Breaking News

ಅಪಘಾತದಲ್ಲಿ ಗಾಯಗೊಂಡಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ

ಭದ್ರಾವತಿಯ ಪೂರ್ಣಪ್ರಜ್ಞ ಶಾಲಾ ವಾಹನ ನಿನ್ನೆ ಎನ್​.ಆರ್.ಪುರದ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ವೇಳೆ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಳು. 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದರು. ಇದರಲ್ಲಿ 5ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು. ನಗರದ ವಿವಿಧ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಾ ಇದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಕ್ಕಳ ಆರೋಗ್ಯವನ್ನು ವಿಚಾರಿಸಿದರು ಹಾಗು ಮೃತ ವಿದ್ಯಾರ್ಥಿನಿ ಪೋಷಕರಿಗೆ ಸಾಂತ್ವನವನ್ನು ಹೇಳಿ ಸೂಕ್ತ ಪರಿಹಾರ ಕೊಡಿಸುವ ಭರವಸೆಯನ್ನೂ ಸಹ ಸಂಸದರು ನೀಡಿದರು..

 

Leave a Reply

Your email address will not be published. Required fields are marked *

*