Www.cnewstv.in / 01.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರಾಗಿಗುಡ್ಡದಲ್ಲಿ ಲಾಠಿಚಾರ್ಜ್. RAF ಸಿಬ್ಬಂದಿಯಿಂದ ರೂಟ್ ಮಾರ್ಚ್..
ಶಿವಮೊಗ್ಗ : ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಶಾಂತಿನಗರದಲ್ಲಿ ಕಲ್ಲುತೂರಾಟ ನಡೆದಿದ್ದು, ಮಾರುತಿ ವ್ಯಾನ್ ಮತ್ತು ದ್ವಿಚಕ್ರ ವಾಹನಗಳ ಗಾಜು ಪುಡಿ ಪುಡಿ ಆಗಿದೆ. ಕೆಲ ಮನೆಗಳ ಮೇಲು ಸಹ ಕಲ್ಲುತೂರಾಟ ನಡೆದಿದೆ. ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ರಾಗಿಗುಡ್ಡ – ಶಾಂತಿನಗರದಲ್ಲಿ ಸೆಕ್ಷನ್ 144 ನಿಷೇಧಾಜ್ಙೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಗುಂಪು ಸೇರದಂತೆ ಪೊಲೀಸ್ ಸರು ವಾಹನಗಳಲ್ಲಿ ಅನೌನ್ಸ್ ಮಾಡುತ್ತಿದ್ದಾರೆ.
ಹ್ಯಾಪಿ ಆಕ್ಷನ್ ಪೋಸ್ಟ್ ಸಿಬ್ಬಂದಿಯಿಂದ ರಾಗಿಗುಡ್ಡ ಬಡಾವಣೆಯಲ್ಲಿ ರೂಟ್ ಮಾರ್ಚ್ ನಡೆಸಿದರು. ಸದ್ಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಶಾಂತಿನಗರ ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv