Breaking News

ಕಾಡಾನೆ ಬಳಿಕ ಚಿರತೆ ಹಾವಳಿ: ಗುಬ್ಬಿಗಾ ಗ್ರಾಮದಲ್ಲಿ ನಾಯಿ ಹೊತ್ತೊಯ್ದ ಚಿರತೆ

ಶಿವಮೊಗ್ಗ: ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೊಯ್ದಿರುವ ಘಟನೆ ಗುಬ್ಬಿಗಾ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಯನ್ನು ಎತ್ತಿಕೊಂಡು ಹೋಗಿದೆ.
ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲ ಬಳಿಯೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ.
ಇಂದು ಬೆಳಿಗ್ಗೆ ನಾಯಿ ಕಾಣಿಸದಿರುವಾಗ ಮನೆಯ ಸಿಸಿ ಕ್ಯಾಮರವನ್ನು ಪರಿಶೀಲಿಸಿದ್ದು, ಚಿರತೆ ಬಂದು ನಾಯಿಯನ್ನು ಹೊತ್ತೊಯ್ದಿರುವುದು ಗಮನಕ್ಕೆ ಬಂದಿದೆ.
ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಈಗಾಗಲೇ ಆನೆಗಳ ಹಾವಳಿಯಿಂದ ಸ್ಥಳೀಯರು ಕಂಗೆಟ್ಟಿದ್ದು, ಇದೀಗ ಚಿರತೆ ಕಾಣಿಸಿಕೊಂಡಿದ್ದರಿಂದ ಆತಂಕಕ್ಕೊಳಗಾಗಿದ್ದಾರೆ.

Leave a Reply

Your email address will not be published. Required fields are marked *

*