Breaking News

ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ

Www.cnewstv.in / 31.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು?? ಬೇಳೂರು ಗರಂ

ಶಿವಮೊಗ್ಗ : ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಅಧಿಕಾರ ಅನುಭವಿಸಬೇಕಾ ?? ನನ್ನಂತ ಸಾಮಾನ್ಯ ಕಾರ್ಯಕರ್ತ ಏನು ಮಾಡಬೇಕು ಎಂದು ಸಾಗರ ಶಾಸಕ ಬೇಲೂರು ಗೋಪಾಲಕೃಷ್ಣ ಕೇಳಿದ ಪ್ರಶ್ನೆ ಇದೀಗ ರಾಜಕೀಯದಲ್ಲಿ ಹೊಸ ಸಂಚಲನವನ್ನು ಮೂಡಿಸಿದೆ.

ಜಿಲ್ಲೆಯಲ್ಲಿ ನಾನು ಕೂಡ ನಾಯಕನಾಗಿದ್ದೇನೆ.‌ ಸರ್ಕಾರದ ಯಾವುದೇ ಸಚಿವರ ಮೇಲೆ ಅಸಮಾಧಾನವಿಲ್ಲ. ನಾನು ಕೂಡ ಮೂರು ಬಾರಿ ಶಾಸಕನಾಗಿ ಗೆದ್ದು ಬಂದಿದ್ದೇನೆ. ಜಿಲ್ಲೆಯ ಜನರ ನಾಡಿಮಿಡಿತ ನನಗೆ ಚೆನ್ನಾಗಿ ಗೊತ್ತಿದೆ. ಹಾಗಾಗಿ ಈ ಬಾರಿಯ ಎಂಪಿ ಟಿಕೇಟಿನ ಪ್ರಬಲ ಆಕಾಂಕ್ಷಿಯಾಗಿದ್ದೇನೆ.‌

ಎಂಪಿ ಟಿಕೆಟ್ ನನಗೆ ಕೊಟ್ಟಿದ್ದೆ ಆದಲ್ಲಿ, ಬಿಜೆಪಿಯ ಯಡಿಯೂರಪ್ಪ ಮತ್ತು ಕುಟುಂಬದವರನ್ನು ಸೋಲಿಸಿ ಮನೆಗೆ ಕಳುಹಿಸುವುದೇ ನನ್ನ ಗುರಿ. ಎಂದಿಗೂ ನಾನು ಆಪರೇಷನ್ ಕಮಲಕ್ಕೆ ಬಗ್ಗುವುದಿಲ್ಲ. ಕೆಲವೇ ದಿನಗಳಲ್ಲಿ ಬಿಜೆಪಿಯ ಕೆಲವು ಘಟಾನುಘಟಿ ನಾಯಕರು ಕಾಂಗ್ರೆಸ್ಸಿನತ್ತ ಮುಖ ಮಾಡಲಿದ್ದಾರೆ. ಆಪರೇಷನ್ ಕಮಲದ ಹುಚ್ಚು ಕನಸನ್ನು ಬಿಜೆಪಿಯ ಕೆಲವು ನಾಯಕರು ಕಾಣುತ್ತಿರುವುದು ಹಾಸ್ಯಗೇಡಿನ ಸಂಗತಿ.‌

ವಿರೋಧ ಪಕ್ಷದ ನಾಯಕರನ್ನು ನೇಮಕ ಮಾಡಿಕೊಳ್ಳಲು ಆಗಲಿಲ್ಲ, ಇನ್ನು ಇವರು ಆಪರೇಷನ್ ಕಮಲ ಮಾಡುತ್ತಾರೆ ?? ನಮ್ಮ ಸರ್ಕಾರ ಬೀಳುವುದಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ.

ನಾನು ಬಂಗಾರಪ್ಪನವರ ಆದರ್ಶಗಳನ್ನು ನೋಡಿ ಅವರ ಗರಡಿಯಲ್ಲಿ ಬೆಳೆದವನು. ಬಂಗಾರಪ್ಪನವರ ತತ್ವ ಸಾಮಾನ್ಯ ಕಾರ್ಯಕರ್ತರನ್ನು ಬೆಳೆಸುವಂತಿತ್ತು ಆದರೆ ಇಂದಿನ ನಾಯಕರ ಮನಸ್ಥಿತಿ ತಮ್ಮ ಕುಟುಂಬದವರನ್ನು ರಾಜಕೀಯಕ್ಕೆ ತರುವುದಾಗಿದೆ.

ಯಾರೇ ಬಂದರೂ ನನ್ನ ಹೋರಾಟವನ್ನು, ನನ್ನ ಜನಪರ ಸೇವೆಯನ್ನು ಯಾರಿಂದಲೂ ಕುಗ್ಗಿಸಲು ಸಾಧ್ಯವಿಲ್ಲ.. ನಾನು ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ..

ವಿಡಿಯೋ ನ್ಯೂಸ್…

 

https://youtu.be/k00Mldq_Ng8

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments