Cnewstv / 21.08.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಪಾಲಿಕೆ ಸದಸ್ಯರ ಅನುದಾನದಲ್ಲಿ ಕನ್ನಡಮಯ ಆಟೋ ಶೆಲ್ಟರ್ ನಿರ್ಮಾಣ
ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸನಗರ ಬಡಾವಣೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಾಣಗೊಂಡಿದ್ದು ಇಂದು ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಉದ್ಘಾಟನೆ ನೆರವೇರಿಸಿದರು.
ಅಲ್ಲದೆ ಹೊಸಮನೆ ೧ನೇ ಮುಖ್ಯ ರಸ್ತೆಯ ಡಾ. ಪುನೀತ್ರಾಜ್ಕುಮಾರ್ ರಸ್ತೆಯ ಬನಶಂಕರಿ ಆಟೋ ನಿಲ್ದಾಣಕ್ಕೆ ನೂತನ ಆಟೋ ಶೆಲ್ಟರ್ ನಿರ್ಮಿಸಿದ್ದು ಇದೇ ಸಂದರ್ಭದಲ್ಲಿ ಉದ್ಘಾಟಿಸಲಾಯಿತು.
ಈ ಆಟೋ ನಿಲ್ದಾಣ ಸಂಪೂರ್ಣ ಕನ್ನಡಮಯವಾಗಿದ್ದು, ಸಾಹಿತಿಗಳ, ಚಿತ್ರನಟರ, ಸಾಧಕರ ನಾಲ್ವಡಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಕುವೆಂಪು, ದ.ರಾ. ಬೇಂದ್ರೆ, ಶಿವರಾಮ ಕಾರಂತರು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ವಿ.ಕೃ. ಗೋಕಾಕ್, ಯು.ಆರ್. ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರ, ಡಾ. ರಾಜ್ಕುಮಾರ್, ಶಂಕರನಾಗ್, ಡಾ. ವಿಷ್ಣುವರ್ಧನ್ ಅಂಬರೀಷ್, ಪುನೀತ್ ರಾಜ್ಕುಮಾರ್, ಸಾಲುಮರದ ತಿಮ್ಮಕ್ಕ, ಮಂಜಮ್ಮ ಜೋಗತಿ ಇವರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಕೆ.ರಂಗನಾಥ್, ಆಟೋ ಚಾಲಕರು, ಮಾಲೀಕರು ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv