Www.cnewstv.in / 16.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೈತ ದಸರಾ – ವಿಪಕ್ಷ ನಾಯಕಿ ಮೆಹಖ್ ಷರೀಫ್.
ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಹಮ್ಮಿಕೊಂಡಿರುವ ದಸರಾ ಮಹೋತ್ಸವದಲ್ಲಿ ರೈತ ದಸರಾ ಸಮಿತಿ ವತಿಯಿಂದ ಬರಗಾಲದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ರೈತ ದಸರಾವನ್ನು ಆಚರಿಸಲಾಗುವುದು ಎಂದು ಸಮಿತಿ ಅಧ್ಯಕ್ಷೆ ಮೆಹಖ್ ಷರೀಫ್ತಿಳಿಸಿದರು.
ಬೆಳಿಗ್ಗೆ 9 ಗಂಟೆಗೆ ಸೈನ್ಸ್ ಮೈದಾನದಿಂದ ಕುವೆಂಪು ರಂಗಮಂದಿರದವರೆಗೆ ರೈತ ಜಾಥಾ ನಡೆಯಲಿದ್ದು, ಈ ಜಾಥಾದಲ್ಲಿ ಎತ್ತಿನಗಾಡಿ, ಟ್ರಾö್ಯಕ್ಟರ್, ಟಿಲ್ಲರ್ ಹಾಗೂ ರೈತರು ಭಾಗವಹಿಸಲಿದ್ದಾರೆ ಎಂದರು.
ಬೆಳಿಗ್ಗೆ ೧೧ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯ ಪ್ರಗತಿಪರ ರೈತ ಹಾಗೂ ಉದಯೋನ್ಮುಖ ಕೃಷಿ ಪಂಡಿತರಾದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕೆ.ಆರ್. ಜ್ಞಾನೇಶ್ ಉದ್ಘಾಟಿಸಲಿದ್ದು. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಶಾಸಕಿ ಶಾರದಾ ಪರ್ಯಾ ನಾಯ್ಕ ಸನ್ಮಾನಿಸಲಿದ್ದಾರೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಹೆಚ್.ಸಿ. ಯೋಗೇಶ್, ಅಧಿಕಾರಿ ನಾಗೇಂದ್ರ ಉಪಸ್ಥಿತರಿದ್ದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv