ಶಿವಮೊಗ್ಗ: ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಶೀಘ್ರವೇ ಗುಣಮುಖರಾಗಿ, ರಾಜ್ಯಕ್ಕೆ ಮರಳಲಿ ಎಂದು ಶಿವಮೊಗ್ಗದಲ್ಲಿಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಎಂ.ಶ್ರೀಕಾಂತ್ ಅಭಿಮಾನಿ ಬಳಗದಿಂದ ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಅಮೇರಿಕಾಕ್ಕೆ ತೆರಳಿದ್ದು, ಇಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಚಿಕಿತ್ಸೆಗಾಗಿ ಕಳೆದ ವಾರ ಅಮೇರಿಕಾಕ್ಕೆ ತೆರಳಿರುವ ಶಿವಣ್ಣ, ಜನವರಿ ತಿಂಗಳ ಅಂತ್ಯದಲ್ಲಿ ರಾಜ್ಯಕ್ಕೆ ವಾಪಸ್ ಬರಲಿದ್ದಾರೆ.
ಈ ಹಿನ್ನೆಲೆಯಲ್ಲಿ ಶ್ರೀಕಾಂತ್ ಅಭಿಮಾನಿ ಬಳಗದಿಂದ ಪೂಜೆ ಸಲ್ಲಿಸಿದ್ದು, ಬೇಗನೆ ಗುಣಮುಖರಾಗಿ ರಾಜ್ಯಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಮಂಜುನಾಥ್, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
C News TV Kannada News Online in cnewstv