ಶಿವಮೊಗ್ಗ: ನಗರ ಹೊರವಲಯದ ತ್ಯಾವರೆಕೊಪ್ಪ ಮೃಗಾಲಯದಲ್ಲಿದ್ದ ಏಕೈಕ ಗಂಡು ಹುಲಿ ‘ವಿಜಯ್'(17) ಸಾವನ್ನಪ್ಪಿದೆ.
ವಯೋಸಹಜವಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹುಲಿ ವಿಜಯ್ ನಿನ್ನೆ ಮೃತಪಟ್ಟಿದೆ.
ತ್ಯಾವರೆಕೊಪ್ಪ ಮೃಗಾಲಯದಲ್ಲೇ ಜನಿಸಿದ್ದ ಗಂಡು ಹುಲಿ ವಿಜಯ್, ಸ್ನಾಯು ನೋವಿನಿಂದಾಗಿ ಆಹಾರವನ್ನು ತ್ಯಜಿಸಿತ್ತು. ಕಳೆದ ಒಂದು ತಿಂಗಳಿಂದ ಯಾವುದೇ ಚಟುವಟಿಕೆಯಿಲ್ಲದೇ ಇದ್ದ ಹುಲಿಯನ್ನ ಸಫಾರಿಯ ಹುಲಿ ಮನೆಯಲ್ಲಿ ಆರೈಕೆ ಮಾಡಲಾಗುತ್ತಿತ್ತು. ಆದರೇ, ಚಿಕಿತ್ಸೆ ಫಲಿಸದೇ ನಿನ್ನೆ ಹುಲಿ ವಿಜಯ್ ಮೃತಪಟ್ಟಿದ್ದು, ಮೃಗಾಲಯ ನಿಯಮಾವಳಿಯಂತೆ ಅಂತ್ಯಸಂಸ್ಕಾರವನ್ನ ನೆರವೇರಿಸಲಾಗಿದೆ.
ಇನ್ನು ಹುಲಿ ವಿಜಯ್ ಸಾವಿನಿಂದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಗಂಡು ಹುಲಿಗಳೇ ಇಲ್ಲದಂತಾಗಿದ್ದು, ಒಟ್ಟು ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿಕೆಯಾಗಿದೆ. ದಶಮಿ(17), ಸೀತಾ(16), ಪೂರ್ಣಿಮಾ(12) ಹಾಗೂ ನಿವೇದಿತಾ(12) ಎಂಬ ಹೆಣ್ಣು ಹುಲಿಗಳಿದ್ದು, ಪ್ರವಾಸಿಗರ ವೀಕ್ಷಣೆಗೆ ಲಭ್ಯವಿರಲಿವೆ.
C News TV Kannada News Online in cnewstv