Cnewstv / 28.2.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೆಳ್ಳಂ ಬೆಳಗ್ಗೆ ಪ್ರತ್ಯಕ್ಷವಾದ ಕರಡಿ.. ವಾಕಿಂಗ್ ಹೋದವರ ಮೇಲೆ ದಾಳಿ..
ಶಿವಮೊಗ್ಗ : ಇಂದು ಬೆಳ್ಳಂಬೆಳಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು, ವಾಕಿಂಗ್ ಹೋದವರ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.
ನಗರದ ಗೋಪಾಲಗೌಡ ಬಡಾವಣೆಯ ಎಫ್ ಬ್ಲಾಕ್ ನಾ ಡಿವಿಜಿ ಪಾರ್ಕ್ ಹಾಗೂ ರಾಮಕೃಷ್ಣ ಶಾಲೆಯ ಸುತ್ತಮುತ್ತ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಬಂದಿದ್ದ ವ್ಯಕ್ತಿಯ ಹೊಟ್ಟೆಯ ಮೇಲೆ ಪರಚಿ ದಾಳಿ ನಡೆಸಿದೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿಗಳು ತನಿಖೆ ನಡೆಯಿಸುತ್ತಿದ್ದಾರೆ. ಈ ಘಟನೆಯಿಂದಾಗಿ ಬಡಾವಣೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
#Karade #karadiattack #Bearattack #Gopalagowdaextension #Shivamogga
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv