Cnewstv / 07.02.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಂಸದರ ಮನೆ ಮುತ್ತಿಗೆ ಹಾಕಿದ ಜಿಲ್ಲಾ ಯುವ ಕಾಂಗ್ರೆಸ್..
ನೀವೇನು ಬಿಜೆಪಿ ಏಜೆಂಟರಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು..
ಶಿವಮೊಗ್ಗ : ದೆಹಲಿ ಚಲೋ ಬೆಂಬಲಿಸಿ ಇಂದು ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ಸಂಸದ ಬಿ ವೈ ರಾಘವೇಂದ್ರ ರವರ ಮನೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 50 ಕಾರ್ಯಕರ್ತರನ್ನ ಬಂಧಿಸಲಾಯಿತು.
ಪ್ರತಿಭಟನೆ ವೇಳೆ ಪೊಲೀಸರಿಗೂ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ನೀವೇನು ಬಿಜೆಪಿಯ ಏಜೆಂಟರುಗಳಾ ?? ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು. ನೀವು ಹೇಗೆ ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದೀರಾ ಎಂದು ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸಿದರು.. ನಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಪ್ರತಿಭಟನಾಕಾರರನ್ನು ಬಂಧಿಸಿದ್ದರು.
#youthcongress #BYRagavendra #Shivamogga #Modhi #PM #MP #MPElection2024 #Election
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv