ್ಶನ, ಮತ್ತು ರಾಜ್ಯಾದ್ಯಂತ ರಂಗತೇರು-ರAಗಪಯಣದ ಹೆಸರಿನಲ್ಲಿ ತಿರುಗಾಟ, ಹೊರರಾಜ್ಯ ವಿಶೇಷವಾಗಿ ದೆಹಲಿಯಲ್ಲಿ ಶಿವಮೊಗ್ಗ ರಂಗಾಯಣದ ನಾಟಕಗಳ ಪ್ರದರ್ಶನ, ರಂಗಭೂಮಿ ಕುರಿತಂತೆ ವಿಚಾರ ಸಂಕಿರಣಗಳು, ಸರ್ಕಾರದ ಸರ್ವರಿಗೂ ಸಂವಿಧಾನ ಯೋಜನೆಯಡಿ ವಿ ದ ಪೀಪಲ್ ಆಫ್ ಇಂಡಿಯಾ ನಾಟಕದ ಸುಮಾರು ೬೦ ಕಡೆಗಳಲ್ಲಿ ಯಶಸ್ವೀ ಪ್ರದರ್ಶನ ನಡೆಸಿದೆ. ಅಷ್ಟೇ ಅಲ್ಲದೆ ರಂಗಾಯಣದ ಆವರಣದಲ್ಲಿ ಭಿತ್ತಿಚಿತ್ರಗಳು, ಸಿಮೆಂಟ್ ಶಿಲ್ಪಗಳ ಅನಾವರಣ, ಭವನದ ಸಮೀಪ ಬಯಲು ರಂಗಮAದಿರದ ಕಾಮಗಾರಿ. ಇವಿಷ್ಟು ನನ್ನ ಅವಧಿಯಲ್ಲಿ ನಡೆದಿದೆ ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments