Breaking News

ಅಶೋಕ್ ನಾಯ್ಕ್ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ.

Cnewstv / 16.05.2023/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಅಶೋಕ ನಾಯ್ಕ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ.

ಶಿವಮೊಗ್ಗ : ಈ ಚುನಾವಣೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ಅವರಿಗೆ ತಕ್ಕ ಪಾಠ ಕಲಿಸಿದ್ದೇವೆ ಎಂದು ತಾಲೂಕು ಬಂಜಾರ ಸಂಘದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

ಅಶೋಕ್ ನಾಯ್ಕ ಅವರ ದುರಹಂಕಾರಿ ವರ್ತನೆಯನ್ನು ಎಲ್ಲಾ ಸಮುದಾಯದ ಜನರು ತಿರಸ್ಕರಿಸಿದ್ದಾರೆ. ನೈತಿಕವಾಗಿ ನಿಮಗೆ ಜಿಲ್ಲಾ ಬಂಜಾರ ಅಧ್ಯಕ್ಷರಾಗಿ ಮುಂದುವರಿಯುವ ಹಕ್ಕಿಲ್ಲ. ಕೂಡಲೇ ಜಿಲ್ಲಾ ಬಂಜಾರ ಸಂಘದ ವಾರ್ಷಿಕ ಮಹಾಸಭೆ ಕರೆದು ಲೆಕ್ಕ ಪತ್ರ ಮಂಡಿಸಿ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸರ್ಕಾರದ ಮೀಸಲಾತಿ ವರ್ಗಿಕರಣವನ್ನು ಬಂಜಾರ ಸಮುದಾಯ ವಿರೋಧಿಸಿ ತಕ್ಕ ಪಾಠ ಕಲಿಸಿದೆ. ಬಿಜೆಪಿಯನ್ನು ಇಡೀ ರಾಜ್ಯದಲ್ಲಿ ಬಂಜಾರ ಸಮುದಾಯ ತಿರಸ್ಕರಿಸಿದೆ. ಗೆದ್ದ ಕಾಂಗ್ರೆಸ್ ಹಿರಿಯ ಶಾಸಕ ದುಗ್ಗಪ್ಪ ಲಮಾಣಿ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನವನ್ನು ಕಾಂಗ್ರೆಸ್ ಸರ್ಕಾರದಲ್ಲಿ ನೀಡಬೇಕು ಎಂದು ಅವರು ಆಗ್ರಹಿಸಿದರು.

ದಲಿತ ಸಮುದಾಯದ ಜೇನುಗೂಡಿಗೆ ಕಾಂಗ್ರೆಸ್ ಸರ್ಕಾರ ಕೂಡ ಕೈ ಹಾಕದೆ ಹಳೆ ಮೀಸಲಾತಿಯನ್ನು ಮುಂದುವರಿಸಬೇಕು. ಸದಾಶಿವ ಆಯೋಗದ ವರದಿಯನ್ನು ಕೂಲಂಕಶವಾಗಿ ಚರ್ಚೆ ಮಾಡಿ ತುಳಿತಕ್ಕೊಳಗಾದ ಸಮುದಾಯದ ಅಂಕಿ-ಅAಶಗಳನ್ನು ಬಹಿರಂಗ ಪಡಿಸಿ ಅವರಿಗೆ ನ್ಯಾಯ ಒದಗಿಸಬೇಕು ಎಂದರು.

ಅಶೋಕ ನಾಯ್ಕರು ಅವರ ಭ್ರಷ್ಟಾಚಾರದಿಂದಲೇ ಸೋಲುಂಡರು. ಭ್ರಷ್ಟಾಚಾರರಿತ ವ್ಯಕ್ತಿ ಎಂದು ಅವರು ಪ್ರಮಾಣ ಮಾಡುವುದಾದರ ಸೂರಗೊಂಡನಕೊಪ್ಪದಲ್ಲಿ ಪ್ರಮಾಣ ಮಾಡಲಿ ಎಂದು ಸವಾಲೆಸೆದರು. ಒಂದು ಪಕ್ಷದ ಮುಖವಾಣಿಯಾಗಿ ತಾಲೂಕು ಬಂಜಾರ ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ ಸರ್ವಾಧಿಕಾರಿ ಧೋರಣೆ ತೋರಿಸಿ ನೂತನ ಬಂಜಾರ ಭವನ ಉದ್ಘಾಟನೆಯ ಸಂದರ್ಭದಲ್ಲಿ ತಾಲೂಕು ಬಂಜಾರ ಸಮಾಜದ ಪ್ರಮುಖರನ್ನು ಹೊರಗಿಟ್ಟಿದ್ದಾರೆ. ಅವರ ಕೈಗೊಂಬೆಯಾದವರನ್ನು ಮಾತ್ರ ಪಕ್ಕಕ್ಕಿಟ್ಟುಕೊಂಡು ವಾಣಿಜ್ಯ ಉದ್ದೇಶಕ್ಕೆ ಕಟ್ಟಡ ನಿರ್ಮಾಣ ಮಾಡಿದ್ದಾರೆ. ಇದಕ್ಕೆ ಬಂದ ಅನುದಾನ ಮತ್ತು ಸಮಾಜದ ದೇಣಿಗೆಯ ಲೆಕ್ಕ ಕೊಟ್ಟಿಲ್ಲ. ಹಿಂದಿನ ಕಟ್ಟಡದಲ್ಲಿ ಬಡ ವಿದ್ಯಾರ್ಥಿಗಳಿಗೆ ನಿಲ್ಲಲು ಅವಕಾಶವಿತ್ತು. ಈಗ ಹೊಸ ಕಟ್ಟಡದಲ್ಲಿ ನಿರ್ಮಿಸಿದ ಕೊಠಡಿಗಳನ್ನು ಬಂಜಾರ ಭವನದ ಕಾರ್ಯಕ್ರಮಕ್ಕೆ ಬಂದವರಿಗೆ ನೀಡಲಾಗುತ್ತಿದೆ. ಮೂಲ ಉದ್ದೇಶಕ್ಕೆ ಧಕ್ಕೆಯಾಗಿ ಈ ಭವನ ನಿರ್ಮಾಣಗೊಂಡಿದೆ ಎಂದು ಅವರು ಆರೋಪಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ ಅಶೋಕ ನಾಯ್ಕ ಅವರು ಸ್ವಯಂಕೃತ ಅಪರಾಧದಿಂದ ಸೋತಿದ್ದಾರೆ. ಮತದಾನ ಪ್ರಮಾಣದಲ್ಲಿಹೆಚ್ಚಳವಾಗಿರುವುದರಿಂದ ಅವರಿಗೆ ಸ್ವಲ್ಪ ಮತಗಳ ಹೆಚ್ಚಳವಾಗಿರಬಹುದು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments