Breaking News

ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ??

Cnewstv / 29.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಪೆನ್ ಡ್ರೈವ್ ಪ್ರಕರಣ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದೇನು ??

ಶಿವಮೊಗ್ಗ : ಪ್ರಜ್ವಲ್ ರೇವಣ್ಣ ರವರಿಗೆ ಸಂಬಂಧಿಸಿದೆನ್ನಲಾದ ಅಶ್ಲೀಲ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು, ಈ ಪ್ರಕರಣ ನನಗಷ್ಟೇ ಅಲ್ಲ ಇಡೀ ಸಮಾಜಕ್ಕೆ ಮುಜುಗರವಾಗುತ್ತದೆ. ಇದರಲ್ಲಿ ಕುಟುಂಬವನ್ನು ಏಕೆ ಎಳೆದು ತರುತ್ತೀರಾ? FIR ಅಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ಇದರಲ್ಲಿ ಯಾರು ತಪ್ಪು ಮಾಡಿದ್ದಾರೆ ಎಂಬ ವರದಿ ಬರಲಿ. ಈ ನೆಲದ ಕಾನೂನಿನಲ್ಲಿ ಯಾರು ತಪ್ಪು ಮಾಡಿದರು ತಲೆಬಾಗಲೇಬೇಕು.

ಹಾಸನ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದು ವರದಿಗಳು ಕೂಡ ಬಂದಿದೆ. ಹೀಗಿರುವಾಗ ಚುನಾವಣೆಗೂ ಎರಡು ದಿನ ಮೊದಲು ಹಾಸನದಲ್ಲಿ ಪೆನ್ ಡ್ರೈವ್ ಬಿಟ್ಟವರು ಯಾರು ? ಅದಕ್ಕೆ ಕಾರಣ ಏನು ? ಇದರ ಹಿಂದೆ ಯಾರಿದ್ದಾರೆ ಎಲ್ಲಾ ವಿಚಾರಗಳು ಎಸ್ಐಟಿ ತನಿಖೆ ನಂತರ ತಿಳಿಯಲಿದೆ.

ಇನ್ನು ಈ ಪ್ರಕರಣದಲ್ಲಿ ಕುಟುಂಬವನ್ನು ಏಕೆ ತರುತ್ತೀರಾ ?? ನನ್ನದು ಮತ್ತು ರೇವಣ್ಣ ಕುಟುಂಬ ಬೇರೆ ಬೇರೆ ಇದ್ದೇವೆ. ಇದರಲ್ಲಿ ದೇವೇಗೌಡರನ್ನು ಹಾಗೂ ನನ್ನ ಹೆಸರನ್ನ ಏಕೆ ತರುತ್ತೀರಾ ? ಇಲ್ಲಿ ವ್ಯಕ್ತಿಯ ಬಗ್ಗೆ ಚರ್ಚೆ ಮಾಡಿ. ತಪ್ಪು ಮಾಡಿದವರು ಯಾರೇ ಆದರೂ ಕೂಡ ಶಿಕ್ಷಣ ಅನುಭವಿಸಬೇಕು. ನಾವು ಯಾರ ಪರವಹಿಸಿಕೊಳ್ಳುವುದಿಲ್ಲ. ಇನ್ನು ಇಂತಹ ವಿಷಯಗಳು ಪಕ್ಷಕ್ಕೆ ಮಾತ್ರವಲ್ಲದೆ ಸಮಾಜಕ್ಕೆ ಮುಜುಗರವನ್ನುಂಟು ಮಾಡುತ್ತದೆ ಎಂದರು.

#HDkumarswami #Pendrive #Hassansexscandal #PrajwalRevanna’s #MPElection #CM

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ…

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments