ನಾಳೆ ಬೆಳಗ್ಗೆ 10.00 ಗಂಟೆಗೆ ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್ ನ ದೇವಾಲಯದಲ್ಲಿ ಪೂಜೆ ಸಲ್ಲಿಸಲ್ಲಿದ್ದಾರೆ. ನಂತರ ಎನ್.ಈ.ಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಕಾಾಲಕ್ರಮದಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಕೆಯ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿಗಳು, ಶಿವಮೊಗ್ಗದ ಶಾಸಕರಾದ ಶ್ರೀ ಕೆ. ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರು,ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಎಸ್.ರುದ್ರೇಗೌಡರು,ವಿಧಾನ ಪರಿಷತ್ ಸದಸ್ಯರು,ಶಿವಮೊಗ್ಗ ವಿಭಾಗ ಪ್ರಭಾರಿಗಳಾದ ಶ್ರೀ ಆಯನೂರು ಮಂಜುನಾಥ್, ಸೇರಿದಂತೆ ಹಲವು ಮುಖಂಡರುಗಳು ಹಾಗೂ ಪಕ್ಷದ ಪ್ರಮುಖರು ಭಾಗಿಯಾಗಲಿದ್ದಾರೆ.
C News TV Kannada News Online in cnewstv