Breaking News

ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಅಥವಾ ಇನ್ನಾವುದೋ ಕೊರತೆಯಿಂದ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ : ಮಧು ಬಂಗಾರಪ್ಪ.

Www.cnewstv.in / 03.11.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಅಥವಾ ಇನ್ನಾವುದೋ ಕೊರತೆಯಿಂದ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ : ಮಧು ಬಂಗಾರಪ್ಪ.

ಶಿವಮೊಗ್ಗ : ಶಿವಮೊಗ್ಗದಲ್ಲಿ ಕೈಗಾರಿಕೋದ್ಯಮ ಬೆಳೆಯುವ ಸಾಮಥ್ರ್ಯ ಇದ್ದು, ಇದಕ್ಕೆ ಅಗತ್ಯವಾದ ಸಹಕಾರ ನೀಡಲು ಸಿದ್ದನಿದ್ದೇನೆ. ಬದಲಾವಣೆ ತರಲು ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಉದ್ಯಮಿಗಳಿಗೆ ಕರೆ ನೀಡಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪರೋಕಾಸ್ಟ್ ಸಭಾಂಗಣದಲ್ಲಿ ಉದ್ದಿಮೆದಾರರು ಮತ್ತು ಕೈಗಾರಿಕೋದ್ಯಮಿಗಳೊಮದಿಗೆ ಇಂದು ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿವಮೊಗ್ಗ ಸಾಕಷ್ಟು ಬೆಳೆದಿದೆ. ಆದರೆ ಇಚ್ಚಾಶಕ್ತಿ ಅಥವಾ ಇನ್ನಾವುದೋ ಕೊರತೆಯಿಂದ ಕೈಗಾರಿಕೋದ್ಯಮ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆದಿಲ್ಲ. ಕೈಗಾರಿಕೆಗಳು ಬೆಳೆಯಲು ಅಗತ್ಯವಾದ ಮೂಲಭೂತ ಸೌಕರ್ಯಗಳು, ರಸ್ತೆ, ವಿಮಾನ ನಿಲ್ದಾಣ, ಸೇರಿದಂತೆ ಎಲ್ಲ ರೀತಿಯ ಸೌಕರ್ಯ ಇದೆ. ಇದರ ಬಳಕೆ ಆಗಬೇಕು. ಕೈಗಾರಿಕೆ ಬೆಳೆದಷ್ಟು ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ದಿ ಆಗುವುದು. .

ಉತ್ತಮ ಶಾಲೆಗಳಿವೆ ಎಂದು ಜನ ಬೆಂಗಳೂರಿಗೆ ಹೋಗುತ್ತಾರೆ. ಉತ್ತಮ ಶಾಲೆ-ಸಂಸ್ಥೆಗಳು ಇಲ್ಲಿಯೇ ಆದರೆ ಜನ ಬೆಂಗಳೂರಿಗೆ ಹೋಗುವುದು ತಪ್ಪುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗಿದ್ದೇನೆ. ಅದೇ ರೀತಿಯಲ್ಲಿ ಕೈಗಾರಿಕೆಯನ್ನೂ ಬೆಳೆಸೋಣ. ಉದ್ದಿಮೆದಾರರು, ಕೈಗಾರಿಕೋದ್ಯಮಿಗಳು ನನಗೆ ಅವಶ್ಯಕ ಇನ್‍ಪುಟ್ ನೀಡಿದಲ್ಲಿ ಅನುಕೂಲವಾಗುತ್ತದೆ. ವಿದ್ಯುತ್ ಸಮಸ್ಯೆ ಈಗ ಸ್ವಲ್ಪ ಇದೆ. ರೈತರಿಗೆ ನಾವು ವಿದ್ಯುತ್ ಕೊಡಲೇ ಬೇಕು. ಇಲ್ಲವಾದಲ್ಲಿ ರೈತರ ಫ್ಯಾಕ್ಟರಿ ನಿಂತು ಉತ್ಪಾದನೆ ಕಮ್ಮಿ ಆಗುತ್ತದೆ. ಆರ್ಥಿಕವಾಗಿ ಹಿಂದುಳಿಯುತ್ತೇವೆ.

ಜಿಲ್ಲೆಯಲ್ಲಿ ಉತ್ತಮ ಕೆಲಸಗಳು ಆಗಬೇಕು. ನಿಮ್ಮ ಸೇವಕನಾಗಿ ಕೆಲಸ ಮಾಡಲು ನಾನು ಸಿದ್ದ. ನಿಮ್ಮ ಕನಸು ನನಸು ಮಾಡುವ ಪ್ರಯತ್ನ ಮಾಡುತ್ತೇನೆ. ನಿಮ್ಮ ಮಾರ್ಗದರ್ಶನದಲ್ಲಿ ನನ್ನ ಅವಧಿಯಲ್ಲಿ ಉತ್ತಮ ಕೆಲಸಗಳು ಆಗಬೇಕೆಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*