Breaking News

ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ.

Www.cnewstv.in / 22.01.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಿಹಿ ಹಂಚುವ ವೇಳೆ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ.

ಶಿವಮೊಗ್ಗ : ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಯ ಪ್ರಯುಕ್ತ ಶಿವಮೊಗ್ಗದ ಶಿವಪ್ಪ ನಾಯಕ ವೃತದ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಸಿಹಿ ಹಂಚುವ ಕಾರ್ಯಕ್ರಮ ನಡೆಸಲಾಗುತ್ತಿತ್ತು. ಈ ವೇಳೆ ಮಹಿಳೆಯೊಬ್ಬಳು ಅಲ್ಲಾಹೋ ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾರೆ.

ಬುರ್ಖದಾರಿ ಮಹಿಳೆಯು ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ, ಅಲ್ಲಾಹು ಅಕ್ಚರ್ ಎಂಬ ಘೋಷಣೆಯನ್ನು ಕೂಗಿದ್ದಾಳೆ. ಸ್ಥಳದಲ್ಲಿ ಸೇರಿದ್ದ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಎಂಬ ಘೋಷಣೆಯನ್ನು ಕೂಗಿದ್ದಾರೆ. ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಘೋಷಣೆಯನ್ನು ಕೂಗಿದ ಮಹಿಳೆಯನ್ನ ಪೊಲೀಸರು ವಶಕ್ಕೆ ಪಡೆದು, ಜಿಪಿನಲ್ಲಿ ಕರೆದೊಳ್ದಿದ್ದು, ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.

ಈ ರೀತಿ ಘೋಷಣೆಗಳನ್ನು ಕೂಗಿದ ಮಹಿಳೆಯು ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ ಎಂದು ಆಕೆಯ ತಂದೆಯು ತಿಳಿಸಿದ್ದು, ಇದಕ್ಕೆ ಸಂಬಂಧಪಟ್ಟಂತಹ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳು ಮಾಹಿತಿಯನ್ನು ತಿಳಿಸಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*