Breaking News

ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ

ಹೈದರಾಬಾದ್: ನಾಯಿಗಳಿಗಾಗಿಯೇ ಮೀಸಲಾದ ದೇಶದ ಮೊದಲ ಉದ್ಯಾನವನ ಇಲ್ಲಿನ ಕೊಂಡಾಪುರ್‌ ಪ್ರದೇಶದಲ್ಲಿ ಉದ್ಘಾಟನೆಯಾಗಿದೆ. 1.3 ಎಕರೆ ಪ್ರದೇಶದಲ್ಲಿರುವ ಈ ಕೇಂದ್ರ ನಾಯಿಗಳಿಗೆ ಅನುಕೂಲವಾದ ನಡಿಗೆಪಥ, ವಿಹಾರಕ್ಕೆ ಅನುಕೂಲವಾದ ಜಾಗ, ಕ್ಲಿನಿಕ್‌ ಸಹ ಒಳಗೊಂಡಿದೆ.
ಈ ಉದ್ಯಾನವನ್ನು ತೆಲಂಗಾಣ ಮುಖ್ಯ ಕಾರ್ಯದರ್ಶಿ ಎಸ್.ಕೆ. ಜೋಶಿ ಉದ್ಘಾಟಿಸಿದರು. ‘₹1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನದಲ್ಲಿ ಸಾಕುಪ್ರಾಣಿಗಳಿಗೆ ಉಚಿತ ಲಸಿಕೆ, ಆರೋಗ್ಯ ತಪಾಸಣೆ ಮಾಡಲಾಗುತ್ತೆ. ಜತೆಗೆ ವ್ಯದ್ಯರು ಹಾಗೂ ತರಬೇತುದಾರರನ್ನು ನೇಮಕ ಮಾಡಲಾಗುವುದು’ ಎಂದು ಹೈದರಾಬಾದ್ ಪುರಸಭೆಯ ವಲಯ ಆಯುಕ್ತ ಹರಿಚಂದನ ತಿಳಿಸಿದರು.’ನಾಯಿಗಳಿಗೆ ತರಬೇತಿ ಮತ್ತು ವ್ಯಾಯಾಮಕ್ಕೆ ಅನುಕೂಲವಾದ ಉಪಕರಣ, ಈಜುಕೊಳ, ಎರಡು ಹುಲ್ಲುಗಾವಲು ಪ್ರದೇಶ, ವರ್ತುಲ ಕ್ರೀಡಾಂಗಣ, ಆಟೋಟ ಕೇಂದ್ರಗಳು ಇದರಲ್ಲಿವೆ.ದೊಡ್ಡ ಮತ್ತು ಚಿಕ್ಕದಾದ ನಾಯಿಗಳಿಗೆ ಪ್ರತ್ಯೇಕವಾದ ವ್ಯವಸ್ಥೆ ಮಾಡಲಾಗಿದೆ’ ಎಂದರು.
ಕಳೆದ ಒಂದು ವರ್ಷದಿಂದ ಈ ಉದ್ಯಾನ ನಿರ್ಮಾಣವಾಗುತ್ತಿದ್ದು, ವಾಸ್ತುಶಿಲ್ಪ ಹಾಗೂ ಶ್ವಾನಪ್ರೇಮಿಗಳ ಸಲಹೆ ಮೇರೆಗೆ ಆಧುನಿಕ ಉಪಕರಣ ಹಾಗೂ ಕೇಂದ್ರದ ವಿನ್ಯಾಸ ಮಾಡಲಾಗಿದೆ.
ಇದರ ಯಶಸ್ಸನ್ನು ಆಧರಿಸಿ, ನಗರದ ಪೂರ್ವಭಾಗದಲ್ಲಿ ಮತ್ತೊಂದು ಉದ್ಯಾನವನ ನಿರ್ಮಿಸುವ ಬಗ್ಗೆ ಯೋಜನೆ ರೂಪಿಸಲು ಜಿಎಚ್‌ಎಂಸಿ ನಿರ್ಧರಿಸಿದೆ.

 

ಕೃಪೆ, ‌ಸಂಗ್ರಹ

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments